ಪ್ರಕಾಶ್ ರಾಜ್ ವಿರುದ್ಧ ಪ್ರಕರಣ ದಾಖಲು
Team Udayavani, Mar 22, 2019, 6:39 AM IST
ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಬೆಂಗಳೂರು ಕೇಂದ್ರ ಲೋಕಸಭೆ ಕ್ಷೇತ್ರದ ಸಂಭವನೀಯ ಅಭ್ಯರ್ಥಿ, ನಟ ಪ್ರಕಾಶ್ ರಾಜ್ ಸೇರಿ ಮೂವರ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಾಂತಿನಗರ ವಿಧಾನಸಭಾ ಕ್ಷೇತ್ರದ ವಿಚಕ್ಷಣಾ ದಳದ ಅಧಿಕಾರಿ ಡಿ.ಮೂರ್ತಿ ಅವರು ನೀಡಿದ ದೂರಿನ ಆಧಾರದ ಮೇಲೆ ನಟ ಕೆ.ಪ್ರವೀಣ್, ಸಿ.ಎ.ಅಭಿಲಾಷ್ ಹಾಗೂ ಪ್ರಕಾಶ್ ರಾಜ್ ವಿರುದ್ಧ ಕಬ್ಬನ್ಪಾರ್ಕ್ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ಪ್ರವೀಣ್ ಮತ್ತು ಅಭಿಲಾಷ್ ಮಾ.12ರಂದು ಸಂಜೆ 4.30ರ ಸುಮಾರಿಗೆ ಎಂ.ಜಿ.ರಸ್ತೆಯಲ್ಲಿರುವ ಮಹಾತ್ಮಗಾಂಧಿ ವೃತ್ತದ ಬಳಿ ಒಂದು ಗಂಟೆಗಳ ಕಾಲ ಶಾಂತಿಯುತ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಪ್ರತಿಭಟನೆಯಲ್ಲಿ ನಟ ಪ್ರಕಾಶ್ ರಾಜ್, ಕೆಲ ಲೇಖಕರು, ಕಲಾವಿದರು, ಹೋರಾಟಗಾರರು ಭಾಗಿಯಾಗಿದ್ದರು. ಪ್ರತಿಭಟನೆಯಲ್ಲಿ ಪ್ರಕಾಶ್ ರಾಜ್, ಲೋಕಸಭಾ ಚುನಾವಣೆ ಕುರಿತ ಮತದಾನದ ಬಗ್ಗೆ ಮಾತನಾಡಿದ್ದರು.
ಈ ಕುರಿತು ಕೆಲ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದವು. ಪ್ರತಿಭಟನೆಯಲ್ಲಿ ಸುಮಾರು 25-30 ಮಂದಿ ಜನ ಸೇರಿದ ಪರಿಣಾಮ ಪಾದಚಾರಿ ಮಾರ್ಗದಲ್ಲಿ ಸಾರ್ವಜನಿಕರ ಓಡಾಡಕ್ಕೆ ತೊಂದರೆಯಾಗಿತ್ತು. ಈ ಮೂಲಕ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪ ಮೇಲೆ ಡಿ.ಮೂರ್ತಿ ಅವರು ನೀಡಿದ ದೂರಿನ ಆಧಾರದ ಮೇಲೆ ಮೂವರ ವಿರುದ್ದ ಪ್ರಕರಣ ದಾಖಲಿಸಲಾಗಿದೆ ಎಂದು ಕಬ್ಬನ್ಪಾರ್ಕ್ ಪೊಲೀಸರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ
CN Ashwath Narayan: ಕಾಂಗ್ರೆಸ್ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ
Bengaluru: ಅತಿಕ್ರಮಿಸಿ ಏರ್ಪೋರ್ಟ್ನಲ್ಲಿ ವಿಡಿಯೋ: ಯುಟ್ಯೂಬರ್ ಬಂಧನ
MUST WATCH
ಹೊಸ ಸೇರ್ಪಡೆ
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