ಹೈಟೆಕ್‌ ಆಗಲಿದೆ ಯಶವಂತಪುರ ನಿಲ್ದಾಣ


Team Udayavani, Feb 17, 2019, 6:23 AM IST

hytech.jpg

ಬೆಂಗಳೂರು: ಯಶವಂತಪುರ-ದೇವನಹಳ್ಳಿ ನಡುವಿನ ಡೆಮು ರೈಲು (ಸಂಖ್ಯೆ 06595/ 06596) ಸೇವೆ ಇನ್ಮುಂದೆ ಚಿಕ್ಕಬಳ್ಳಾಪುರದವರೆಗೆ ಸಂಚರಿಸಲಿದೆ. ಇದರೊಂದಿಗೆ ಯಶವಂತಪುರ ರೈಲು ನಿಲ್ದಾಣಕ್ಕೆ ಹೈಟೆಕ್‌ ಸ್ಪರ್ಶ ಸಿಗಲಿದೆ.

ಡೆಮು ರೈಲಿನ ಪ್ರಾಯೋಗಿಕ ಸೇವೆಗೆ ಶನಿವಾರ ಚಾಲನೆ ನೀಡಲಾಯಿತು. ಈ ವಿಸ್ತರಿಸಿದ ಮಾರ್ಗವು ಆವತಿಹಳ್ಳಿ, ವೆಂಕಟಗಿರಿ ಕೋಟೆ, ನಂದಿಬೆಟ್ಟ ನಿಲ್ದಾಣದ ಮೂಲಕ ಚಿಕ್ಕಬಳ್ಳಾಪುರ ತಲುಪಲಿದೆ. ಇದು ಬಹುದಿನಗಳ ಬೇಡಿಕೆ ಆಗಿತ್ತು. ಇದರಿಂದ ತಾಂತ್ರಿಕ ಶಿಕ್ಷಣ ಸಂಸ್ಥೆಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳು, ಸುತ್ತಲಿನ ರೈತರು ತಮ್ಮ ಉತ್ಪನ್ನಗಳನ್ನು ಯಶವಂತಪುರ, ಯಲಹಂಕ ಮಾರುಕಟ್ಟೆಗಳಿಗೆ ಸಾಗಿಸಲು ಅನುಕೂಲ ಆಗಲಿದೆ. 

ಈ ರೈಲು ನಿತ್ಯ ದೇವನಹಳ್ಳಿ ನಿಲ್ದಾಣದಿಂದ ಬೆಳಗ್ಗೆ 11.10ಕ್ಕೆ ಹೊರಟು, ಮಧ್ಯಾಹ್ನ 12.15ಕ್ಕೆ ಚಿಕ್ಕಬಳ್ಳಾಪುರ ತಲುಪಲಿದೆ. ಅದೇ ರೀತಿ, ಮಧ್ಯಾಹ್ನ 12.40ಕ್ಕೆ ಚಿಕ್ಕಬಳ್ಳಾಪುರದಿಂದ ಹೊರಟು, 1.08ಕ್ಕೆ ದೇವನಹಳ್ಳಿ ತಲುಪುವುದು ಎಂದು ಬೆಂಗಳೂರು ರೈಲ್ವೆ ವಿಭಾಗೀಯ ಕಚೇರಿ ಮಾಹಿತಿ ನೀಡಿದೆ. 

ಯಶವಂತಪುರ ನಿಲ್ದಾಣ ಮರುಅಭಿವೃದ್ಧಿ: ಯಶವಂತಪುರ ರೈಲು ನಿಲ್ದಾಣವನ್ನು 16.45 ಕೋಟಿ ರೂ. ವೆಚ್ಚದಲ್ಲಿ ಮರುಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಇದರಡಿ ಮೆಟ್ರೋಗೆ ಸಂಪರ್ಕ ಸೇತುವೆ, ಸೆಲ್ಫಿ ಸ್ಥಳ, ಸುಗಮ ಸಂಚಾರಕ್ಕಾಗಿ ಕಾರು, ಆಟೋ, ಬಸ್‌, ದ್ವಿಚಕ್ರ ವಾಹನಗಳಿಗೆ ನಿರ್ದಿಷ್ಟ ಲೈನ್‌ಗಳು, ಪ್ಲಾಟ್‌ಫಾರ್ಮ್ ಅಭಿವೃದ್ಧಿ, ಕಾಂಕ್ರೀಟ್‌ ಹಾಸಿನ ಹಳಿಗಳ ಬದಿಯ ಚರಂಡಿಗಳಿಗೆ ಹೊದಿಕೆ, ಕಸ ವಿಲೇವಾರಿ ಹೆಚ್ಚುವರಿ ಸೌಲಭ್ಯ, ಚಾಲನಾ ಹಾದಿ, ಸಾರ್ವಜನಿಕ ರಸ್ತೆ, ಸೌಂದಯೀìಕರಣಗೊಂಡ ಪಾದಚಾರಿ ರಸ್ತೆ, ಪಾದಚಾರಿ ಮೇಲ್ಸೇತುವೆ, ಬಸ್‌ ನಿಲ್ದಾಣ ಬರಲಿವೆ.

