ವಿಜೃಂಭಣೆಯ ಶ್ರೀನಿವಾಸಸ್ವಾಮಿ ಬ್ರಹ್ಮರಥೋತ್ಸವ
Team Udayavani, Feb 22, 2018, 12:00 PM IST
ಆನೇಕಲ್: ತಾಲೂಕಿನ ಇತಿಹಾಸ ಪ್ರಸಿದ್ಧಿ ಕಿತ್ತಗಾನಹಳ್ಳಿ ಗ್ರಾಮದಲ್ಲಿ ಪುರಾತನ ಕಾಲದಿಂದ ನೆಲೆಸಿರುವ ಶ್ರೀನಿವಾಸಸ್ವಾಮಿ ಬ್ರಹ್ಮರಥೋತ್ಸವ ಭಕ್ತರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನಡೆಯಿತು.
ಕಿತ್ತಗಾನಹಳ್ಳಿ ಗ್ರಾಮದ ಶ್ರೀನಿವಾಸಸ್ವಾಮಿ ದೇವಾಲಯದಲ್ಲಿ ಬೆಳಗ್ಗೆಯಿಂದ ಪೂಜಾ ಧಾರ್ಮಿಕ ಕಾರ್ಯಕ್ರಮಗಳು ವಿಧಿ ವಿಧಾನಗಳಿಂದ ಜರುಗಿತು. 12 ಗಂಟೆಗೆ ರಥೋತ್ಸವ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಸ್ವಾಮಿಯನ್ನು ಹೊತ್ತ ರಥವು ಮಂಗಳ ವಾದ್ಯಗಳೊಂದಿಗೆ ಸಾಗಿತು. ರಾಜ್ಯದ ವಿವಿಧೆಡೆಗಳಿಂದ ಸಾವಿರಾರು ಭಕ್ತರು ಉರಿಬಿಸಿಲಿನ ನಡುವೆಯೂ ರಥೋತ್ಸವದಲ್ಲಿ ಪಾಲ್ಗೊಂಡು ಭಕ್ತಿ ಸಮರ್ಪಿಸಿದರು.
ಜಾತ್ರಾ ಮಹೋತ್ಸವಕ್ಕೆ ಆಗಮಿಸಿದ ಭಕ್ತರಿಗೆ ಅರವಟಿಗೆಗಳಲ್ಲಿ ಪಾನಕ, ಮಜ್ಜಿಗೆ, ಕೊಂಸಬರಿ ಹಾಗೂ
ಅನ್ನದಾಸೋಹ ವಿತರಿಸಲಾಯಿತು. ಇದೇ ಸಂದರ್ಭದಲ್ಲಿ ಕಿತ್ತಗಾನಹಳ್ಳಿ ಗ್ರಾಮಸ್ಥರು ಬೀದಿಯುದ್ದಕ್ಕೂ ಉರಳು
ಸೇವೆ ನಡೆಸಿದರು. ದೇವಾಲಯದ ಅರ್ಚಕ ಸೂರ್ಯನಾರಾಯಣ ದೀಕ್ಷಿತ್ರವರ ನೇತೃತ್ವದಲ್ಲಿ ದೇವತಾ
ಕಾರ್ಯಕ್ರಮಗಳು ನಡೆದವು.
ಕಿತ್ತಗಾನಹಳ್ಳಿ ಗ್ರಾಮದ ಮುಖಂಡರಾದ ವಿ.ಶ್ರೀನಿವಾಸ್ ರೆಡ್ಡಿ, ಶಿವಪ್ಪರೆಡ್ಡಿ, ಮಂಜುನಾಥ್, ಸಂತೋಷ್, ಚೇತನ್,
ಸುಬ್ರಮಣಿ, ವಸಂತ್, ಮಂಜುನಾಥ್ ಸೇರಿದಂತೆ ಅನೇಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Crime: ಸ್ನೇಹಿತನನ್ನೇ ಕೊಲೆ ಮಾಡಿದ್ದ ನಾಲ್ವರು ಆರೋಪಿಗಳ ಸೆರೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