ಗೂಂಡಾ ಕಾಯ್ದೆಯಡಿ ಬಂಧನ: ಹೈಕೋರ್ಟ್‌ನಿಂದ ಮಾರ್ಗಸೂಚಿ


Team Udayavani, Mar 19, 2019, 6:29 AM IST

highcourt.jpg

ಬೆಂಗಳೂರು: ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಯಾರೇ ವ್ಯಕ್ತಿಯನ್ನು ಗೂಂಡಾ ಕಾಯ್ದೆಯಡಿ ಬಂಧಿಸುವ ವಿಚಾರದಲ್ಲಿ ಪೊಲೀಸ್‌ ಇಲಾಖೆ ಮಾಡುತ್ತಿರುವ ಕಾನೂನು ಲೋಪಗಳ ಬಗ್ಗೆ ಅಸಮಧಾನ ವ್ಯಕ್ತಪಡಿಸಿರುವ ಹೈಕೋರ್ಟ್‌, ಈ ಸಂಬಂಧ ಕೆಲವು ನಿರ್ದಿಷ್ಟ ಮಾರ್ಗಸೂಚಿಗಳನ್ನು ರೂಪಿಸಿ, ಯಾರಾನ್ನಾದರೂ ಗೂಂಡಾ ಕಾಯ್ದೆಯಡಿ ಬಂಧಿಸುವ ಮೊದಲು ಈ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ರಾಜ್ಯ ಸರ್ಕಾರ ಹಾಗೂ ಪೊಲೀಸ್‌ ಇಲಾಖೆಗೆ ನಿರ್ದೇಶನ ನೀಡಿದೆ.

ತುಮಕೂರು ಮೂಲದ ರವಿ ಕುಮಾರ್‌ ಎಂಬುವರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೆ.ಎನ್‌.ಫ‌ಣೀಂದ್ರ ಮತ್ತು ನ್ಯಾ. ಕೆ.ನಟರಾಜನ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಮಾರ್ಗಸೂಚಿಗಳನ್ನು ರಚಿಸಿ ಆದೇಶ ಮಾಡಿದೆ.

ಅಲ್ಲದೆ, ಈ ಆದೇಶ ಪ್ರತಿಯನ್ನು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ, ಕಾನೂನು ಇಲಾಖೆ ಪ್ರಧಾನ ಕಾರ್ಯದರ್ಶಿ, ಪೊಲೀಸ್‌ ಮಹಾನಿರ್ದೇಶಕರು, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದೀಯ ವ್ಯವಹಾರಗಳ ಕಾರ್ಯದರ್ಶಿಗಳಿಗೆ ಕಳುಹಿಸಲು ಹೈಕೋರ್ಟ್‌ನ ರಿಜಿಸ್ಟ್ರಾರ್‌ಗೆ ಆದೇಶಿಸಿದೆ.

ಗೂಂಡಾ ಕಾಯ್ದೆಯಡಿ ಬಂಧನಕ್ಕೆ ಒಳಗಾಗುವ ಬಹುತೇಕ ಜನರಿಗೆ ತಾವು ಏಕೆ ಬಂಧನಕ್ಕೆ ಒಳಗಾಗಿದ್ದೇವೆ, ಅದಕ್ಕೆ ಕಾರಣಗಳೇನು ಎಂಬುದೇ ತಿಳಿದಿರುವುದಿಲ್ಲ. ಅಲ್ಲದೆ, ಅಲ್ಪ ಸ್ವಲ್ಪ ಕಾನೂನು ತಿಳಿದಿದ್ದವರಿಗೂ ಅರ್ಥವಾಗದಂತೆ ಬಂಧನದ ಆದೇಶಗಳನ್ನು ಹೊರಡಿಸಲಾಗುತ್ತದೆ. ಹಾಗಾಗಿ ಈ ಮಾರ್ಗಸೂಚಿಯನ್ನು ಹೊರಡಿಸುತ್ತಿರುವುದಾಗಿ ಹೇಳಿರುವ ನ್ಯಾಯಪೀಠ ಬಂಧನ ಆದೇಶ ಲಿಖೀತ ರೂಪದಲ್ಲಿರಬೇಕು,

