ಡಂಪಿಂಗ್‌ ಯಾರ್ಡ್‌ ಆದ ಸೇತುವೆ!


Team Udayavani, Mar 22, 2019, 6:40 AM IST

dampimg.jpg

ಬೆಂಗಳೂರು: ಮೇಲ್ಸೇತುವೆ ಏರುತ್ತಲೇ ಮೂಗಿಗೆ ಬಡಿಯುವ ದುರ್ವಾಸನೆ, ರಸ್ತೆಯಲ್ಲಿರುವ ತ್ಯಾಜ್ಯ ವಿಂಗಡಿಸುವ ಕಾರ್ಯದಲ್ಲಿ ತೊಡಗಿರುವ ಪೌರಕಾರ್ಮಿಕರು, ತೀವ್ರ ಸಂಚಾರ ದಟ್ಟಣೆಗೆ ಕಾರಣವಾಗಿರುವ ತ್ಯಾಜ್ಯ ವಿಲೇವಾರಿ ಕಾಂಪ್ಯಾಕ್ಟರ್‌ ಹಾಗೂ ಆಟೋಗಳು. ಜಗಜೀವನರಾಮ್‌ನಗರದಿಂದ ವಿಜಯನಗರ ಸಂಪರ್ಕಿಸುವ ಹೊಸಹಳ್ಳಿ ಮುಖ್ಯರಸ್ತೆಯ ಮಧ್ಯೆ ಬರುವ ರೈಲ್ವೆ ಮೇಲ್ಸೇತುವೆ ರಸ್ತೆಯಲ್ಲಿ ನಿತ್ಯ ಕಂಡುಬರುತ್ತಿರುವ ದೃಶ್ಯಗಳಿವು.

ಮನೆಗಳಿಂದ ಸಂಗ್ರಹವಾದ ತ್ಯಾಜ್ಯವನ್ನು ನೆಲದ ಮೇಲೆ ಬೀಳದ ರೀತಿಯಲ್ಲಿ ವಿಲೇವಾರಿ ಮಾಡುವ ಉದ್ದೇಶವನ್ನು ಬಿಬಿಎಂಪಿ ಹೊಂದಿದೆ. ಆದರೆ, ಜಗಜೀವನರಾಮ್‌ನಗರದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮನೆ ಮನೆಯಿಂದ ಸಂಗ್ರಹಿಸುವ ತ್ಯಾಜ್ಯವನ್ನು ಗುತ್ತಿಗೆದಾರರು ಮೇಲ್ಸೇತುವೆಯ ಒಂದು ಬದಿಯಲ್ಲಿ ಸುರಿಯುತ್ತಿದ್ದು, ನಂತರದಲ್ಲಿ ತ್ಯಾಜ್ಯ ವಿಂಗಡಿಸುತ್ತಿರುವುದು ಸಾರ್ವಜನಿಕರಿಗೆ ಸಮಸ್ಯೆಯಾಗಿ ಪರಿಗಣಮಿಸಿದೆ. 

ಮೇಲ್ಸೇತುವೆ ಸಮೀಪವಿರುವ ಖಾಲಿ ಜಾಗದಲ್ಲಿ ಪಾಲಿಕೆಯಿಂದ ಒಣ ತ್ಯಾಜ್ಯ ಘಟಕ ನಿರ್ಮಿಸಿದ್ದರೂ, ಗುತ್ತಿಗೆದಾರರು ಮಾತ್ರ ಮೇಲ್ಸೇತುವೆಯಲ್ಲಿ ತ್ಯಾಜ್ಯ ಸುರಿದ ವಿಂಗಡಿಸುತ್ತಿದ್ದಾರೆ. ಇದರಿಂದಾಗಿ ತ್ಯಾಜ್ಯದ ಲಿಚೆಟ್‌ ನೀರು ರಸ್ತೆಯಲ್ಲಿಯೇ ಉಳಿಯುತ್ತಿದೆ. ಜತೆಗೆ ಸಮರ್ಪಕವಾಗಿ ತ್ಯಾಜ್ಯವನ್ನು ವಿಲೇವಾರಿ ಮಾಡದ ಹಿನ್ನೆಲೆಯಲ್ಲಿ ವಾಹನ ಸವಾರರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. 

