ನ್ಯೂನತೆ ಇರುವ ಭ್ರೂಣ ತೆಗೆಸಲು ಕೋರ್ಟ್‌ ಅವಕಾಶ


Team Udayavani, Mar 13, 2019, 6:46 AM IST

highcourt2.jpg

ಬೆಂಗಳೂರು: ವೈದ್ಯಕೀಯ ಕಾರಣಗಳಿಂದ ಅತ್ಯಾಚಾರಕ್ಕೊಳಗಾದ ಅಪ್ರಾಪ್ತೆಯೊಬ್ಬಳ 24 ವಾರದ ಭ್ರೂಣ ತೆಗೆಸಲು ಹೈಕೋರ್ಟ್‌ ಅವಕಾಶ ನೀಡಿದ್ದು, ಅತ್ಯಾಚಾರ ಪ್ರಕರಣ ತನಿಖೆ ದೃಷ್ಟಿಯಿಂದ ಭ್ರೂಣದ ಡಿಎನ್‌ಎ ಪರೀಕ್ಷೆ ಮಾಡುವಂತೆ ಬೆಂಗಳೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಗೆ ಮಂಗಳವಾರ ನಿರ್ದೇಶನ ನೀಡಿದೆ.

ಅತ್ಯಾಚಾರಕ್ಕೊಳಗಾಗಿ ಗರ್ಭಧರಿಸಿದ ಚಿತ್ರದುರ್ಗ ಮೂಲದ 17 ವರ್ಷದ ಅಪ್ರಾಪ್ತೆ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಆಲೋಕ್‌ ಆರಾಧೆ, ಸಂತ್ರಸ್ತೆಯ ಮನವಿ ಪುರಸ್ಕರಿಸಿದ್ದು, ತಜ್ಞ ವೈದ್ಯರ ವರದಿ ಆಧರಿಸಿ ಗರ್ಭಪಾತಕ್ಕೆ ಅವಕಾಶ ಕಲ್ಪಿಸಿದೆ.

ಈ ಹಿಂದೆ ಅರ್ಜಿ ವಿಚಾರಣೆಗೆ ಬಂದಿದ್ದಾಗ, ಅಪ್ರಾಪ್ತೆಯ ತಪಾಸಣೆ ನಡೆಸಿದ ವರದಿ ಸಲ್ಲಿಸುವಂತೆ ವಾಣಿ ವಿಲಾಸ ಆಸ್ಪತ್ರೆ ಹಾಗೂ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ತಜ್ಞ ವೈದ್ಯರ ತಂಡಕ್ಕೆ ನ್ಯಾಯಪೀಠ ನಿರ್ದೇಶನ ನೀಡಿತ್ತು. ಅದರಂತೆ, ಮಂಗಳವಾರ ಬೆಂಗಳೂರು ವೈದ್ಯಕೀಯ ಕಾಲೇಜು ಹಾಗೂ ಸಂಶೋಧನಾ ಸಂಸ್ಥೆಯ ಪರ ವಕೀಲೆ ಎಂ. ಸಿ. ನಾಗಶ್ರೀ ಮುಚ್ಚಿದ ಲಕೋಟೆಯಲ್ಲಿ ವರದಿಯನ್ನು ನ್ಯಾಯಪೀಠಕ್ಕೆ ಸಲ್ಲಿಸಿದರು.

ಅರ್ಜಿದಾರಳ ಭ್ರೂಣಕ್ಕೆ ಸದ್ಯ 24 ವಾರವಾಗಿದೆ. ಭ್ರೂಣದ ತಲೆಭಾಗದಲ್ಲಿ ಸೀಳು ಕಾಣಿಸಿಕೊಂಡಿದೆ. ಮಗು ಜನಿಸಿದರೂ ಭವಿಷ್ಯದಲ್ಲಿ ಮತ್ತೆ ಆರೋಗ್ಯ ಸಮಸ್ಯೆ ಎದುರಾಗಬಹುದು. ಆದ್ದರಿಂದ ಗರ್ಭಪಾತ ಮಾಡಿಸುವುದೇ ಸೂಕ್ತ ಎಂದು ವರದಿಯಲ್ಲಿ ಉಲ್ಲೇಖೀಸಲಾಗಿತ್ತು. ಅದರಂತೆ,  ಹಾಗಾಗಿ, ವೈದ್ಯಕೀಯ ಕಾರಣಗಳನ್ನು ಪರಿಗಣಿಸಿ ಆಕೆಯ ದೈಹಿಕ ಮತ್ತು ಮಾನಸಿಕ ಆರೋಗ್ಯದ ದೃಷ್ಟಿಯಿಂದ ಗರ್ಭಪಾತಕ್ಕೆ ಅವಕಾಶ ನೀಡಲು ಅರ್ಜಿದಾರ ಸಂತ್ರಸ್ತೆಯ ಮನವಿಯನ್ನು ಪುರಸ್ಕರಿಸಲಾಗುತ್ತಿದೆ.

