“ನೀರಿನ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯ: ಧ್ವನಿ ಎತ್ತದ ಸಂಸದರು’


Team Udayavani, Nov 23, 2017, 3:20 PM IST

Ajja-1.jpg

ದೊಡ್ಡಬಳ್ಳಾಪುರ: ಮಹದಾಯಿ, ಕಾವೇರಿ ನೀರಿನ ವಿಚಾರಗಳು ಸೇರಿದಂತೆ ರಾಜ್ಯಕ್ಕೆ ಅನ್ಯಾಯವಾಗುತ್ತಿದ್ದರೂ ಸಂಸದರು ದನಿ ಎತ್ತುತ್ತಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನದ ಹಕ್ಕು ಪ್ರಮುಖವಾಗಿದ್ದು, ಈ ಅಸ್ತ್ರವನ್ನು ಕನ್ನಡಿಗರು ಬಳಸಿಕೊಂಡು ನಾಡಿನ ಹಿತ ಕಾಯುವವರನ್ನು ಸಂಸತ್‌ಗೆ ಆರಿಸಿ ಕಳುಹಿಸಬೇಕಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಎಚ್‌.ಶಿವರಾಮೇಗೌಡ ಹೇಳಿದ್ದಾರೆ.

ನಗರದ ಮಾರುತಿ ನಗರದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ವತಿಯಿಂದ ನಡೆದ ಕನ್ನಡ ರಾಜ್ಯೋತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು. 

ಕನ್ನಡವೆಂದರೆ ಬರೀ ಭಾಷೆಯ ಕೆಲಸವಲ್ಲ: ಕನ್ನಡಿಗರು ಪ್ರತಿಯೊಂದು ಸೌಲಭ್ಯ ಪಡೆಯಲು ಹೋರಾಟ ಮಾಡುವ ವಾತಾವರಣ ಸೃಷ್ಟಿಯಾಗಿರುವುದು ವಿಷಾದಕರ. ಕನ್ನಡ ಭಾಷೆ ವಿಚಾರದಲ್ಲಿಯೂ ಸರ್ಕಾರಗಳು ನಿರ್ಲಕ್ಷ್ಯ ವಹಿಸುತ್ತಿರುವ ಪರಿಣಾಮ ಈಗ ರಾಜ್ಯದಲ್ಲಿ 10 ಸಾವಿರ ಕನ್ನಡ ಶಾಲೆಗಳು ಮುಚ್ಚಿವೆ. ಇಂದಿನ ಜಾಗತೀಕರಣದ ಸಂದರ್ಭದಲ್ಲಿ ಬಹು ರಾಷ್ಟ್ರೀಯ ಕಂಪನಿಗಳು ಹಾಗೂ ಅನ್ಯ ರಾಜ್ಯದವರು ಇಲ್ಲಿನ ಜಮೀನುಗಳನ್ನು ಖರೀದಿಸಿ, ರೈತರನ್ನು ಕೂಲಿ ಕಾರ್ಮಿಕರನ್ನಾಗಿಸುತ್ತಿದ್ದಾರೆ. ಕನ್ನಡದ ಕೆಲಸ ಎಂದರೆ ಬರೀ ಭಾಷೆಯ ಕೆಲಸವಲ್ಲ. ಇಲ್ಲಿನ ಜನರ ಜೀವನ ಹಸನಾಗಬೇಕು. ಬಹು ರಾಷ್ಟ್ರೀಯ ಕಂಪನಿಗಳ ಉತ್ಪನ್ನಗಳನ್ನು ಬಳಸುವ ಬದಲು ಇಲ್ಲಿನ ರೈತರ ಉತ್ಪನ್ನಗಳನ್ನು ಬಳಸಿ ಅವರಿಗೆ ನೆರವಾಗಬೇಕು ಎಂದು ಹೇಳಿದರು.

