ಬಯೋಮೆಟ್ರಿಕ್‌ನಿಂದ ಸಾರ್ವಜನಿಕರಿಗೆ ಸಮಸ್ಯೆ


Team Udayavani, Feb 18, 2019, 6:18 AM IST

bio-bande.jpg

ಬೆಂಗಳೂರು: ಪಡಿತರ ಆಹಾರ ವಿತರಣೆಗೆ ಬಯೋಮೆಟ್ರಿಕ್‌ ಪದ್ಧತಿ ಕಡ್ಡಾಯಗೊಳಿಸಿರುವುದರಿಂದ ನಾಗರಿಕರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದ್ದು, ಸಂಬಂಧಪಟ್ಟ ಇಲಾಖೆಯು ಈ ನಿಯಮದ ಸಾಧಕ ಬಾಧಕಗಳ ಅಧ್ಯಯನ ನಡೆಸಬೇಕು ಎಂದು ಸಹಕಾರ ಸಚಿವ ಬಂಡೆಪ್ಪ ಖಾಶೆಂಪೂರ ಹೇಳಿದರು.

ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಶನಿವಾರ ಆಯೋಜಿಸಿದ್ದ “ಸರ್ಕಾರಕ್ಕೆ ಕೃತಜ್ಞತಾ ಸಮರ್ಪಣೆ ಹಾಗೂ ರಾಜ್ಯಮಟ್ಟದ ಸಮ್ಮೇಳನ’ವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಯೋಮೆಟ್ರಿಕ್‌ ಅಳವಡಿಕೆಯಿಂದ ಕೂಲಿ ಕಾರ್ಮಿಕರು ದಿನದ ಕೆಲಸ ಬಿಟ್ಟು ಸಾಲುಗಟ್ಟಿ ನಿಲ್ಲುವಂತಾಗಿದೆ.

ಕೆಲ ಜನರು ನಿಗದಿತ ಸಮಯಕ್ಕೆ ಪಡಿತರ ಪಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ, ಬಯೋಮೆಟ್ರಿಕ್‌ ಪದ್ಧತಿಯನ್ನು ರದ್ದುಗೊಳಿಸಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದ್ದು, ಈ ಬಗ್ಗೆ ಸರ್ಕಾರದ ಮಟ್ಟದಲ್ಲೂ ಚಿಂತನೆ ನಡೆದಿದೆ ಎಂದು ಹೇಳಿದರು.

ನ್ಯಾಯಬೆಲೆ ಅಂಗಡಿಯಲ್ಲಿ ಬಯೋಮೆಟ್ರಿಕ್‌ ಅಳವಡಿಕೆಯಿಂದ ಪ್ರತಿ ತಿಂಗಳು 5.60 ಕೋಟಿ ರೂ.ಪಡಿತರ ಆಹಾರ ಉಳಿಯುತ್ತಿದೆ. ಉಳಿತಾಯವಾಗುವ ಈ ಪಡಿತರಿಂದ ಸರ್ಕಾರಕ್ಕೆ ಬಹುಮೊತ್ತದ ಲಾಭ ಆಗುತ್ತಿಲ್ಲ. ಆದರೆ, ಸೂಕ್ತ ಸಮಯಕ್ಕೆ, ಕಡ್ಡಾಯವಾಗಿ ಬಯೋಮೆಟ್ರಿಕ್‌ ಒದಗಿಸಲು ಕುಟುಂಬಸ್ಥರಿಗೆ ಸಾಧ್ಯವಾಗುತ್ತಿಲ್ಲ.

ಹೀಗಾಗಿ, ಸಾಕಷ್ಟು ಫ‌ಲಾನುಭವಿಗಳು ವಂಚಿತರಾಗುತ್ತಿದ್ದಾರೆ. ಈ ಬಗ್ಗೆ ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆ ಅಧ್ಯಯನದ ನಡೆಸಿ ನೈಜ ಸ್ಥಿತಿಗತಿ ಏನು ಎಂಬ ವರದಿ ತರಿಸಿಕೊಂಡು ಮುಂದಿನ ಕ್ರಮ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು. ಪಡಿತರ ಆಹಾರಕ್ಕೆ ಪ್ರತಿ ಕ್ವಿಂಟಲ್‌ಗೆ ವಿತರಿಸುತ್ತಿರುವ ಕಮಿಷನ್‌ ಹೆಚ್ಚಿಸುವ ಬಗ್ಗೆ ಇಲಾಖೆಯ ಸಚಿವರು ಹಾಗೂ ಮುಖ್ಯಮಂತ್ರಿಗಳ ಗಮನಕ್ಕೆ ತರುತ್ತೇನೆ ಎಂದು ಹೇಳಿದರು.