ಕೆಳಸೇತುವೆಗಳ ಲೋಕಾರ್ಪಣೆ: ಬಂಗಾರಪೇಟೆ-ಮಾರಿಕುಪ್ಪಂ ಮತ್ತು ಚಿಕ್ಕಬಳ್ಳಾಪುರ ಕೋಲಾರ ನಡುವೆ ಬರುವ ಆರು ರೈಲ್ವೆ ಕೆಳಸೇತುವೆಗಳ ಲೋಕಾರ್ಪಣೆ ಮಾಡಲಾಯಿತು. ಬಂಗಾರಪೇಟೆ ಮತ್ತು ಬಿಎಎಂಎಲ್‌ ನಿಲ್ದಾಣಗಳ ಬಳಿ ಕೆಳಸೇತುವೆ ನಂ.4 ಮತ್ತು 4ಎ, ಕೋರಮಂಡಲ್‌ ಹಾಗೂ ಊರುಗುಂ ಕೆಳಸೇತುವೆ ನಂ.5, ಚಾಂಪಿಯನ್‌ ಹಾಗೂ ಹುಣಸೇನಹಳ್ಳಿಯ ಕೆಳಸೇತುವೆ ನಂ.10 ಹಾಗೂ ಸಿದ್ದಘಟ್ಟ ಮತ್ತು ಹುಣಸೇನಹಳ್ಳಿ ನಡುವೆ ನಂ.82ರ ಕೆಳಸೇತುವೆಯನ್ನು ಸೇವೆಗೆ ಮುಕ್ತಗೊಳಿಸಲಾಯಿತು. 

ಬೆಂಗಳೂರು ವಿಭಾಗದಲ್ಲಿ ಬರುವ 95 ನಿಲ್ದಾಣಗಳಲ್ಲಿ ದಿವ್ಯಾಂಗರಿಗಾಗಿ 99 ಶೌಚಾಲಯಗಳನ್ನು ನಿರ್ಮಿಸಿದ್ದು, ಅವುಗಳ ಲೋಕಾರ್ಪಣೆ ಮಾಡಲಾಯಿತು. ಸಿಟಿ ರೈಲು ನಿಲ್ದಾಣದ ನಂ.9/10ರಿಂದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೆಟ್ರೋ ನಿಲ್ದಾಣಕ್ಕೆ ಪಾದಚಾರಿ ಮೇಲ್ಸೇತುವೆ ಸಂಪರ್ಕ ಕಲ್ಪಿಸಲಾಗಿದೆ. ರೈಲು ನಿಲ್ದಾಣ ಪ್ರವೇಶಿಸುವ ಮುನ್ನ ಟಿಕೆಟ್‌ ಖರೀದಿಗೆ ಈ ಮೇಲ್ಸೇತುವೆಯಲ್ಲಿ ಕೌಂಟರ್‌ ಒಂದನ್ನು ತೆರೆಯಲಾಗಿದೆ. 

ನಗರದ 80 ಕಿ.ಮೀ. ಉದ್ದದ ರೈಲು ಮಾರ್ಗದಲ್ಲಿ ಆಟೋಮ್ಯಾಟಿಕ್‌ ಸಿಗ್ನಲಿಂಗ್‌ ವ್ಯವಸ್ಥೆ ಅಳವಡಿಸಲು ಉದ್ದೇಶಿಸಿದ್ದು, ಈ ಪೈಕಿ ಮೊದಲ ಹಂತದಲ್ಲಿ 20 ಕಿ.ಮೀ. ಉದ್ದದ ಬೆಂಗಳೂರು ಸಿಟಿ-ಕಂಟೋನ್‌ಮೆಂಟ್‌ ರೈಲು ನಿಲ್ದಾಣ-ಬೈಯಪ್ಪನಹಳ್ಳಿ-ವೈಟ್‌ಫೀಲ್ಡ್‌ ನಡುವೆ ಬಹುತೇಕ ಪೂರ್ಣಗೊಂಡಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದರು.

ಬೆಂಗಳೂರಿನಿಂದ ಹೊಸೂರು, ತುಮಕೂರು, ಮೈಸೂರು, ಇಂದುಪುರ ಮತ್ತಿತರ ಮಾರ್ಗಗಳಲ್ಲೂ ಆಟೋಮ್ಯಾಟಿಕ್‌ ಸಿಗ್ನಲಿಂಗ್‌ ಅಳವಡಿಸಲು ಉದ್ದೇಶಿಸಿದ್ದು, ಉಪನಗರ ರೈಲು ಯೋಜನೆ ಅಡಿ ಕೈಗೆತ್ತಿಕೊಳ್ಳಲಾಗುವುದು ಎಂದರು.

ಟಾಪ್ ನ್ಯೂಸ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.