ಬನ್ನೇರುಘಟ್ಟ ರಸ್ತೆಯಲ್ಲಿ ಸಂಚಾರವೇ ಸವಾಲು


Team Udayavani, Sep 27, 2018, 2:08 PM IST

blore-g-1.jpg

ಆನೇಕಲ್‌: ಗುರುವಾರ ವಿಶ್ವ ಪ್ರವಾಸೋದ್ಯಮ ದಿನ. ಜಗತ್ತಿನಾದ್ಯಂತ ಪ್ರವಾಸೋದ್ಯಮ ದಿನವನ್ನು ಅದರಲ್ಲೂ ಪ್ರವಾಸಿ ತಾಣಗಳಲ್ಲಿ ಅದ್ಧೂರಿಯಾಗಿ ಆಚರಣೆ ನಡೆಯುತ್ತಿದೆ. ದೇಶದಲ್ಲೂ ಕೇಂದ್ರ , ರಾಜ್ಯ ಸರ್ಕಾರಗಳು ಪ್ರವಾಸೋದ್ಯಮ ದಿನದ ಹಿನ್ನಲೆಯಲ್ಲಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿ ಪ್ರವಾಸಿಗ ರನ್ನು ತನ್ನತ್ತ ಸೆಳೆಯುವ ಕೆಲಸ ಮಾಡುತ್ತಿದೆ. ಆದರೂ, ಅದೆಷ್ಟೊ ಪ್ರವಾಸಿ ತಾಣಗಳಿಗೆ ಮೂಲಭೂತ ಕೊರತೆ ಇರುವುದು ಸರ್ಕಾರಗಳ ನಿರ್ಲಕ್ಷಕ್ಕೆ ಸಾಕ್ಷಿಯಾಗಿದೆ.

ಅದೇ, ಅಂತಾರಾಷ್ಟ್ರೀಯ ಖ್ಯಾತಿಯ ಬನ್ನೇರುಘಟ್ಟ ಜೈವಿಕ ಉದ್ಯಾನವನ. ಇಂತಹ ತಾಣಕ್ಕೆ ಬರುವ ಪ್ರವಾಸಿಗರನ್ನು ವಿಶ್ವ ಪ್ರವಾಸೋದ್ಯಮ ದಿನ ಸ್ವಾಗತ ಕೋರು ತ್ತಿರುವುದು ಮಾತ್ರ ನೀರು ತುಂಬಿದ ಹೊಂಡಗಳು ಎನ್ನುವುದೇ ಸದ್ಯದ ಸ್ಥಿತಿ. ರಸ್ತೆ ದುರಸ್ಥಿಗಾಗಿ ಹಲವು ವರ್ಷಗಳಿಂದ ಮನವಿ, ಆಗ್ರಹ ಮಾಡಿದರೂ ರಸ್ತೆ ಪ್ರಗತಿ ಕಂಡಿಲ್ಲ ಎನ್ನುವುದೇ ಪ್ರವಾ ಸೋದ್ಯಮ ಇಲಾಖೆ ಕಾರ್ಯವೈಖರಿಗೆ ಸಾಕ್ಷಿ.

ವಿಧಾನಸೌಧದಿಂದ ಬನ್ನೇರುಗಘಟ್ಟ ಜೈವಿಕ ಉದ್ಯಾನವನ 22 ಕಿ.ಮೀ. ಅಂತರದಲ್ಲಿದೆ. ಇದರಲ್ಲಿ ಬನ್ನೇರುಘಟ್ಟ ವೃತ್ತದವರೆಗೂ ರಸ್ತೆ ಸಂಚಾರ ದಟ್ಟಣೆ ಯಾದರೂ ರಸ್ತೆ ಸರಿಯಿದೆ. ಆದರೆ, ಬನ್ನೇರುಘಟ್ಟ ವೃತ್ತದಿಂದ ಉದ್ಯಾನವನದ ದ್ವಾರದ ವರೆಗಿನ 1.5 ಕಿ.ಮೀ. ರಸ್ತೆ ಮಾತ್ರ ತೀರಾ ಹದಗೆಟ್ಟಿದ್ದು ಗುಂಡಿಗಳು ಬಿದ್ದಿದೆ. ಇನ್ನೂ ಶನಿವಾರ, ಭಾನುವಾರ , ರಜೆ ದಿನಗ ಳಲ್ಲಿ 1.5 ಕಿ.ಮೀ. ರಸ್ತೆ ಕ್ರಮಿಸಬೇಕಾದರೆ 15-20 ನಿಮಿಷ ಬೇಕು.