ಮಕ್ಕಳಿಗೆ ಕನ್ನಡ ಸತ್ವ ಪರಿಚಯಿಸಿ: ಪ್ರಸ್ತುತ ಸಿನಿಮಾ ಸಾಹಿತ್ಯ ಅಸಂಬದ್ಧವಾಗಿದೆ. ಜಗತ್ತಿನ ಅಳಿವಿನ ಅಂಚಿನ ಭಾಷೆಗಳಲ್ಲಿ ಕನ್ನಡವೂ ಒಂದಾಗಿದೆ ಎನ್ನುವುದು ಆತಂಕಕಾರಿಯಾಗಿದ್ದು, ಕನ್ನಡವನ್ನು ಕೊಂದರೆ ನಮ್ಮ ತಾಯಿಯನ್ನು ನಾವು ಹತ್ಯೆ ಮಾಡಿದಂತೆ. ಈ ದಿಸೆಯಲ್ಲಿ ಇಂದಿನ ಮಕ್ಕಳಿಗೆ ಕನ್ನಡ ಭಾಷೆಯ ಸತ್ವವನ್ನು ಪರಿಚರಿಸ ಬೇಕು. ಭಾಷೆಯೊಂದಿಗೆ ನಮ್ಮ ಸಂಸ್ಕೃತಿ ಹಾಸು ಹೊಕ್ಕಾಗಬೇಕು ಎಂದು ಹೇಳಿದರು.

ಕನ್ನಡ ಪರ ಸಂಘಟನೆಗಳ ಕಾರ್ಯ ಶ್ಲಾಘನೀಯ: ನಗರಸಭಾ ಸದಸ್ಯ ಟಿ.ಎನ್‌.ಪ್ರಭುದೇವ್‌ ಮಾತನಾಡಿ, ಕನ್ನಡ ಭಾಷೆಗೆ ಧಕ್ಕೆ ಬಂದಾಗಲೆಲ್ಲಾ ಕನ್ನಡಪರ ಸಂಘಟನೆಗಳು ದನಿ ಎತ್ತಿವೆ. ಆದರೆ ಕನ್ನಡದ ಅನುಷ್ಠಾನ ಇನ್ನೂ ಸಮರ್ಪಕವಾಗಿ ಆಗುತ್ತಿಲ್ಲ. ನಾಮಫ‌ಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿ ಹಾಕುವ ಮೂಲಕ ಎಲ್ಲೆಡೆ ಕನ್ನಡ ಭಾಷೆಯ ಸೊಗಡು ಕಾಣುವಂತಾಗಬೇಕು ಎಂದು ಆಶಿಸಿದರು.

ಕನ್ನಡ ಪಕ್ಷದ ಅಧ್ಯಕ್ಷ ಸಂಜೀವ್‌ ನಾಯಕ್‌ ಮಾತನಾಡಿ, ರಾಜ್ಯದ ಹಿತದೃಷ್ಟಿಯಿಂದ ಇಲ್ಲಿ ಪ್ರಾದೇಶಿಕ ಪಕ್ಷದ ಆಡಳಿತ ಬರುವುದು ಉತ್ತಮ ಎಂದು ಅಭಿಪ್ರಾಯಪಟ್ಟರು. ಬೆಂಗಳೂರಿನ ಶಶಿ ಮೆಲೋಡಿಸ್‌ ತಂಡದಿಂದ ವಾದ್ಯಗೋಷ್ಠಿ ನಡೆಯಿತು. ಸಮಾರಂಭದಲ್ಲಿ ಸರ್ಕಲ್‌ ಇನ್ಸ್‌ಪೆಕ್ಟರ್‌ ಸಿದ್ದರಾಜು, ಎಸ್‌ಐ ಪಿ.ವಿ.ರೆಡ್ಡಿ, ಕಸಾಪ ತಾಲೂಕು ಅಧ್ಯಕ್ಷೆ ಪ್ರಮೀಳಾ, ನಗರಸಭಾ ಸದಸ್ಯ ಕೆಂಪರಾಜ್‌, ನಾಮಿನಿ ಸದಸ್ಯೆ ರೇವತಿ, ಡಾ.ರಾಜ್‌ ಕುಮಾರ್‌ ಅಭಿಮಾನಿಗಳ ಸಂಘದ ತಾಲೂಕು ಅಧ್ಯಕ್ಷ ಸು.ನರಸಿಂಹಮೂರ್ತಿ, ನಗರಸಭಾ ಸದಸ್ಯೆ ಅನುಸೂಯಮ್ಮ ಸುಬ್ರಮಣಿ, ಲಯನ್ಸ್‌
ಕ್ಲಬ್‌ ಅಧ್ಯಕ್ಷ ಸೋಮಶೇಖರ್‌, ನಂಜಪ್ಪ, ಪು. ವೆಂಕಟೇಶ್‌ ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ತಾಲೂಕು ಅಧ್ಯಕ್ಷ ಮರುಳಾರಾಧ್ಯ ಹಾಗೂ ಕರವೇ ಕಾರ್ಯಕರ್ತರು ಭಾಗವಹಿಸಿದ್ದರು.

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.