ಸಾರಸ್‌ಗೆ ಕಾರ್ಬನ್‌ ಫೈಬರ್‌ ಬ್ರೇಕ್‌


Team Udayavani, Feb 22, 2019, 6:22 AM IST

saras.jpg

ಬೆಂಗಳೂರು: ರಾಡಾರ್‌ ತಂತ್ರಜ್ಞಾನ ಹಾಗೂ ಹೊಸ ಬಗೆಯ ನಿಯಂತ್ರಣ ಉಪಕರಣಗಳನ್ನು ಅಳವಡಿಸುವ ಮೂಲಕ 19 ಆಸನಗಳ “ಸಾರಸ್‌’ ಯುದ್ಧ ವಿಮಾನ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ನ್ಯಾಷನಲ್‌ ಏರೋನಾಟಿಕ್ಸ್‌ ಲ್ಯಾಬೋರೇಟರಿ ಪ್ರಧಾನ ನಿರ್ದೇಶಕ ಡಾ. ಶೇಖರ್‌ ಸಿ.ಮಂಡೆ ತಿಳಿಸಿದರು.

ಏರೋ ಇಂಡಿಯಾದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಸ್‌ಐಆರ್‌-ಎನ್‌ಎಎಲ್‌ನಿಂದ ನವೀಕೃತಗೊಂಡ ಸಾರಸ್‌ ವಿಮಾನ ಇದೇ ಮೊದಲ ಬಾರಿಗೆ ಹಾರಾಟ ನಡೆಸಿ ಸಾಮರ್ಥ್ಯ ಪ್ರದರ್ಶಿಸಿದೆ.

ಪ್ರಸ್ತುತ ಉಡಾನ್‌ ಯೋಜನೆಗೆ ಪೂರಕವಾಗಿ ಸಿದ್ಧಗೊಂಡಿರುವ 14 ಆಸನಗಳ ಸಾಮರ್ಥ್ಯದ ಈ ವಿಮಾನವು ರಕ್ಷಣೆ ಹಾಗೂ ನಾಗರಿಕ ವಿಮಾನಯಾನ ಎರಡರಲ್ಲಿಯೂ ಮಹತ್ವದ ಪಾತ್ರ ನಿರ್ವಹಿಸಲಿದೆ. ಇನ್ನು ಮುಂದಿನ ದಿನಗಳಲ್ಲಿ 17-19 ಆಸನಗಳ ಸಾಮರ್ಥ್ಯದ ಸಾರಸ್‌ ಕೂಡ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಹೇಳಿದರು.

2018ರ ಜನವರಿಯಲ್ಲಿ ಈ ವಿಮಾನವು ಎಚ್‌ಎಎಲ್‌ ವಿಮಾನ ನಿಲ್ದಾಣದಲ್ಲಿ ಪರೀಕ್ಷಾರ್ಥ ಹಾರಾಟ ನಡೆಸಿ ಯಶಸ್ವಿಯಾಗಿತ್ತು. ಬಳಿಕ ಭಾರತೀಯ ವಾಯುಸೇನೆ ಇದನ್ನು ಖರೀದಿಸಲು ಒಪ್ಪಂದ ಮಾಡಿಕೊಂಡಿತ್ತು. ಕಳೆದ ಬಾರಿಯ ಏರೋ ಇಂಡಿಯಾ ಪ್ರದರ್ಶನದಲ್ಲಿ ಸಾರಸ್‌ ಅನ್ನು ಪ್ರದರ್ಶನಕ್ಕೆ ಮಾತ್ರ ಇಡಲಾಗಿತ್ತು. ಎಲ್‌ಸಿಎ-ತೇಜಸ್‌ ವಿನ್ಯಾಸದಲ್ಲೂ ಎನ್‌ಎಎಲ್‌ ಪ್ರಮುಖ ಪಾತ್ರ ನಿರ್ವಹಿಸಿದೆ ಎಂದರು.

