ಜೆಡಿಎಸ್ ಕೋಟೆಯಲ್ಲಿ”ಕಮಲ ಕಂಪು’
Team Udayavani, Mar 23, 2019, 6:55 AM IST
ಕ್ಷೇತ್ರದ ವಸ್ತುಸ್ಥಿತಿ: ಮಹಾಲಕ್ಷ್ಮೀ ವಿಧಾನ ಸಭಾ ಕ್ಷೇತ್ರ ಜೆಡಿಎಸ್ನ ಭದ್ರಕೋಟೆ. ಒಕ್ಕಲಿಗ ಸಮುದಾಯ ಹೆಚ್ಚಿರುವ ಕ್ಷೇತ್ರದ ಮತದಾರರು ವಿಧಾನಸಭಾ ಚುನಾವಣೆಯಲ್ಲಿ ಸತತ 2 ಬಾರಿ ಜೆಡಿಎಸ್ ಬೆಂಬಲಿಸಿದ್ದಾರೆ. ಆದರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯತ್ತ ಒಲವು ತೋರಿರುವುದನ್ನು ಅಂಕಿ-ಅಂಶಗಳು ಹೇಳುತ್ತಿವೆ.
2014ರ ಲೋಕಸಭಾ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಶೇ.57.1ರಷ್ಟು ಮತದಾತರು ಹಾಲಿ ಸಂಸಸದ ಸದಾನಂದಗೌಡ ಪರ ಒಲವು ತೋರಿದ್ದರು. ಆಗ ಚಲಾವಣೆಯಾಗಿದ್ದ 2,79,265 ಮತಗಳ ಪೈಕಿ 85,973 ಮತಗಳು ಬಿಜೆಪಿ ಪಾಲಾಗಿದ್ದವು. ಕಾಂಗ್ರೆಸ್ನ ಸಿ.ನಾರಾಯಣಸ್ವಾಮಿ 40,139 ಮತ, ಜೆಡಿಎಸ್ನ ಅಬ್ದುಲ್ ಅಜೀಂ 20,340 ಮತಗಳನ್ನು ಪಡೆದಿದ್ದರು.
ಈ ಬಾರಿ ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಸದಾನಂದಗೌಡರ ವಿರುದ್ಧ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕಣಕ್ಕಿಳಿಯುವ ಸಾಧ್ಯತೆಯಿದ್ದು, ಕದನ ಕಣ ಕೌತುಕ ಹುಟ್ಟು ಹಾಕಿದೆ. ಇನ್ನು ಪಾಲಿಕೆ ವಿಚಾರಕ್ಕೆ ಬಂದಾಗ ಏಳು ವಾರ್ಡ್ಗಳ ಪೈಕಿ 4ರಲ್ಲಿ ಜೆಡಿಎಸ್ ಪ್ರಾಬಲ್ಯ ಮೆರೆದಿದೆ.ಕಾಂಗ್ರೆಸ್ ಪಕ್ಷ 2 ಮತ್ತು ಬಿಜೆಪಿ 1 ಸ್ಥಾನ ಪಡೆದಿವೆ.ಒಕ್ಕಲಿಗ, ಹಿಂದುಳಿದ ವರ್ಗ ಮತ್ತು ಲಿಂಗಾಯಿತ ಮತಗಳು ಈ ಕ್ಷೇತ್ರದಲ್ಲಿ ನಿರ್ಣಾಯಕ ಪಾತ್ರ ವಹಿಸಲಿವೆ.
ಸಂಸದರಿಂದ ಬಂದ ಪ್ರಮುಖ ಕೊಡುಗೆಗಳು
-ನಂದಿನಿ ಲೇಔಟ್ನ ಕಂಠೀರವ ನಗರದಲ್ಲಿ ಬಸ್ ತಂಗುದಾಣ ನಿರ್ಮಾಣ
-ಉದ್ಯೋಗ ಮೇಳ ಹಮ್ಮಿಕೊಂಡು ಯುವ ಸಮುದಾಯಕ್ಕೆ ಉದ್ಯೋಗ
ನಿರೀಕ್ಷೆಗಳು
-ರಸ್ತೆ ಅಭಿವೃದ್ಧಿಗೆ ಮತ್ತಷ್ಟು ಅನುದಾನ
-ವಾರ್ಡ್ಗಳು- 7
-ಬಿಜೆಪಿ -1
-ಕಾಂಗ್ರೆಸ್ – 2
-ಜೆಡಿಎಸ್ -4
-ಜನಸಂಖ್ಯೆ -4,58,047
-ಮತದಾರರ ಸಂಖ್ಯೆ -2,79,265
-ಪುರುಷರು -1,44,219
-ಮಹಿಳೆಯರು-1,35,046
2014ರ ಚುನಾವಣೆಯಲ್ಲಿ ಚಲಾವಣೆಯಾದ ಮತಗಳು- 1,50,605 (57.1%)
-ಬಿಜೆಪಿ ಪಡೆದ ಮತಗಳು -85,973 (57.1%)
ಕಾಂಗ್ರೆಸ್ ಪಡೆದ ಮತಗಳು – 40,139 (26.7%)
–ಜೆಡಿಎಸ್ ಪಡೆದ ಮತಗಳು – 20,340 (13.5%)
2014ರ ಲೋಕಸಭೆ ಚುನಾವಣೆ ವೇಳೆ ಕ್ಷೇತ್ರದ ಚಿತ್ರಣ
-ಗೋಪಾಲಯ್ಯ ಜೆಡಿಎಸ್ ಶಾಸಕ
-ಪಾಲಿಕೆಯಲ್ಲಿ ಬಿಜೆಪಿ ಸದಸ್ಯರು-1
-ಕಾಂಗ್ರೆಸ್ ಸದಸ್ಯರು-3
-ಜೆಡಿಎಸ್-3
ಮಾಹಿತಿ: ದೇವೇಶ ಸೂರಗುಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮದುವೆಗೆ ನಿರಾಕರಿಸಿದ ಪ್ರೇಯಸಿ ಮೇಲೆ ಸ್ನೇಹಿತರ ಜತೆ ಸೇರಿ ಸಾಮೂಹಿಕ ಅತ್ಯಾಚಾರ
Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್ ಸುಲಿಗೆ; ಮೂವರ ಬಂಧನ
Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ
Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್ ಬಾತ್ಮೀದಾರ ಸೆರೆ
Arrested: ಸುಲಿಗೆ ಸೇರಿ 42 ಕೇಸ್ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್