ರಂಗಲ್ಲಿ ಮಿಂದೇಳಲು ರಾಜಧಾನಿ ಸಜ್ಜು


Team Udayavani, Mar 20, 2019, 6:35 AM IST

ragalli.jpg

ಬೆಂಗಳೂರು: ಶಾಲಾ-ಕಾಲೇಜು ಪರೀಕ್ಷೆ ಹಾಗೂ ಚುನಾವಣೆ ಬಿಸಿಯ ನಡುವೆಯೇ ರಂಗಿನ ಹಬ್ಬ ಹೋಳಿ ಆಚರಣೆಗೆ ಉದ್ಯಾನ ನಗರಿ ಸಜ್ಜಾಗುತ್ತಿದ್ದು, ನಗರದಲ್ಲಿ ಬಣ್ಣಗಳ ಭರ್ಜರಿ ವ್ಯಾಪಾರ ನಡೆಯುತ್ತಿದೆ.

ಗುರುವಾರ ಹೋಳಿ ಹಬ್ಬವಿರುವ ಹಿನ್ನೆಲೆಯಲ್ಲಿ ನಗರದ ಪ್ರಮುಖ ಮಾರುಕಟ್ಟೆಗಳಿಗೆ ಬಣ್ಣಗಳು ಲಗ್ಗೆ ಇಟ್ಟಿದ್ದು, ಕೆಂಪು, ಹಸಿರು, ಹಳದಿ, ನೀಲಿ, ಗುಲಾಬಿ ಬಣ್ಣಗಳಿಗೆ ಬೇಡಿಕೆ ಹೆಚ್ಚಿದೆ. ನೀರಿನಲ್ಲಿ ಕಲಸಿ ಬಳಸುವ ಬಣ್ಣಗಳು, ಹಿಡಿಯಾಗಿ ಎರಚುವ ಬಣ್ಣಗಳೂ ಸೇರಿದಂತೆ ಹಲವು ಬಗೆಯ ಬಣ್ಣಗಳ ಜತೆಗೆ ಬಣ್ಣ ಎರಚುವ ಆಟಿಕೆ ವಸ್ತುಗಳುನ್ನು ಜನ ಖರೀದಿಸುತ್ತಿದ್ದಾರೆ.

ರೆಸಾರ್ಟ್‌ಗಳಲ್ಲಿ ರಂಗಿನುತ್ಸವ: ಗ್ರಾಮೀಣ ಭಾಗದಲ್ಲಿ ಸಾಂಸ್ಕೃತಿ ಪ್ರತಿಬಿಂಬವಾಗಿ ನಡೆಯುತ್ತಿದ್ದ ಹೋಳಿ, ಇತ್ತೀಚಿನ ದಿನಗಳಲ್ಲಿ ನಗರ ಪ್ರದೇಶದಲ್ಲಿ ಫ್ಯಾಷನ್‌ ಆಗಿದೆ. ಬೆಂಗಳೂರಿನಲ್ಲಿ ದಸರಾ, ಸಂಕ್ರಾಂತಿ, ಯುಗಾದಿಯಂತಹ ಬಹತೇಕ ಹಬ್ಬಗಳನ್ನು ಪ್ರತಿಷ್ಠಿತ ಹೋಟೆಲ್‌ಗ‌ಳಲ್ಲಿ ಆಚರಿಸುತ್ತಾರೆ.

ಅಂತೆಯೇ ಕೆಲ ಪಂಚತಾರಾ ಹೊಟೇಲ್‌, ಮಾಲ್‌ ಮತ್ತು ರೆಸಾರ್ಟ್‌ಗಳಲ್ಲಿ ಹೋಳಿ ಉತ್ಸವ ಆಯೋಜಿಸಲಾಗಿದೆ. ಈ ಉತ್ಸವದಲ್ಲಿ ರೈನ್‌ ಡಾನ್ಸ್‌, ವಾಟರ್‌ ಬಲೂನ್‌, ಸ್ಟಾಪ್‌ ಮ್ಯೂಸಿಕ್‌ ಫ‌ನ್‌ಗಳನ್ನು ಏರ್ಪಡಿಸಲಾಗಿದ್ದು, ಆಸಕ್ತರು ನಿಗದಿತ ಹಣ ಪಾವತಿಸಿ ಈ ಉತ್ಸವಗಳಲ್ಲಿ ಭಾಗವಹಿಸುತ್ತಿದ್ದಾರೆ.