ಈಗಾಗಲೇ ಹನ್ಸಾ ನ್ಯೂಜನರೇಶನ್‌ ವಿಮಾನವನ್ನು ಎನ್‌ಎಎಲ್‌ ಸಿದ್ಧಪಡಿಸುತ್ತಿದ್ದು, 2019ರ ಸೆಪ್ಟಂಬರ್‌ ವೇಳಗೆ ಪರೀûಾರ್ಥ ಹಾರಾಟ ಮಾಡಲಿದೆೆ. 2020ರ ವೇಳೆಗೆ ಈ ವಿಮಾನಕ್ಕೆ ಡಿಜಿಸಿಎ ಪ್ರಮಾಣಪತ್ರ ಪಡೆಯುವ ಗುರಿ ಹೊಂದಲಾಗಿದೆ. ಪೈಲಟ್‌ಗಳ ತರಬೇತಿಯಲ್ಲೂ ಹನ್ಸಾ ಪ್ರಮುಖ ಪಾತ್ರವಹಿಸಲಿದೆ ಎಂದು ತಿಳಿಸಿದರು.

ಏರೋ ಇಂಡಿಯಾದ ಕಳೆದ ಆವೃತ್ತಿಯಲ್ಲಿ ಕೇವಲ ಪ್ರದರ್ಶನಕ್ಕೆ ಸೀಮಿತವಾಗಿದ್ದ, ಸಾರಸ್‌ ಈ ಬಾರಿ ಪ್ರದರ್ಶನ ನೀಡಿತು. ಮೊದಲ ದಿನ ಬೆಳಗ್ಗೆ ತರಬೇತಿ ಹಾರಾಟ ನಡೆಸಿದ ವಿಮಾನ, ಎರಡನೇ ದಿನವಾದ ಗುರುವಾರ ಜನರ ವೀಕ್ಷಣೆಗಾಗಿ ಎರಡು ಬಾರಿ ಹಾರಾಟ ನಡೆಸಿತು.

ವಿಮಾನಗಳಿಗೆ ಕಾರ್ಬನ್‌ ಫೈಬರ್‌ ಬ್ರೇಕ್‌ ತಂತ್ರಜ್ಞಾನ: ಬೈಕ್‌ಗಳ ಡಿಸ್ಕ್ ಬ್ರೇಕ್‌ ಮಾದರಿಯಲ್ಲಿ ಹೆಲಿಕಾಪ್ಟರ್‌ನ ರೆಕ್ಕೆ ಚಲನೆಯನ್ನು ನಿಯಂತ್ರಿಸುವ ಬ್ರೇಕ್‌ ಪ್ಯಾಡ್‌ ಹಾಗೂ ಡಿಸ್ಕ್ಗೆ ಕಬ್ಬಿಣದ ಬದಲು ಕಾರ್ಬನ್‌ ಫೈಬರ್‌ ಬಳಸುವ ಹೊಸ ವಿಧಾನವನ್ನು ಎನ್‌ಎಎಲ್‌ ಆವಿಷ್ಕರಿಸಿದೆ. ಪ್ರಸ್ತುತ ಹೆಲಿಕಾಪ್ಟರ್‌ ಚಲಿಸುವಾಗ ವೇಗವನ್ನು ನಿಯಂತ್ರಿಸಲು ಕಬ್ಬಿಣದಿಂದ ತಯಾರಿಸಿದ ವೃತ್ತಾಕಾರದ ತಟ್ಟೆ ಇದೆ.

ಇವುಗಳಲ್ಲಿ ಬೇಗನೆ ಬಿಸಿಯಾಗುವ, ತುಕ್ಕು ಹಿಡಿಯುವ ಸಮಸ್ಯೆ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ, ಕಾರ್ಬನ್‌ ಫೈಬರ್‌ನಿಂದ ಈ ತಟ್ಟೆ ತಯಾರಿಸಲಾಗಿದೆ. ಈಗಾಗಲೇ ಎಚ್‌ಎಎಲ್‌ ತಯಾರಿಸುತ್ತಿರುವ ಹೆಲಿಕಾಪ್ಟರ್‌ಗಳಿಗೆ ಈ ರೀತಿಯ ಕಾರ್ಬನ್‌ ಫೈಬರ್‌ ತಟ್ಟೆ ಅಳವಡಿಸಲು ಮಾತುಕತೆ ನಡೆದಿದೆ ಎಂದು ಎನ್‌ಎಎನ್‌ ಅಧಿಕಾರಿಗಳು ತಿಳಿಸಿದರು.

ಟಾಪ್ ನ್ಯೂಸ್

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.