ಬಿಜೆಪಿ ಕಾರ್ಯಕರ್ತರಿಗೆ ತೊಂದರೆ ಕೊಟ್ರೆ ಹೋರಾಟ


Team Udayavani, May 24, 2018, 12:32 PM IST

bg-1.jpg

ಆನೇಕಲ್‌: ಕಾಂಗ್ರೆಸಿಗರು ಬಿಜೆಪಿ ಕಾರ್ಯಕರ್ತರಿಗೆ ತೊಂದರೆ ಕೊಟ್ಟರೆ ಮಾಜಿ ಮಂತ್ರಿ ಎಂಬುದನ್ನು ಪಕ್ಕಕ್ಕೆ ಇಟ್ಟು ಹೋರಾಟ ಮಾಡುತ್ತೇನೆ ಎಂದು ಮಾಜಿ ಸಚಿವ ಎ.ನಾರಾಯಣಸ್ವಾಮಿ ಗುಡುಗಿದರು.

ಪಟ್ಟಣದಲ್ಲಿ ಆಯೋಜಿಸಿದ್ದ ಬಿಜೆಪಿ ಆತ್ಮಾಲೋಕನ ಸಭೆಯಲ್ಲಿ ಮಾತನಾಡಿದ ಅವರು, ಆನೇಕಲ್‌ ಕ್ಷೇತ್ರದಲ್ಲಿ ಬಿಜೆಪಿ ಸೋಲಿಸಿದ್ದೇವೆ ಎಂದು ಕಾಂಗ್ರೆಸಿಗರು ಬಿಜೆಪಿ ಕಾರ್ಯಕರ್ತರಿಗೆ ಉದ್ದೇಶ ಪೂರ್ವಕವಾಗಿ ತೊಂದರೆ ನೀಡುತ್ತಿರುವುದು ಗಮನಕ್ಕೆ ಬಂದಿದೆ. ಯಾವುದೇ ಕಾರಣಕ್ಕೂ ಕಾಂಗ್ರೆಸಿಗರ ದಬ್ಟಾಳಿಕೆ ಸಹಿಸಿಕೊಂಡು ಮನೆಯಲ್ಲಿ ಕೂತುಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.

ಆನೇಕಲ್‌ ಕ್ಷೇತ್ರದಲ್ಲಿ ಬಿಜೆಪಿಯನ್ನು ಜನತೆ ತಿರಸ್ಕರಿಸಿಲ್ಲ, ಪಕ್ಷದಲ್ಲಿದ್ದ ಕೆಲವು ಕುತಂತ್ರಿಗಳು ಕಾಂಗ್ರೆಸಿಗರು ನೀಡಿದ ಹಣದ ಆಸೆಗೆ ಬಲಿಯಾಗಿ ತಮ್ಮನ್ನು ಸೋಲಿಸಿದ್ದಾರೆ. ಬಿಜೆಪಿಯಲ್ಲಿರುವ ಕುತಂತ್ರಿಗಳನ್ನು ಪಕ್ಷದಿಂದ ಹೊರಹಾಕುವ
ಮುಂಚೆಯೇ ಅವರೇ ಇಲ್ಲಿಂದ ಜಾಗ ಮಾಡಿದರೆ ಒಳಿತು ಎಂದು ಎ.ನಾರಾಯಣಸ್ವಾಮಿ ಎಚ್ಚರಿಕೆ ಸಂದೇಶವನ್ನು ನೀಡಿದರು. 

ಅಧಿಕಾರ, ಹಣಕ್ಕೋಸ್ಕರ ರಾಜಕಾರಣಕ್ಕೆ ಬಂದವನಲ್ಲ, ಪಕ್ಷ ಮತ್ತು ಕಾರ್ಯಕರ್ತರಿಗೆ ರಕ್ಷಣೆ ಹಾಗೂ ಕ್ಷೇತ್ರದ ಅಭಿವೃದ್ಧಿಯೇ ತನ್ನ ಧ್ಯೇಯವಾಗಿದೆ. ಚುನಾವಣೆಯಲ್ಲಿ ಎಷ್ಟು ಬಾರಿ ಸೋತರೂ ಕ್ಷೇತ್ರವನ್ನು ಬಿಟ್ಟು ಹೋಗುವ
ಪ್ರಶ್ನೆಯೇ ಇಲ್ಲ ಎಂದು ಹೇಳಿದರು. 