ರಾಸಾಯನಿಕ ಬಣ್ಣ – ಎಚ್ಚರ ಅಗತ್ಯ: ಮರ್ಕ್ನೂರಿಕ್‌ ಆಕ್ಸೈಡ್‌, ಕಾಪರ್‌, ರೊಡಮೈನ್‌ ಬಿ, ಕ್ರೋಮಿಯಂ ಆಯೋಡೈಡ್‌, ಸೀಸದಂತಹ ರಾಸಾಯನಿಕಗಳಿಂದ ಬಣ್ಣಗಳನ್ನು ತಯಾರಿಸಲಾಗುತ್ತದೆ. ಈ ಬಣ್ಣಗಳನ್ನು ಬಳಸಿದರೆ ಚರ್ಮದ ತೊಂದರೆ ಉಂಟಾಗುತ್ತದೆ. ಇನ್ನು ಈ ರಾಸಾಯನಿಕ ಬಣ್ಣ ಕಣ್ಣಿಗೆ ಬಿದ್ದ ಕೂಡಲೇ ಕಣ್ಣು ಕೆಂಪಗಾಗುವುದು, ನೋಯುವುದು, ಇಲ್ಲವೇ ಕಣ್ಣಿನ ಕಾರ್ನಿಯಾಗೆ ಹಾನಿ ಆಗುವ ಸಾಧ್ಯತೆಗಳಿರುತ್ತವೆ.

ಜತೆಗೆ ಅಸ್ತಮಾ ಉಸಿರಾಟ ತೊಂದರೆ ಸೇರಿದಂತೆ ನಾನಾ ರೀತಿಯ ಆರೋಗ್ಯ ಸಮಸ್ಯೆ ಎದುರಾಗುತ್ತವೆ. ಹೀಗಾಗಿ, ಬಣ್ಣ ಬಳಸುವಾಗ ಎಚ್ಚರ ಅಗತ್ಯವಿದೆ. ಇದೇ ವೇಳೆ ಅಕ್ಕಿ ಹಿಟ್ಟು, ಬೇವು, ತುಳಸಿಯಂತಹ ಎಲೆಗಳು, ಅರಿಶಿನ ಕೊಂಬು, ಹೂವಿನ ದಳಗಳಿಂದ ಸಿದ್ಧಪಡಿಸಡಿರುವ ಪರಿಸರ ಸ್ನೇಹಿ ಬಣ್ಣಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಅವುಗಳ ಆಯ್ಕೆ ಉತ್ತಮ ಎನ್ನುತ್ತಾರೆ ವೈದ್ಯರು.

ಕಾಲೇಜು, ಹಾಸ್ಟೆಲ್‌, ಹಳೇ ಬಡಾವಣೆಗಳು ಸೇರಿ ಪ್ರಮುಖ ಪ್ರದೇಶಗಳನ್ನು ಈಗಾಗಲೇ ಗುರುತಿಸಿ ಅಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಒತ್ತಾಯದಿಂದ ಬಣ್ಣ ಹಾಕುವರು ಹಾಗೂ ಸಾರ್ವಜನಿಕರಿಗೆ ತೊಂದರೆ ಕೊಡುವವರ ವಿರುದ್ಧ ಕಾನೂನು ಕ್ರಮಕ್ಕೆ ಸೂಚಿಸಲಾಗಿದೆ.
-ಸೀಮಂತ ಕುಮಾರ್‌ ಸಿಂಗ್‌, ಹೆಚ್ಚುವರಿ ಪೊಲೀಸ್‌ ಆಯುಕ್ತರು

ಟಾಪ್ ನ್ಯೂಸ್

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.