ಆಕಸ್ಮಿಕವಾಗಿ ಯಾವುದಾರೂ ವಾಹನ ಅಡ್ಡಾದಿಡ್ಡಿಯಾಗಿ ಚಲಿಸಿದರಂತೂ 30 ನಿಮಿಷಗಳೇ ಬೇಕಾಗುತ್ತದೆ. ಇದು ಸಾಲದು ಎಂಬಂತೆ ಮೋರಿಗಳು ಮುಚ್ಚಿ ಹೋಗಿರುವುದರಿಂದ ಕೊಳಚೆ ನೀರು ರಸ್ತೆ ಮೇಲೆ ಹರಿದು ಹೋಗುತ್ತಿದೆ. ಇನ್ನು ಸಂಪಿಗೆಹಳ್ಳಿ ಬಳಿ ರಾಶಿ ರಾಶಿ ಪ್ಲಾಸ್ಟಿಕ್‌, ತ್ಯಾಜ್ಯ ಹರಡಿದ್ದು ಸ್ವತ್ಛತೆ ಬಗ್ಗೆ ಸ್ಥಳೀಯ ಪಂಚಾಯ್ತಿಗೆ ಕೊಂಚವೂ ಗಮನವಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಕಿರಿದಾದ ರಸ್ತೆ: ಬನ್ನೇರುಘಟ್ಟ ಉದ್ಯಾನವನಕ್ಕೆ ಬರುವ ರಸ್ತೆ ಮಧ್ಯೆ ಸಂಪಿಗೆ ಹಳ್ಳಿ ಗ್ರಾಮ ಸಿಗುತ್ತದೆ. ಇಲ್ಲಿ ರಸ್ತೆ ತೀರಾ ಕಿರಿದಾಗಿದೆ. ಮನೆಗಳು ಅಡ್ಡ ಇರುವುದರಿಂದ ಉದ್ಯಾನವನದ ರಸ್ತೆ ದ್ವಿಪಥ ಮಾಡಲು ಸಮಸ್ಯೆಯಾಗಿದೆ.ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡಲು ಜನಪ್ರತಿನಿಧಿಗಳು ಮುಂದೆ ಬಾರದಿರುವುದು ರಸ್ತೆ ಪ್ರಗತಿ ನನೆಗುದಿಗೆ ಬೀಳಲು ಕಾರಣ.

ಜನಪ್ರತಿನಿಧಿಗಳ ಮೌನ: ಬನ್ನೇರುಘಟ್ಟ  ದ್ಯಾನವನ ಬೆಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರಕ್ಕೆ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ ಸೇರಿದೆ. ಇಲ್ಲಿಗೆ ಬಿಜೆಪಿಯ ಎಂ.ಕೃಷ್ಣಪ್ಪ ಶಾಸಕರಾದರೆ, ಕಾಂಗ್ರೆಸ್‌ನ ಡಿ.ಕೆ.ಸುರೇಶ್‌ ಸಂಸದರಾಗಿದ್ದಾರೆ. ತಮ್ಮ ಅವಧಿಯಲ್ಲಿ ಉದ್ಯಾನವನಕ್ಕೆ ಭೇಟಿ ನೀಡಿ ಸಮಸ್ಯೆ ತಿಳಿಯುವ ಗೋಜಿಗೆ ಹೋಗಿದ್ದಿಲ್ಲ. ರಸ್ತೆ ಕಾಮಗಾರಿಗೆ ಹಲವು ಬಾರಿ ಸಾರ್ವಜನಿಕರು ಮನವಿ ಮಾಡಿದರೂ ಸ್ಪಂದಿಸಿಲ್ಲ ಎಂಬ ಆರೋಪಗಳಿವೆ.

4 ಕೋಟಿ ಮೀಸಲು: ಕಳೆದ ಐದಾರು ವರ್ಷಗಳ ಮನವಿ, ಬೇಡಿಕೆಗಳ ಹಿನ್ನೆಲೆಯಲ್ಲಿ ಅಧಿಕಾರಿಗಳು ಬನ್ನೇರುಘಟ್ಟ ವೃತ್ತದಿಂದ ಉದ್ಯಾನವನದ ವರೆಗಿನ 1.5 ಕಿ.ಮೀ ರಸ್ತೆ ಅಭಿವೃದ್ಧಿಗೆ ಪ್ರವಾಸೋದ್ಯಮ ಇಲಾಖೆ 4 ಕೋಟಿ ರೂ., ಮೀಸಲಿಟ್ಟಿದ್ದು ಆನೇಕಲ್‌ ಲೋಕೋಪಯೋಗಿ ಇಲಾಖೆಗೆ ವರ್ಗಾಯಿಸಿದೆ. ಅಧಿಕಾರಿಗಳು ಟೆಂಡರ್‌ ಕರೆದು ಕಾಮಗಾರಿಯನ್ನು ಕಳೆದ 3 ತಿಂಗಳ ಹಿಂದೆಯೇ ಆರಂಭಿಸಿದ್ದಾರೆ. ಆದರೂ ಕೆಲಸ ಮಾತ್ರ ನಿಂತ ನೀರಿನಂತಾಗಿದೆ.

ಸ್ಥಳೀಯರ ಅಸಹಕಾರ: ರಸ್ತೆ ಅಭಿವೃದ್ಧಿಗೆ ಅದರಲ್ಲೂ ಗ್ರಾಮದೊಳಗಿನ ರಸ್ತೆ ಅಭಿವೃದ್ಧಿ ಮಾಡಬೇಕಾದರೆ ಸ್ಥಳೀಯ ಜನ ಪ್ರತಿನಿಧಿಗಳ ಸಹಕಾರ ಮುಖ್ಯ. ಇಲ್ಲಿನ ಜನ ಪ್ರತಿನಿಧಿಗಳಿರಲಿ ರಸ್ತೆ ಪಕ್ಕದ ಮನೆಗಳವರು, ಅಂಗಡಿಯವರು ಸ್ಪಂದಿಸುತ್ತಿಲ್ಲ ಎಂಬುದು ಗುತ್ತಿಗೆದಾರರು, ಅಧಿಕಾರಿಗಳ ಅಳಲು.