ಮತ್ತೊಂದೆಡೆ ರೈಲ್ವೆ ಮೇಲ್ಸೇತುವೆಯಿಂದ ತ್ಯಾಜ್ಯ ಕೆಳಗೆ ಎಸೆಯುವುದು ಹಾಗೂ ತ್ಯಾಜ್ಯ ಬೆಂಕಿ ಹಾಕುವಂತಹ ಪ್ರಕರಣಗಳು ಆಗಾಗ ನಡೆಯುತ್ತಿದ್ದರೂ, ಅಧಿಕಾರಿಗಳು ಮಾತ್ರ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಮುಂದಾಗಿಲ್ಲ. ಇದರಿಂದಾಗಿ ದುರ್ವಾಸನೆ ಹರಡಿರುವುದು ಒಂದೆಡೆಯಾದರೆ, ವಾಹನಗಳ ನಿಲುಗಡೆಯಿಂದ ಕೃತಕ ದಟ್ಟಣೆ ಸಮಸ್ಯೆ ಉಂಟಾಗುತ್ತಿರುವುದು ಸಾರ್ವಜನಿಕರನ್ನು ಕಾಡುತ್ತಿದೆ. 

ದಟ್ಟಣೆ ಹೆಚ್ಚಿಸುತ್ತಿರುವ ಕಾಂಪ್ಯಾಕ್ಟರ್‌ಗಳು: ತ್ಯಾಜ್ಯ ವಿಲೇವಾರಿಯಲ್ಲಿ ತೊಡಗುವ ಕಾಂಪ್ಯಾಕ್ಟರ್‌ ಹಾಗೂ ಆಟೋಗಳು ರೈಲ್ವೆ ಮೇಲ್ಸೇತುವೆಯ ಎಡಭಾಗದಲ್ಲಿ ನಿಲುಗಡೆ ಮಾಡುವುದರಿಂದ ವಾಹನಗಳು ಸರಾಗವಾಗಿ ಸಂಚರಿಸುವುದು ಕಷ್ಟವಾಗಿದೆ. ಇದರೊಂದಿಗೆ ಪೌರಕಾರ್ಮಿಕರು ರಸ್ತೆಯ ತುದಿಯಲ್ಲಿ ತ್ಯಾಜ್ಯ ವಿಂಗಡಣೆ ಕಾರ್ಯದಲ್ಲಿ ತೊಡಗುವುದರಿಂದ ವಾಹನ ಸಂಚಾರ ಗತಿ ಕಡಿಮೆಯಾಗುತ್ತಿದ್ದು, ಅಪಘಾತ ಸಂಭವಿಸುವ ಆತಂಕವೂ ಇದೆ. 

ಗುಜರಿ ವಾಹನಗಳಿಗೆ ನೆಲೆ!: ರೈಲ್ವೆ ಮೇಲ್ಸೇತುವೆಯಿಂದ ಸ್ವಲ್ಪ ಮುಂದೆ ಸಾಗಿದರೆ ರಾಜಕಾಲುವೆಗೆ ಅಡ್ಡವಾಗಿ ನಿರ್ಮಿಸಿರುವ ಮೇಲ್ಸೇತುವೆಯ ಮೇಲೆಯೂ ತ್ಯಾಜ್ಯ ವಿಲೇವಾರಿಗೆ ಬಳಸಿ ದುರಸ್ತಿಯಾಗಿರುವ ಆಟೋಗಳು, ತಳ್ಳುಗಾಡಿಗಳನ್ನು ನಿಲುಗಡೆ ಮಾಡಲಾಗಿದೆ. ಇದರೊಂದಿಗೆ ಮೇಲ್ಸೇತುವೆಯ ರಸ್ತೆಗಳ ಎರಡೂ ಬದಿಗಳಲ್ಲಿ ಖಾಸಗಿ ವಾಹನಗಳು ನಿಲುಗಡೆ ಮಾಡಿರುವುದು ದಟ್ಟಣೆ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸುತ್ತಿವೆ. 