ಎ.ನಾರಾಯಣಸ್ವಾಮಿ ಕೋಟ್ಯದೀಶರು, 2 ಸಾವಿರ ಕೋಟಿ ರೂ.ಗಿಂತ ಹೆಚ್ಚು ಹಣವನ್ನು ಅಕ್ರಮವಾಗಿ ಸಂಪಾದಿಸಿದ್ದಾರೆ ಎಂದು ಹೇಳುವ ಕಾಂಗ್ರೆಸಿಗರು, ಕಳೆದ 20 ವರ್ಷಗಳಲ್ಲಿ ಒಂದೇ ಒಂದು ಅಕ್ರಮದಲ್ಲಿ ಭಾಗಿಯಾಗಿರುವ ಯಾವುದಾದರು ಒಂದು ಉದಾಹರಣೆ ನೀಡಿದರೆ, ಇಂದೇ ರಾಜಕೀಯದಿಂದ ನಿವೃತ್ತಿ ಹೊಂದುವುದಾಗಿ ಎಚ್ಚರಿಕೆ ನೀಡಿದರು. 

ಬಿಜೆಪಿಯ ಹೆಸರಿನಲ್ಲಿ ಉನ್ನತ ಸ್ಥಾನವನ್ನು ಪಡೆದು, ಪಕ್ಷದ ಹೆಸರಿನಲ್ಲಿ ಕೋಟ್ಯದೀಶರಾಗಿ ಕೆಲವರು ಒಂದೇ ತಟ್ಟೆಯಲ್ಲಿ ಊಟ ಮಾಡಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸುವ ಮೂಲಕ ಬೆನ್ನಿಗೆ ಚೂರಿ ಹಾಕಿದ್ದಾರೆ. ಇಂತಹ ಕುತಂತ್ರಿಗಳಿಗೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ಬಿಜೆಪಿ ಕಾರ್ಯಕರ್ತರು ನೀಡಲಿದ್ದಾರೆ ಎಂದು ಹೇಳಿದರು. ಸಂವಿಧಾನದ ಅವರಿವಿಲ್ಲದ ಎರಡು ಪಕ್ಷಗಳು ಸರ್ಕಾರ ರಚಿಸಿವೆ, ಕಾಂಗ್ರೆಸ್‌ ಪಕ್ಷದೊಂದಿಗೆ ಸೇರಿ ಸರ್ಕಾರ ರಚಿಸುವ ಮಾತೇ ಇಲ್ಲ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದರು.

ಆದರೆ, ಇಂದು ಮಾಡಿರುವುದು ಏನು? ತಾಲೂಕಿನಲ್ಲಿ ಕಾಂಗ್ರೆಸ್‌ ಅಟ್ಟಹಾಸಕ್ಕೆ ಬ್ರೇಕ್‌ ಹಾಕುತ್ತೇವೆ, ಅವರ ಭ್ರಷ್ಟಾಚಾರದ ವಿರುದ್ಧ ಹೋರಾಟ ನಿರಂತರವಾಗಿರುತ್ತದೆ ಎಂದು ಎಚ್ಚರಿಕೆ ನೀಡಿದರು. ಬಿಜೆಪಿ ಮುಖಂಡ ನಾರಾಯಣಪ್ಪ, ಮುಖಂಡರಾದ ನರಸಿಂಹರೆಡ್ಡಿ, ಜಗನ್ನಾಥ್‌, ಮುನಿರತ್ನಮ್ಮ ನಾರಾಯಣಪ್ಪ, ನಾರಾಯಣ ಸ್ವಾಮಿ, ಸುರೇಶ್‌, ರಾಮಚಂದ್ರ ಇದ್ದರು. 

ಕ್ಷೇತ್ರದಲ್ಲಿ ಬಿಜೆಪಿ ಸೋತಿಲ್ಲ. ಅದು ಗೆದ್ದಿದೆ. ಕಳೆದ ಚುನಾವಣೆಯಲ್ಲಿ ಕೇವಲ 67 ಸಾವಿರ ಮತಗಳು ಪಡೆದಿತ್ತು.
ಈ ಬಾರಿ ಒಂದೂವರೆ ಲಕ್ಷ ಮತ ಪಡೆದಿದೆ. ಕ್ಷೇತ್ರ ದಲ್ಲಿ ಬಿಜೆಪಿ ಪ್ರಬಲವಾಗಿ ಬೆಳೆದಿದೆ. ಅದಕ್ಕೆ ಕಾರಣರಾದ ಎಲ್ಲಾ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ. 
 ರಾಮಚಂದ್ರ, ಜಿಪಂ ಮಾಜಿ ಅಧ್ಯಕ್ಷ.

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.