ಸ್ಥಳೀಯರ ಆಕ್ರೋಶ: ಯುವ ಮುಖಂಡ ನಂದಕುಮಾರ್‌, ಕೆಲ ವರ್ಷಗಳಿಂದ ಉದ್ಯಾನವನದ ರಸ್ತೆ ಹದಗೆಟ್ಟಿದೆ. ಮಳೆ ಬಂದರೆ ಕೆಸರು ಗದ್ದೆಯಾಗುತ್ತದೆ. ಇತ್ತೀಚಿಗೆ ಗುಂಡಿಗಳಲ್ಲಿ ನೀರು ನಿಂತು ಹೊಂಡಗಳಾಗಿ ಬಿಟ್ಟಿದೆ. ಇದರಿಂದ ಸ್ಥಳೀಯರಿಗೆ ಸಮಸ್ಯೆ ಹೆಚ್ಚಾಗಿದೆ. ಕೂಡಲೇ ರಸ್ತೆ ಅಭಿವೃದ್ಧಿಪಡಿಸದಿದ್ದರೆ ರಸ್ತೆ ಬಂದ್‌ ಮಾಡಿ ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.

ಶೀಘ್ರ ರಸ್ತೆ ಕಾಮಗಾರಿ ಮುಗಿಸುವ ಭರವಸೆ
ಬನ್ನೇರುಘಟ್ಟ ವೃತ್ತದಿಂದ ಉದ್ಯಾನವನದ ವರೆಗಿನ 1.5 ಕಿ.ಮೀ. ರಸ್ತೆ ಅಭಿವೃದ್ಧಿಗೆ ಕರ್ನಾಟಕ ಪ್ರವಾಸೋದ್ಯಮ ಇಲಾಖೆ 4 ಕೋಟಿ ರೂ. ಮಂಜೂರು ಮಾಡಿದೆ. ಗುತ್ತಿಗೆದಾರರು ಕೆಲಸ ಆರಂಭಿಸಿದ್ದರೆ, ಕೆಲ ಸಣ್ಣ ಪುಟ್ಟ ತೊಡಕುಗಳಿಂದ ಕಾಮಗಾರಿ ನಿಧಾನವಾಗುತ್ತಿದೆ. ಆದರೂ, ಅದಷ್ಟು ಬೇಗ ಕಾಮಗಾರಿ ಮುಗಿಸಲಾಗುತ್ತದೆ. 4 ತಿಂಗಳ ಹಿಂದೆಯೇ ಉದ್ಯಾನವವನದ ರಸ್ತೆ ಅಭಿವೃದ್ಧಿ ಪ್ರಕ್ರಿಯೆ ಆರಂಭವಾಗಿತ್ತು. 2 ತಿಂಗಳ ಹಿಂದೆಯೇ ಕಾಮಗಾರಿ ಆರಂಭಿಸಲಾಗಿದೆ. 300 ಮೀಟರ್‌ ಮೋರಿ ನಿರ್ಮಾಣವಾಗಿದೆ. ರಸ್ತೆ ಒಂದು ಕಡೆ 100 ಮರಗಳಿವೆ, ಮತ್ತೂಂದು ಕಡೆ 82 ಮರಗಳಿವೆ.

ಮರ ತೆರವು ಆಗದೆ ಮೋರಿ ನಿರ್ಮಾಣ ಮಾಡಲು ಆಗುತ್ತಿಲ್ಲ. ಮೋರಿ ನಿರ್ಮಿಸದೆ ರಸ್ತೆ ಅಭಿವೃದ್ಧಿ ಸಾಧ್ಯವಿಲ್ಲ. ಸದ್ಯ ಅರಣ್ಯ ಇಲಾಖೆಗೆ ಮರ ತೆರವು ಮಾಡಲು ಮನವಿ ಮಾಡಲಾಗಿದೆ ಇಲಾಖೆ ಸ್ಥಳ ಮಹಜರ್‌ ಮಾಡಿದ್ದಾರೆ. ಅವರ ಸೂಚನೆಗೆ ನಾವು ಕಾಯುತ್ತಿದ್ದೇವೆ. ಇನ್ನೂ ದೂರವಾಣಿ ಇಲಾಖೆ, ವಿದ್ಯುತ್‌ ಇಲಾಖೆ ಸಹಕಾರವೂ ನಮಗೆ ಬೇಕಿದೆ ಎಂದು ಆನೇಕಲ್‌ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಯತಿರಾಜ್‌ “ಉದಯವಾಣಿ’ಗೆ ತಿಳಿಸಿದರು. 

ಮಂಜುನಾಥ ಎನ್‌.ಬನ್ನೇರುಘಟ್ಟ

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.