ಮೂರು ಪಕ್ಷಗಳ ನಡುವೆ ಹಣಾಹಣಿ


Team Udayavani, Mar 18, 2019, 6:35 AM IST

mooru-paksha.jpg

ಕ್ಷೇತ್ರದ ವಸ್ತುಸ್ಥಿತಿ: ದಾಸರಹಳ್ಳಿ ವಿಧಾನಸಭಾ ಕ್ಷೇತ್ರ ಏಷ್ಯಾದ ಅತಿ ದೊಡ್ಡ ಕೈಗಾರಿಕಾ ಪ್ರದೇಶಗಳಲ್ಲಿ ಒಂದಾದ ಪೀಣ್ಯವನ್ನು ಒಳಗೊಂಡ ಕ್ಷೇತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಲ್ಲಿ ಶೇ 90ರಷ್ಟು ಮಂದಿ ವಲಸಿಗರು ನೆಲೆಸಿದ್ದಾರೆ. ಕ್ಷೇತ್ರ ಪುನರ್‌ ವಿಂಗಡಣೆ ಬಳಿಕ ನಡೆದ 2 ವಿಧಾನಸಭಾ ಚುನಾವಣೆಗಳಲ್ಲೂ ಬಿಜೆಪಿ ಅಭ್ಯರ್ಥಿಯನ್ನು ಮತದಾರರು ಬೆಂಬಲಿಸಿದ್ದರು.

ಆದರೆ, 2018ರ ವಿಧಾನ ಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅಭ್ಯರ್ಥಿಯನ್ನು ಕೈ ಹಿಡಿದು ಅಚ್ಚರಿ ಫ‌ಲಿತಾಂಶಕ್ಕೆ ಕಾರಣರಾಗಿದ್ದರು. ಲೋಕಸಭಾ ಚುನಾವಣೆ ವಿಚಾರಕ್ಕೆ ಬಂದಾಗ ಈ ಪರಿಸ್ಥಿತಿಯಿಲ್ಲ. ಲೋಕಸಭಾ ಚುನಾವಣೆಯಲ್ಲಿ ಮತದಾರರು ಬಿಜೆಪಿಯತ್ತ ಒಲವು ತೋರಿದ್ದರು. 2014ರ ಲೋಕಸಭಾ ಚುನಾವಣೆಯಲ್ಲಿ ಶೇ.59.7ರಷ್ಟು ಮತದಾತರು ಬಿಜೆಪಿ ಬೆಂಬಲಿಸಿದ್ದರು.

ಒಟ್ಟಾರೆ 1,99,476 ಮತಗಳು ಇಲ್ಲಿ ಚಲಾವಣೆಯಾಗಿದು,ªಆ ಪೈಕಿ 1,19,021 ಮತಗಳು ಕಮಲ ಪಕ್ಷದ ಅಭ್ಯರ್ಥಿಯಾಗಿದ್ದ ಕೇಂದ್ರ ಸಚಿವ ಸದಾನಂದಗೌಡ ಅವರ ಪಾಲಾಗಿದ್ದವು. ಇವರ ಪ್ರತಿಸ್ಪರ್ಧಿ ಕಾಂಗ್ರೆಸ್‌ ಪಕ್ಷದ ಸಿ.ನಾರಾಯಣಸ್ವಾಮಿ 54,782 ಮತ್ತು ಜೆಡಿಎಸ್‌ ನಿಂದ ಅಖಾಡಕ್ಕಿಳಿದಿದ್ದ ಅಬ್ದುಲ್‌ ಅಜೀಂ 20,727 ಮತಗಳನ್ನು ಪಡೆದಿದ್ದರು.

ಈ ಬಾರಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಅವರು ಕಣಕ್ಕಿಳಿಯುವ ಸಾಧ್ಯತೆ ಇರುವುದರಿಂದ ಭಾರೀ ಪೈಪೋಟಿ ನಿರೀಕ್ಷಿಸಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಮೇಲೆ ಜೆಡಿಎಸ್‌ ಹಿಡಿತ ಸಾಧಿಸಿದ್ದು,ಆದರೆ ಪಾಲಿಕೆ ವಿಚಾರದಲ್ಲಿ ಬಿಜೆಪಿ ಪ್ರಾಬಲ್ಯ ತೋರಿದೆ. ಎಂಟು ವಾರ್ಡ್‌ ಗಳ ಪೈಕಿ 5 ವಾರ್ಡ್‌ಗಳಲ್ಲಿ ಬಿಜೆಪಿ ವಿಜಯಿಯಾಗಿದೆ. ಹಾಗೆಯೇ ಕಾಂಗ್ರೆಸ್‌ 2 ಮತ್ತು ಜೆಡಿಎಸ್‌ 1ರಲ್ಲಿ ಗೆಲುವು ಸಾಧಿಸಿದೆ.

ಪ್ರಮುಖ ಕೊಡುಗೆಗಳು
-ಚಿಕ್ಕಬಾಣಾವರ ರೈಲ್ವೆ ನಿಲ್ದಾಣದಲ್ಲಿ ಪ್ಲಾಟ್‌ ಫಾರಂಗೆ ಹೊರ ಪ್ರದೇಶಗಳ ಸಂಪರ್ಕ ಕಲ್ಪಿಸಲು ಫ‌ುಟ್‌ ಓವರ್‌ಬ್ರಿಜ್‌ ನಿರ್ಮಾಣ 
-ಸ್ತ್ರೀ ಶಕ್ತಿ ಭವನ ನಿರ್ಮಾಣ

ನಿರೀಕ್ಷೆ
-ಪೀಣ್ಯಾ ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ಆರ್ಥಿಕ ಅನುದಾನ         
-ರಸ್ತೆಗಳ ಅಭಿವೃದ್ಧಿಗೆ ಹಣ ಬಿಡುಗಡೆ 

-ವಾರ್ಡ್‌ಗಳು -8
-5 ಬಿಜೆಪಿ 
-2 ಕಾಂಗ್ರೆಸ್‌
-1 ಜೆಡಿಎಸ್‌

-6,38,190 ಜನಸಂಖ್ಯೆ
-4,38,919 ಮತದಾರರ ಸಂಖ್ಯೆ
-2,36,956 ಪುರುಷರು
-2,29,820 ಮಹಿಳೆಯರು

2014ರ ಲೋಕಸಭಾ ಚುನಾವಣೆಯಲ್ಲಿ 
-1,99,476 (52.26%) ಈ ಕ್ಷೇತ್ರದಲ್ಲಿ ಚಲಾವಣೆಯಾದ ಮತಗಳು
-1,19,021 ಮತಗಳು(59.7%) ಬಿಜೆಪಿ ಪಡೆದ ಮತಗಳು
-54,782 ಮತಗಳು (27.5%) ಕಾಂಗ್ರೆಸ್‌ ಪಡೆದ ಮತಗಳು
-20,727 ಮತಗಳು (10.4%) ಜೆಡಿಎಸ್‌ ಪಡೆದ ಮತಗಳು

2014ರ ಲೋಕಸಭೆ ಚುನಾವಣೆ ವೇಳೆ ಕ್ಷೇತ್ರದ ಚಿತ್ರಣ
-ಎಸ್‌. ಮುನಿರಾಜು, ಬಿಜೆಪಿ ಶಾಸಕ

ಪಾಲಿಕೆಯಲ್ಲಿ 
-ಬಿಜೆಪಿ -5
-ಜೆಡಿಎಸ್‌-0

ಟಾಪ್ ನ್ಯೂಸ್

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.