ಅತ್ಯಾಚಾರ ಪ್ರಕರಣದ ತನಿಖೆ ದೃಷ್ಟಿಯಿಂದ ಗರ್ಭದಿಂದ ಹೊರ ತೆಗೆದ ಭ್ರೂಣವನ್ನು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯು ಸಂರಕ್ಷಿಸಬೇಕು ಹಾಗೂ ಅದರ ಡಿಎನ್‌ಎ ಪರೀಕ್ಷೆ ಮಾಡಬೇಕು. ಸಂಬಂಧಪಟ್ಟ ಠಾಣೆಯ ಪೊಲೀಸ್‌ ಇನ್ಸ್‌ಪೆಕ್ಟರ್‌ ಡಿಎನ್‌ಎ ಪರೀಕ್ಷೆಯ ವರದಿ ಪಡೆದುಕೊಳ್ಳಬೇಕು ಎಂದು ಆದೇಶಿಸಿತು.

ಅಲ್ಲದೇ, ಸಂತ್ರಸ್ತ ಅರ್ಜಿದಾರಳಿಗೆ ಪರಿಹಾರ ನೀಡುವ ಮತ್ತು ಗರ್ಭಪಾತಕ್ಕೆ ತಗಲುವ ವೆಚ್ಚ ಭರಿಸಲು ತುರ್ತಾಗಿ 70 ಸಾವಿರ ರೂ. ಹಣ ಬಿಡುಗಡೆ ಮಾಡುವ ಬಗ್ಗೆ ಅಭಿಪ್ರಾಯ ತಿಳಿಸುವಂತೆ ಕರ್ನಾಟಕ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ನೋಟಿಸ್‌ ಜಾರಿ ಮಾಡಿ, ನ್ಯಾಯಪೀಠ ವಿಚಾರಣೆ ಮುಂದೂಡಿತು.

ಸಂತ್ರಸ್ತೆಯ ಅಳಲು ಏನು?: ಅತ್ಯಾಚಾರ ಪ್ರಕರಣದಿಂದ ತಾನು ಗರ್ಭ ಧರಿಸಿದ್ದೇನೆ. ಸದ್ಯ ಭ್ರೂಣಕ್ಕೆ 24 ವಾರವಾಗಿದೆ. ಆದರೆ, ವೈದ್ಯಕೀಯ ತಪಾಸಣೆ ವೇಳೆ ಭ್ರೂಣದಲ್ಲಿ “ಬೈಲಾಟೆರಲ್‌ ಓಪನ್‌ ಲಿಪ್‌ ಸ್ಕೆಜೆನ್ಸಾಲಿ (ಭ್ರೂಣದ ತಲೆಭಾಗದಲ್ಲಿ ಸೀಳು) ಎಂಬ ಸಮಸ್ಯೆ ಕಾಣಿಸಿಕೊಂಡಿದೆ. ಈ ಕಾರಣಕ್ಕೆ ಮಗು ಜನಿಸಿದ ಮೇಲೆ ತೊಂದರೆ ಆಗಲಿದೆ. ಜತೆಗೆ, ಹೆರಿಗೆ ಸಮಯದಲ್ಲಿ ತನಗೆ ಅಪಾಯವಾಗುವ ಸಾಧ್ಯತೆಯೂ ಇದೆ. ಹಾಗಾಗಿ, ವಿಶೇಷ ಪ್ರಕರಣ ಎಂದು ಪರಿಗಣಿಸಿ, ವೈದ್ಯಕೀಯ ಕಾರಣಗಳ ಆಧಾರದಲ್ಲಿ ಗರ್ಭಪಾತಕ್ಕೆ ಅನುಮತಿ ನೀಡಬೇಕು ಎಂದು ಅತ್ಯಾಚಾರ ಸಂತ್ರಸ್ತೆ ಹೈಕೋರ್ಟ್‌ಗೆ ಕೋರಿದ್ದರು.

ಟಾಪ್ ನ್ಯೂಸ್

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ

6-bng

Bengaluru: ಪೇಂಟರ್‌ ಕೊಂದು ಪೊಲೀಸ್‌ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು

5-bng

Bengaluru: ಪ್ರೀತಿಸಿ ಮದುವೆ ಆಗುವುದಾಗಿ ಅಂಗವಿಕಲ ಯುವತಿಗೆ ವಂಚನೆ

4-bng

Bengaluru: 290 ರೌಡಿಶೀಟರ್‌ಮನೆಗಳ ಮೇಲೆ ದಾಳಿ 

3-crime

Bengaluru: ಸ್ನೇಹಿತರಿಂದಲೇ ಸುಪಾರಿ ಕಿಲ್ಲರ್‌ನ ಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

10-editorial

Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.