ಬಂಧನಕ್ಕೂ ಮೊದಲು ಆ ವ್ಯಕ್ತಿಗೆ ಆದೇಶ ತಲುಪಿರಬೇಕು, ಯಾವ ಆಧಾರದ ಮೇಲೆ ಆದೇಶ ಹೊರಡಿಸಲಾಗಿದೆ ಎಂಬುದಕ್ಕೆ ಕಾರಣಗಳನ್ನು ಅತ್ಯಂತ ಸ್ಪಷ್ಟವಾಗಿ ನೀಡಬೇಕು ಎಂದೂ ನ್ಯಾಯಪೀಠ ಹೇಳಿದೆ. ಸಂಬಂಧಪಟ್ಟ ಅಧಿಕಾರಿಗಳು ಒಂದಕ್ಕಿಂತ ಹೆಚ್ಚು ಆಧಾರಗಳನ್ನು ಮುಂದಿಟ್ಟುಕೊಂಡು ಬಂಧನ ಆದೇಶ ಹೊರಡಿಸಿದರೆ, ಅಂತಹ ಸಂದರ್ಭದಲ್ಲಿ ಎಲ್ಲಾ ಕಾರಣಗಳನ್ನು ಪ್ರತ್ಯೇಕವಾಗಿ ಉಲ್ಲೇಖೀಸಬೇಕು. ಆದೇಶದ ಪ್ರತಿಯನ್ನು ಬಂಧಿಸ‌ಲ್ಪಡುವವರಿಗೆ ಅರ್ಥವಾಗುವ ಭಾಷೆಯಲ್ಲಿ ಅನುವಾದಿಸಿ ತಲುಪಿಸಬೇಕು ಎಂದೂ ನ್ಯಾಯಾಲಯ ನಿರ್ದೇಶನ ನೀಡಿದೆ.

ಹೈಕೋರ್ಟ್‌ ರೂಪಿಸಿದ ಮಾರ್ಗಸೂಚಿಗಳು
– ಬಂಧನ ಆದೇಶವನ್ನು ಲಿಖೀತ ರೂಪದಲ್ಲಿ ಹೊರಡಿಸಿದ ಕೂಡಲೇ ಅದನ್ನು 5 ದಿನಗಳೊಳಗೆ ಬಂಧಿತನಿಗೆ ಒದಗಿಸಬೇಕು. 

– ಬಂಧನ ಆದೇಶ ಹೊರಡಿಸಲು ಎರಡು ಅಥವಾ ಅದಕ್ಕಿಂತ ಹೆಚ್ಚಿನ ಕಾರಣಗಳು ಇದ್ದಲ್ಲಿ, ಅದನ್ನು ಪ್ರತ್ಯೇಕವಾಗಿ ಉಲ್ಲೇಖೀಸಬೇಕು.

– ಬಂಧನ ಆದೇಶ, ಅದಕ್ಕೆ ಪೂರಕವಾದ ದಾಖಲೆಗಳನ್ನು ಬಂಧಿತನು ತಿಳಿದಿರುವ ಭಾಷೆಗೆ ಅನುವಾದಿಸಿ  ಒದಗಿಸಬೇಕು.

– ಬಂಧಿತನ ಜಾಮೀನು ಅರ್ಜಿ, ಆ ಕುರಿತು ಕೋರ್ಟ್‌ ಆದೇಶ, ಜಾಮೀನು ಷರತ್ತು ಉಲ್ಲಂಘಿಸಿದ ಸಂದರ್ಭದಲ್ಲಿ, ಆ ಕುರಿತ ಆದೇಶಗಳನ್ನು ನ್ಯಾಯಾಲಯ ಹಾಗೂ ಬಂಧನ ಪ್ರಾಧಿಕಾರ ಕೂಲಂಕುಶವಾಗಿ ಪರಿಶೀಲಿಸಬೇಕು.

– ಬಂಧನ ಆದೇಶ ಪ್ರಶ್ನಿಸಿದ ವೇಳೆ ಪ್ರತಿಯೊಂದು ಕಾರಣವನ್ನು ನ್ಯಾಯಾಲಯವು ಸ್ವತಂತ್ರವಾಗಿ ಪರಿಗಣಿಸಬೇಕು ಹಾಗೂ ಬಂಧನ ಆದೇಶವು ಈಗ ರೂಪಿಸಲಾಗಿರುವ ಮಾರ್ಗಸೂಚಿಗಳ ಅನುಗುಣವಾಗಿದೆಯೇ ಎಂಬುದರ ಕುರಿತು ಪರಿಶೀಲಿಸಬೇಕು. 

