ಭಗ್ನ ಪ್ರೇಮಿಯಿಂದ ಬಾಲಕಿ ಬರ್ಬರ ಕೊಲೆ


Team Udayavani, Nov 29, 2018, 12:48 PM IST

blore-9.jpg

ದೊಡ್ಡಬಳ್ಳಾಪುರ: ಮದುವೆಯಾಗಲು ನಿರಾಕರಿಸಿದ ಬಾಲಕಿಯನ್ನು, ಭಗ್ನ ಪ್ರೇಮಿಯೊಬ್ಬ ಆಕೆ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಮಚ್ಚಿನಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದ ರೋಜಿಪುರದ ಸರ್ಕಾರಿ ಶಾಲೆ ಬಳಿ ಬುಧವಾರ ಬೆಳಗ್ಗೆ ನಡೆದಿದೆ.

ಮೃತ ಬಾಲಕಿ ಎನ್‌.ಕೀರ್ತನಾ(15)ಬಸವೇಶ್ವರ ನಗರದ ನಿವಾಸಿಯಾಗಿದ್ದು, ನಗರದ ರೋಜಿಪುರದ ಬಿಎಸ್‌ಎ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು. ಆಕೆಯ ಹತ್ತಿರದ ಸಂಬಂಧಿ ನವೀನ್‌ ಎಂಬಾತ ಈ ಕೃತ್ಯ ಎಸಗಿದ್ದು, ಘಟನೆ ನಡೆದ ನಂತರ ಆತ ವಿಷ ಸೇವಿಸಿರುವುದಾಗಿ ಹೇಳಿ ಆಸ್ಪತ್ರೆ ಸೇರಿದ್ದಾನೆ.

ಘಟನೆ ಹಿನ್ನೆಲೆ: ಬಸವೇಶ್ವರ ನಗರದ ನಿವಾಸಿಗಳಾದ ನಂದೀಶ್‌ ಹಾಗೂ ಲಲಿತಾ ದಂಪತಿಗೆ 3 ಜನ ಹೆಣ್ಣು ಮಕ್ಕಳಿದ್ದು, ಎರಡನೇ ಪುತ್ರಿಯೇ ಕೊಲೆಯಾದ ಕೀರ್ತನಾ. ರೋಜಿಪುರದ ಬಿಎಸ್‌ಎ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಕೀರ್ತನಾಳ ಭಾವನ ಅಣ್ಣ ನವೀನ್‌ ಆಕೆಯನ್ನು ಕೊಲೆಗೈದ ಆರೋಪಿ. ಈತ ಕೀರ್ತನಾಳನ್ನು ಪ್ರೀತಿಸುತ್ತಿದ್ದು, ವಿವಾಹವಾಗುವಂತೆ ಆಕೆಯ ಹಿಂದೆ ಬಿದ್ದಿದ್ದ. ನವೀನ್‌ ತನ್ನ ಹಿಂದೆ ಬಿದ್ದಿದ್ದು, ಶಾಲೆಗೆ ಹೋಗುವಾಗ ಕೀಟಲೆ ಮಾಡುತ್ತಿರುವ ಬಗ್ಗೆ ಕೀರ್ತನಾ ಪೋಷಕರಿಗೆ ತಿಳಿಸಿದ್ದಳು. ಈ ಬಗ್ಗೆ ನಗರ ಪೊಲೀಸ್‌ ಠಾಣೆಯಲ್ಲಿ ದೂರು ಸಹ ನೀಡಲಾಗಿತ್ತು. 20 ದಿನಗಳ ಹಿಂದೆಯಷ್ಟೇ ನವೀನ್‌ನನ್ನು ಠಾಣೆಗೆ ಕರೆಸಿ ಪೊಲೀಸರು ಸೂಕ್ತ ರೀತಿಯಲ್ಲಿ ಬುದ್ಧಿವಾದ ಹೇಳಿ, ಕೀರ್ತನಾಳ ತಂಟೆಗೆ ಹೋಗದಂತೆ ಎಚ್ಚರಿಕೆ ನೀಡಿದ್ದರು.

ಓದಿನಲ್ಲಿ ಮುಂದು: ಈ ಬಗ್ಗೆ ಮಾಹಿತಿ ನೀಡಿದ ಮೃತಳ ತಂದೆ ನಂದೀಶ್‌, ಪೊಲೀಸರು ಠಾಣೆಗೆ ಕರೆಸಿ ನವೀನ್‌ಗೆ ಬುದ್ಧಿ ಹೇಳಿದ ನಂತರ ಕೀರ್ತನಾ ಮನೆಯಿಂದ ಶಾಲೆಗೆ ಹೋಗುವಾಗ ತನ್ನ ತಂಗಿಯೊಂದಿಗೆ ಹೋಗಿ ಬರುತ್ತಿದ್ದಳು. ಒಂದು ವಾರದಿಂದ ಕಾಯಿಲೆ ನಿಮಿತ್ತ ನಗರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದೆ. ಹೀಗಾಗಿ, ಕೀರ್ತನಾ ಒಬ್ಬಳೇ ಶಾಲೆಗೆ ಹೋಗುವ ಅನಿವಾರ್ಯತೆ ಉಂಟಾಗಿತ್ತು. ಈ ವೇಳೆ ಆಕೆಯನ್ನು ಕೊಲೆ ಮಾಡಲಾಗಿದೆ.  ನವೀನ್‌ ವಿವಾಹವಾಗುವಂತೆ ಪೀಡಿಸುತ್ತಿದ್ದರಿಂದ ಭಯಗೊಂಡು ತಮ್ಮ ಮಗಳಿಗೆ ಶಾಲೆಗೆ ಹೋಗುವುದೇ ಬೇಡ ಎಂದು ಹೇಳಿದ್ದೆವು. ಆದರೆ, ಓದುವುದರಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದ ಕೀರ್ತನಾ ಶಾಲೆಗೆ ಹೋಗುತ್ತಿದ್ದಳು ಎಂದು ತಿಳಿಸಿದರು.