ಸಂಸದ ಎಲ್‌.ಆರ್‌.ಶಿವರಾಮೇಗೌಡ ಮಾತನಾಡಿ, ಪಡಿತರ ವಿತರಕರ ಸಮಸ್ಯೆಗಳನ್ನು ಸರ್ಕಾರ ಅರಿತುಕೊಳ್ಳಬೇಕು. ಕೇವಲ ಪಡಿತರ ವಿತರಣೆಯಲ್ಲಿ ಅಕ್ರಮ ಹಾಗೂ ಭ್ರಷ್ಟಚಾರ ನಡೆಯುತ್ತಿದೆ ಎಂದು ಆರೋಪ ಮಾಡಿ ತನಿಖೆ ಮಾಡುವ ಬದಲು, ಅಕ್ರಮ ತಡೆಗಟ್ಟಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಆ ನಿಟ್ಟಿನಲ್ಲಿ ಪಡಿತರ ವಿತರಕರಿಗೆ ಮಾಸಿಕ ಇಂತಿಷ್ಟು ಹಣವನ್ನು ಸಂಬಳ ರೂಪದಲ್ಲಿ ನೀಡಬೇಕು ಎಂದು ಹೇಳಿದರು.

ಸಂಘದ ರಾಜ್ಯಾಧ್ಯಕ್ಷ ಡಾ.ಟಿ.ಕೃಷ್ಣಪ್ಪ ಮಾತನಾಡಿ, ಕೇಂದ್ರ ಸರ್ಕಾರ ಪಡಿತರ ವ್ಯವಸ್ಥೆಯನ್ನೇ ತೆಗೆದು ನೇರವಾಗಿ ಜನರ ಬ್ಯಾಂಕ್‌ ಖಾತೆಗೆ ಹಣ ಹಾಕುತ್ತೇವೆ ಎಂದು ಹೇಳುತ್ತಿದೆ. ಈ ನಡೆಯಿಂದ ಬಡವರ ಹಸಿವು ನೀಗಿಸಲು ಸಾಧ್ಯವಿಲ್ಲ. ನೇರ ಹಣ ನೀಡಿ ಜನರನ್ನು ಸೋಮಾರಿಯಾಗಲು ಅಥವಾ ದುಶ್ಚಟಗಳಿಗೆ ಬಲಿಯಾಗಲು ಪ್ರಚೋದನೆ ನೀಡಿದಂತಾಗುತ್ತದೆ.

ಕೇಂದ್ರ ಸರ್ಕಾರವು ತನ್ನ ಈ ನಿರ್ಧಾರವನ್ನು ಬದಲಾಯಿಸಬೇಕು. ಜತೆಗೆ ರಾಜ್ಯ ಸರ್ಕಾರ ನ್ಯಾಯಬೆಲೆ ಅಂಗಡಿ ಮಾಲೀಕರು ಅಕಾಲಿಕವಾಗಿ ಮೃತಪಟ್ಟರೆ ಅವರ ಹೆಸರಿನಲ್ಲಿರುವ ಅಂಗಡಿ ಅನುಮತಿಯನ್ನು ಕುಟುಂಬಸ್ಥರಿಗೆ ನೀಡಬೇಕು. ಪಡಿತರ ಸಾಗಣೆ ಸಾರಿಗೆ ಹಾಗೂ ಪೂರೈಕೆಯ ವೆಚ್ಚ ದುಬಾರಿಯಾಗುತ್ತಿದೆ. ಸರ್ಕಾರ ಪ್ರಸ್ತುತ ನೀಡುತ್ತಿರುವ ಕಮಿಷನ್‌ ಹೆಚ್ಚಿಸಬೇಕು ಎಂಬ ಇತ್ಯಾದಿ ಬೇಡಿಕೆಗಳ ಸಲ್ಲಿಸಿದರು. 

ಆಹಾರ ಪೂರೈಕೆ ಇಲಾಖೆಯ ಆಯುಕ್ತ ಟಿ.ಎಚ್‌.ಎಂ.ಕುಮಾರ್‌, ಪಡಿತರ ವಿತರಕರ ಒಕ್ಕೂಟದ ರಾಷ್ಟ್ರೀಯ ಕಾರ್ಯದರ್ಶಿ ಬಿಸೆಂಬರ್‌ ಬಸು, ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶಿವಪ್ರಸಾದ್‌, ಉಪಾಧ್ಯಕ್ಷರಾದ ಡಿ.ತಾಯಣ್ಣ, ಮತ್ತಿತರರು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.