5 ಲಕ್ಷ ರೂ ಸಹಿತ ನಾಪತ್ತೆಯಾದ ಯುವತಿಯ ಶವ ಮೋರಿಯಲ್ಲಿ ಪತ್ತೆ
Team Udayavani, Sep 6, 2018, 11:48 AM IST
ಚಿಕ್ಕಬಳ್ಳಾಪುರ: ಬೆಂಗಳೂರು ಗ್ರಾಮಾಂತರದ ದೇವನಹಳ್ಳಿಯ ಹರಳೂರು ನಾಗೇನಹಳ್ಳಿಯಿಂದ ನಾಪತ್ತೆಯಾಗಿದ್ದ 22 ವರ್ಷದ ಯುವತಿಯ ಶವ ಗೌರಿ ಬಿದನೂರು -ಗುಡಿಬಂಡೆ ರಸ್ತೆಯ ಮೋರಿಯೊಂದರಲ್ಲಿ ಕೊಳೆತ ಸ್ಥಿತಿಯಲ್ಲಿ ಬುಧವಾರ ಪತ್ತೆಯಾಗಿದೆ.
ಹತ್ಯೆಗೀಡಾದ ಯುವತಿ ಭಾಗ್ಯಶ್ರಿ ಎನ್ನುವವರಾಗಿದ್ದು, ಕನ್ನಮಂಗಲಪಾಳ್ಯದ ಮನಿ ಟ್ರಾನ್ಸ್ಫರ್ ಕಂಪೆಯಿಂದ ದೇವನಹಳ್ಳಿಗೆ 5 ಲಕ್ಷ ರೂಪಾಯಿ ಹಣ ಕೊಂಡೊಯ್ಯುತ್ತಿದ್ದ ವೇಳೆ ನಾಪತ್ತೆಯಾಗಿದ್ದರು. ಈ ಸಂಬಂಧ ಪೋಷಕರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.
ಯುವತಿಯ ಶವ ಪತ್ತೆಯಾದುದನ್ನು ತಾಳೆ ಹಾಕಿ ಪೊಲೀಸರು ತನಿಖೆ ನಡೆಸಿದಾಗ ಮೃತದೇಹ ಭಾಗ್ಯಶ್ರಿಯದ್ದು ಎಂದು ಧೃಡಪಟ್ಟಿದೆ.
ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕಾರ್ತಿಕ್ ರೆಡ್ಡಿ ಸಹಿತ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.
ಭಾಗ್ಯಶ್ರಿಯನ್ನು ದುಷ್ಕರ್ಮಿಗಳು ಅಪಹರಿಸಿ ಕೊಲೆಗೈದು ಮೋರಿಯಲ್ಲಿ ಬಿಸಾಕಿ ಪರಾರಿಯಾಗಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