– ಬಂಧನ ಆದೇಶದ ಕುರಿತು ಬಂಧಿತನು ಯಾವುದೇ ಮನವಿ ಪತ್ರ ಸಲ್ಲಿಸಿದರೆ, ಅದನ್ನು ಸಲಹಾ ಮಂಡಳಿ, ಸರ್ಕಾರ, ಬಂಧನ ಪ್ರಾಧಿಕಾರವು ತಕ್ಷಣವೇ ಪರಿಗಣಿಸಬೇಕು.

– ಬಂಧನದ ಆದೇಶ ಹೊರಡಿಸಿದ ಮೂರು ವಾರಗಳಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆ, ಕಾರಣ, ಬಂಧಿತನ ಮನವಿಪತ್ರಗಳನ್ನು ಸಲಹಾ ಮಂಡಳಿಯ ಮುಂದೆ ಸರ್ಕಾರ ಒದಗಿಸಬೇಕು. 

– ಸಲಹಾ ಮಂಡಳಿಯು ಎಲ್ಲಾ ದಾಖಲೆಗಳನ್ನು ನಿರ್ವಹಣೆ ಮಾಡಬೇಕು. ಬಂಧನ ಆದೇಶದ ಕುರಿತು ಪರಿಶೀಲನೆ ನಡೆಸಿ ಏಳು ವಾರಗಳಲ್ಲಿ ಸರ್ಕಾರಕ್ಕೆ ವರದಿ ಕಳುಹಿಸಬೇಕು. 

– ಸಲಹಾ ಮಂಡಳಿ ವರದಿ ಸಲ್ಲಿಸಿದ ನಂತರ ಬಂಧಿನತ ಮನವಿ ಪತ್ರ ಸಲ್ಲಿಸಿದರೆ, ಸರ್ಕಾರವು ಅದನ್ನು ಬಂಧನ ಆದೇಶ ಕಾಯಂಗೊಳಿಸುವ ಮುನ್ನ ಪರಿಗಣಿಸಬೇಕು.

– ಯಾವುದೇ ಮನವಿಯನ್ನಾದರೂ ಬಂಧನ ಆದೇಶ ಅಂತಿಮಗೊಳಿಸುವ ಮುನ್ನವೇ ಪರಿಗಣಿಸಬೇಕು. ಅಂತಿಮ ಆದೇಶ ಹೊರಬಿದ್ದ ನಂತರ ಮನವಿ ಪರಿಗಣಿಸುವಂತಿಲ್ಲ. 

– ಬಂಧನ ಮಾಡಲು ಯಾವುದೇ ಸಕಾರಣ ಇಲ್ಲ ಎಂದು ಸಲಹಾ ಮಂಡಳಿ ವರದಿ ನೀಡಿದರೆ, ಅದನ್ನು ಪರಿಗಣಿಸಿ ಕೂಡಲೇ ಬಂಧಿತನನ್ನು ಬಿಡುಗಡೆ ಮಾಡಬೇಕು.

– ಸಲಹಾ ಮಂಡಳಿ ನೀಡಿದ ವರದಿ ಆಧರಿಸಿ ಬಂಧನದಿಂದ ವ್ಯಕ್ತಿಯನ್ನು ಬಿಡುಗಡೆ ಮಾಡಿದ ನಂತರ, ಅದೇ ಕಾರಣದಿಂದ ಮತ್ತೆ ಆತನನ್ನು ಬಂಧಿಸಲು ಅಥವಾ ಬಂಧನದ ಅವಧಿಯನ್ನು ವಿಸ್ತರಿಸಲು ಸಾಧ್ಯವಿಲ್ಲ. ಒಂದೊಮ್ಮೆ ಬಂಧಿಸಬೇಕಾದರೆ ಹೊಸ ಕಾರಣಗಳ ಮೇಲೆ ಪ್ರತ್ಯೇಕ ಅಥವಾ ಹೊಸ ಆದೇಶ ಹೊರಡಿಸಬೇಕು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

11-srrest

Bengaluru: ಅತಿಕ್ರಮಿಸಿ ಏರ್‌ಪೋರ್ಟ್‌ನಲ್ಲಿ ವಿಡಿಯೋ: ಯುಟ್ಯೂಬರ್‌ ಬಂಧನ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.