ಸಾರ್ವಜನಿಕರ ಅಹವಾಲು: ಬೇಗೂರು ವಾರ್ಡ್‌ ವ್ಯಾಪ್ತಿಗೆ ಬರುವ ಯಲಚೇನಹಳ್ಳಿ ಮುಖ್ಯರಸ್ತೆಯಲ್ಲಿ ಕುಡಿಯುವ ನೀರು ಹಾಗೂ ಒಳಚರಂಡಿ ನೀರು ಪೈಪ್‌ ಅಳವಡಿಕೆಗಾಗಿ ರಸ್ತೆ ಅಗೆದು ಮೂರು ತಿಂಗಳು ಕಳೆದಿದೆ. ಕಾಮಗಾರಿ ಪೂರ್ಣಗೊಂಡರೂ ಕೇವಲ 50 ಮೀಟರ್‌ ಡಾಂಬರೀಕರಣ ಮಾಡಲಾಗಿದ್ದು, ಉಳಿದ ರಸ್ತೆಯನ್ನು ಹಾಗೆ ಬಿಡಲಾಗಿದೆ. ಪರಿಣಾಮ ರಸ್ತೆಯಲ್ಲಿ ತೀವ್ರ ಧೂಳಿನ ಸಮಸ್ಯೆ ಸೃಷ್ಟಿಯಾಗಿದ್ದು, ಕೂಡಲೇ ಸ್ಥಳೀಯ ಸಂಸ್ಥೆಗಳು ರಸ್ತೆಗೆ ಡಾಂಬರೀಕರಣ ಮಾಡಬೇಕು ಎಂದು ಸ್ಥಳೀಯರಾದ ಕಾರಂತ ಎಂಬುವರು ಒತ್ತಾಯಿಸಿದ್ದಾರೆ. 

ಮನೆಗಳಿಂದ ಸಂಗ್ರಹಿಸಿದ ತ್ಯಾಜ್ಯವನ್ನು ಲಾರಿಗಳಲ್ಲಿ ತಂದು ರೈಲ್ವೆ ಮೇಲ್ಸೇತುವೆಯ ರಸ್ತೆಯ ಮೇಲೆ ಸುರಿದು ವಿಂಗಡಿಸಲಾಗುತ್ತದೆ. ಈ ಕುರಿತು ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಸಮೀಪದಲ್ಲಿಯೇ ತ್ಯಾಜ್ಯ ವಿಲೇವಾರಿಗೆ ಜಾಗವಿದ್ದರೂ ರಸ್ತೆಯಲ್ಲಿ ತ್ಯಾಜ್ಯ ವಿಂಗಡಿಸುತ್ತಿರುವುದರಿಂದ ತೀವ್ರ ದುರ್ವಾಸನೆಗೆ ಕಾರಣವಾಗಿದ್ದು, ಸಂಚಾರ ದಟ್ಟಣೆಯೂ ಉಂಟಾಗುತ್ತಿದೆ. 
-ಅಬ್ದುಲ್‌ ವಸೀಮ್‌, ಜೆಜೆನಗರ ನಿವಾಸಿ

* ವೆಂ.ಸುನೀಲ್‌ಕುಮಾರ್‌

ಟಾಪ್ ನ್ಯೂಸ್

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

1-waadassda

OBC-Muslim ಮೀಸಲು ವಿವಾದ ತಾರಕಕ್ಕೆ: ಪ್ರಧಾನಿ ಹೇಳಿಕೆ ಅಲ್ಲಗಳೆದ ಸಿದ್ದರಾಮಯ್ಯ

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: 15 ಮಂದಿ ಆರೋಪಿಗಳು ಖುಲಾಸೆ

Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್‌ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ

1-asasa

Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Reservation: ಏನಿದು ಒಬಿಸಿ-ಮುಸ್ಲಿಂ ಮೀಸಲಾತಿ ವಿವಾದ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.