ಇನ್ನೂ ವಶಕ್ಕೆ ಪಡೆದಿಲ್ಲ: ಕೀರ್ತನಾ ಕೊಲೆ ಆರೋಪಿ ನವೀನ್‌ಗೆ ವೈದ್ಯರು ಇನ್ನೂ ಚಿಕಿತ್ಸೆ ನೀಡುತ್ತಿದ್ದಾರೆ. ಹೀಗಾಗಿ, ಅಧಿಕೃತವಾಗಿ ಪೊಲೀಸ್‌ ವಶಕ್ಕೆ ಪಡೆದಿಲ್ಲ. ಆದರೆ, ಆಸ್ಪತ್ರೆಯಲ್ಲಿ ಪೊಲೀಸ್‌ ಕಾವಲು ನಿಯೋಜಿಸಲಾಗಿದೆ. ವೈದ್ಯರ ಸೂಚನೆ ನಂತರ ಪೊಲೀಸ್‌ ವಶಕ್ಕೆ ಪಡೆಯ ಲಾಗುವುದು ಎಂದು ಸರ್ಕಲ್‌ ಇನ್‌ಸ್ಪೆಕ್ಟರ್‌ ಜಿ. ಸಿದ್ಧರಾಜು ತಿಳಿಸಿದ್ದಾರೆ. 

ಭೀಕರ ದೃಶ್ಯ ಕಂಡು ಬೆಚ್ಚಿಬಿದ್ದ ಜನ: ಭಗ್ನ ರೋಜಿಪುರದಲ್ಲಿ ಬುಧವಾರ ಬೆಳಗ್ಗೆ ಪ್ರೇಮಿಯೊಬ್ಬ ನಡು ರಸ್ತೆಯಲ್ಲಿಯೇ ಶಾಲಾ ಬಾಲಕಿಯನ್ನು ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆಯಿಂದ ಜನರು ಬೆಚ್ಚಿ ಬಿದ್ದಿದ್ದಾರೆ.

 ನಗರದಲ್ಲಿ ಇದೇ ಪ್ರಥಮ ಬಾರಿಗೆ ನಡು ರಸ್ತೆಯಲ್ಲಿಯೇ ಯುವತಿಯನ್ನು ಕೊಚ್ಚಿ ಹಾಕಿರುವುದು ಇದೇ ಮೊದಲಾಗಿದೆ. ರೋಜಿಪುರದಲ್ಲಿ ಖಾಸಗಿ ಶಾಲೆ ಹಾಗೂ ಸರ್ಕಾರಿ ಪ್ರಾಥಮಿಕ ಶಾಲೆಗಳಿದ್ದು, ಶಾಲೆಯ ಹಿಂಭಾಗದಲ್ಲಿಯೇ ಈ ಭೀಕರ ಕೊಲೆ
ನಡೆದಿರುವುದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರು ಭಯಭೀತರಾಗಿದ್ದಾರೆ.  

ಟಾಪ್ ನ್ಯೂಸ್

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

8-gadag

Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು

SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Kanakapura ಚುನಾವಣೆ ಉಸ್ತುವಾರಿ ಹೊಣೆ ನಾನೇ ಹೊತ್ತುಕೊಳ್ಳುವೆ: ಸಿಪಿವೈ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Lok sabha polls: ಬೆಂ. ಗ್ರಾಮಾಂತರ; ಡಾ.ಮಂಜುನಾಥ್‌ ಸ್ಪರ್ಧೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Bannerghatta Biological Park: ಚಿರತೆ ಮರಿಗಳಿಗೆ ಉದ್ಯಾನವನದ ಸಿಬ್ಬಂದಿ ಆಸರೆ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

Road Dispute: ರಸ್ತೆ ವಿವಾದ; ಪೊಲೀಸ್‌ ಠಾಣೆ ಮೆಟ್ಟಿಲೇರಿದ ಪ್ರಕರಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Kollywood: ಸ್ಟೈಲಿಶ್‌ ಲುಕ್‌ನಲ್ಲಿ ಜಯಂ ರವಿ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Sandalwood: ಗಾಡ್‌ ಪ್ರಾಮಿಸ್‌ಗೆ ಸ್ಕ್ರಿಪ್ಟ್  ಪೂಜೆ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್‌ ನಿರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.