ಬೆಳ್ಳಂಬೆಳಗ್ಗೆ ರೌಡಿಗಳ ಮನೆ ಮೇಲೆ ದಾಳಿ


Team Udayavani, Mar 11, 2019, 6:30 AM IST

bellam-bell.jpg

ಬೆಂಗಳೂರು: ಕುಖ್ಯಾತ ರೌಡಿ ಲಕ್ಷ್ಮಣನ ಭೀಕರ ಹತ್ಯೆ ಹಾಗೂ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಶ್ಚಿಮ ವಲಯ ಪೊಲೀಸರು ಭಾನುವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ 150ಕ್ಕೂ ಹೆಚ್ಚು ರೌಡಿಶೀಟರ್‌ಗಳನ್ನು ವಶಕ್ಕೆಪಡೆದುಕೊಂಡಿದ್ದಾರೆ.

ಇತ್ತೀಚೆಗೆ ಪಶ್ಚಿಮ ವಲಯದಲ್ಲಿ ರೌಡಿಗಳು ಹೆಚ್ಚು ಸಕ್ರಿಯರಾಗಿದ್ದರು. ಅಲ್ಲದೆ, ಲಕ್ಷ್ಮಣನ ಭೀಕರ ಹತ್ಯೆ ಬಳಿಕ ಸಣ್ಣ-ಪುಟ್ಟ ರೌಡಿಗಳು ಅಕ್ರಮ ಚಟುವಟಿಕೆಗಳಲ್ಲಿ ತೊಡಗುತ್ತಿರುವ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರ ತಂಡ ಮುಂಜಾನೆ 4 ಗಂಟೆಯಿಂದ ಬೆಳಗ್ಗೆ 9 ಗಂಟೆವರೆಗೆ ಎಲ್ಲ ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿರುವ ರೌಡಿಶೀಟರ್‌ಗಳ ಮನೆಗಳ ಮೇಲೆ ದಾಳಿ ನಡೆಸಿದರು.

ಈ ವೇಳೆ ಕೆಲ ರೌಡಿಗಳು ಅಕ್ರಮವಾಗಿ ಇಟ್ಟುಕೊಂಡಿದ್ದ ಮಾರಕಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ನಂತರ ಠಾಣೆಗೆ ಕರೆತಂದು ರೌಡಿಶೀಟರ್‌ಗಳ ಪ್ರಸ್ತುತ ವೃತ್ತಿ, ಪ್ರವೃತ್ತಿಗಳು ಹಾಗೂ ಅವರು ಬಳಸುತ್ತಿರುವ ಮೊಬೈಲ್‌ ನಂಬರ್‌ಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲಾಯಿತು.

ಹಿರಿಯ ಅಧಿಕಾರಿಗಳ ಸಮ್ಮುಖದಲ್ಲಿ ಮುಚ್ಚಳಿಕೆ ಪತ್ರ ಬರೆಸಿಕೊಂಡು, ಮುಂದಿನ ದಿನಗಳಲ್ಲಿ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗದಂತೆ ಎಚ್ಚರಿಕೆ ನೀಡಿದರು. ಅಲ್ಲದೆ, ಒಂದು ವೇಳೆ ಅಕ್ರಮ ಚಟುವಟಿಕೆ ನಡೆಸುವ ಇತರೆ ವ್ಯಕ್ತಿಗಳ ಜತೆ ಕೈಜೋಡಿಸಿದರೂ ಕಠಿಣ ಕ್ರಮಕೈಗೊಳ್ಳಬೇಕಾಗುತ್ತದೆ ಎಚ್ಚರಿಕೆ ನೀಡಲಾಯಿತು.

ಇತ್ತೀಚೆಗೆ ರೌಡಿಶೀಟರ್‌ ಲಕ್ಷ್ಮಣನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲಿ ಬರ್ಬರವಾಗಿ ಹತ್ಯೆಗೈದಿದ್ದರು. ಈ ಹಿನ್ನೆಲೆಯಲ್ಲಿ ನಗರದಲ್ಲಿ ಮತ್ತೆ ರೌಡಿಗಳು ಸಕ್ರಿಯರಾಗಿರುವ ಸುಳಿವು ಸಿಕ್ಕಿತ್ತು. ಮತ್ತೂಂದೆಡೆ ಲೋಕಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವ ಎಲ್ಲ ವ್ಯಕ್ತಿಗಳ ಮನೆಗಳ ಮೇಲೆ ದಾಳಿ ನಡೆಸಿ,

ಅವರ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ಸಂಗ್ರಹಿಸುವಂತೆ ನಗರ ಪೊಲೀಸ್‌ ಆಯುಕ್ತ ಟಿ.ಸುನಿಲ್‌ ಕುಮಾರ್‌ ಆದೇಶಿಸಿದ್ದರು. ಈ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಹೇಳಿದರು. ರೌಡಿಶೀಟರ್‌ಗಳು ಮಾತ್ರವಲ್ಲದೆ, ದರೋಡೆಕೋರರು, ಮೊಬೈಲ್‌ ಕಳ್ಳರು, ಸರಗಳ್ಳರು ಹಾಗೂ ಪದೇ ಪದೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗುವ ವ್ಯಕ್ತಿಗಳನ್ನು ವಶಕ್ಕೆ ಪಡೆದು ಮುನ್ನೆಚ್ಚರಿಕೆ ಕ್ರಮವಾಗಿ ಎಚ್ಚರಿಕೆ ನೀಡಲಾಗಿದೆ ಎಂದು ಪೊಲೀಸರು ಹೇಳಿದರು.

ಈ ಕುರಿತು ಪ್ರತಿಕ್ರಿಯೆ ನೀಡಿದ ಪಶ್ಚಿಮ ವಲಯ ಡಿಸಿಪಿ ರವಿ ಡಿ. ಚೆನ್ನಣ್ಣನವರ್‌, ಲೋಕಸಭೆ ಚುನಾವಣೆ ಹಿನ್ನೆಲೆ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಅಕ್ರಮ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ ಸುಮಾರು 150ಕ್ಕೂ ಹೆಚ್ಚು ರೌಡಿಶೀಟರ್‌ಗಳ ಮೇಲೆ ಮನೆಗಳ ಮೇಲೆ ದಾಳಿ ನಡೆಸಿ ಎಚ್ಚರಿಕೆ ನೀಡಲಾಗಿದೆ ಎಂದರು.

ಟಾಪ್ ನ್ಯೂಸ್

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ಜೆಡಿಎಸ್‌ -ಬಿಜೆಪಿ ಬಿ ಟೀಮ್‌ ಹೌದು: ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ನೇಹಾ ಅಂತ್ಯಕ್ರಿಯೆ, ಹಂತಕನ ಹುಟ್ಟೂರಲ್ಲಿ ಬಂದ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌

ರಾಜ್ಯದಲ್ಲಿ ಎನ್‌ಕೌಂಟರ್‌ ಕಾನೂನು ಜಾರಿ ಅವಶ್ಯ: ಸಂತೋಷ್‌ ಲಾಡ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

ಲಿಂಗಾಯತರಿಗೆ ಸಿಎಂ ಹುದ್ದೆ ವಂಚಿಸಿದ್ದು ಕುಮಾರಸ್ವಾಮಿ: ಸಚಿವ ಎಂ.ಬಿ. ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.