ಚುನಾವಣೆ: ಪೊಲೀಸರಿಂದ ರೌಡಿಗಳ ಪರೇಡ್
Team Udayavani, Mar 18, 2019, 6:35 AM IST
ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ರೌಡಿಗಳು, ವಾರೆಂಟ್ ಜಾರಿಯಾಗಿರುವ ಆರೋಪಿಗಳು, ಗಂಭೀರ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿಗಳು ಸೇರಿ 800ಕ್ಕೂ ಹೆಚ್ಚು ಮಂದಿಯ ಮನೆಗಳ ಮೇಲೆ ಉತ್ತರ ವಿಭಾಗದ ಪೊಲೀಸರು ಭಾನುವಾರ ನಸುಕಿನಲ್ಲಿ ದಾಳಿ ನಡೆಸಿದರು.
ಉತ್ತರ ವಿಭಾಗದ ಡಿಸಿಪಿ ಎನ್. ಶಶಿಕುಮಾರ್ ನೇತೃತ್ವದಲ್ಲಿ ಯಶವಂತಪುರ, ಜಾಲಹಳ್ಳಿ, ಮಲ್ಲೇಶ್ವರ, ಶ್ರೀರಾಮಪುರ, ಆರ್ಎಂಸಿ ಯಾರ್ಡ್, ಪೀಣ್ಯ, ಗಂಗಮ್ಮನಗುಡಿ, ಹೆಬ್ಟಾಳ, ವಿದ್ಯಾರಣ್ಯಪುರ, ರಾಜಾಜಿನಗರ, ಸುಬ್ರಹ್ಮಣ್ಯಪುರ ಸೇರಿ ಉತ್ತರ ವಿಭಾಗದ 18 ಠಾಣೆಗಳ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ 11 ಗಂಟೆಯಿಂದ ಭಾನುವಾರ ಮುಂಜಾನೆ ಐದು ಗಂಟೆವರೆಗೂ ಎಲ್ಲ ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಲಾಯಿತು. ಬಳಿಕ ಜಾಲಹಳ್ಳಿ ಠಾಣಾ ವ್ಯಾಪ್ತಿಯ ಬಿಇಎಲ್ ಮೈದಾನದಲ್ಲಿ ಎಲ್ಲ ರೌಡಿಗಳ ಪರೇಡ್ ನಡೆಸಲಾಯಿತು.
ಈ ವೇಳೆ ಮುಂಬರುವ ಚುನಾವಣೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಯಲ್ಲಿ ತೊಡಗಬಾರದು. ಮತದಾರರಿಗೆ ಬೆದರಿಕೆ ಹಾಕುವುದು, ಮತದಾನದ ದಿನ ಮತದಾರರ ಮೇಲೆ ದಬ್ಟಾಳಿಕೆ ನಡೆಸುವುದು, ಅಕ್ರಮ ಕೃತ್ಯಗಳಲ್ಲಿ ತೊಡಗಿದರೆ ಕಠಿಣ ಕಾನೂನು ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಶಶಿಕುಮಾರ್ ಎಚ್ಚರಿಕೆ ನೀಡಿದರು. ಬಳಿಕ ಮುಚ್ಚಳಿಕೆ ಪತ್ರ ಬರೆಸಿಕೊಳ್ಳಲಾಯಿತು.
ಅಲ್ಲದೆ, ಪರೇಡ್ನಲ್ಲಿ ಭಾಗಿಯಾದ ಎಲ್ಲ ಆರೋಪಿಗಳ ಮೊಬೈಲ್ ನಂಬರ್, ವಿಳಾಸ, ಸಂಬಂಧಿಕರ ವಿವರ ಹಾಗೂ ಇತರೆ ಮಾಹಿತಿಗಳನ್ನು ಪಡೆದುಕೊಳ್ಳಲಾಯಿತು. ಒಂದು ವೇಳೆ ಚುನಾವಣೆ ವೇಳೆ ಕಾನೂನು ಬಾಹಿರ ಕೃತ್ಯಗಳಲ್ಲಿ ತೊಡಗಿದರೆ, ಜಾಮೀನು ರಹಿತ ವಾರೆಂಟ್ನಡಿ ಬಂಧಿಸುವುದಲ್ಲದೆ, ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಬೇಕಾಗುತ್ತದೆ.
ಇದೇ ವೇಳೆ ರೌಡಿಗಳ ಉದ್ದುದ್ದ ಗಡ್ಡ, ಮೀಸೆ, ಕೂದಲಿಗೆ ಸ್ಥಳದಲ್ಲಿ ಕತ್ತರಿ ಹಾಕಲಾಯಿತು. ಅಕ್ರಮ ಚಟುವಟಿಕೆಗಳಲ್ಲಿ ತೊಡಗದೆ ಉತ್ತಮ ಜೀವನ ನಡೆಸುತ್ತಿರುವ ರೌಡಿಗಳನ್ನು ರೌಡಿಪಟ್ಟಿಯಿಂದ ಕೈಬಿಡುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಡಿಸಿಪಿ ಎನ್.ಶಶಿಕುಮಾರ್ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