ವಿಷ್ಣು ಸ್ಮಾರಕ ಬೆಂಗಳೂರಲ್ಲೇ ನಿರ್ಮಿಸಿ


Team Udayavani, Nov 29, 2018, 12:56 PM IST

blore-10.jpg

ನೆಲಮಂಗಲ: ಸಾಹಸಸಿಂಹ ಡಾ.ವಿಷ್ಣು ವರ್ಧನ್‌ ಸ್ಮಾರಕವನ್ನು ಬೆಂಗಳೂರಿನಲ್ಲಿಯೇ ನಿರ್ಮಾಣ ಮಾಡಬೇಕೆಂದು ಆಗ್ರಹಿಸಿ ವಿಷ್ಣು ವರ್ಧನ್‌ ಸೇವಾ ಸಮಿತಿ ಕಾರ್ಯಕರ್ತರು ಬೃಹತ್‌ ಪ್ರತಿಭಟನೆ ನಡೆಸಿದರು.

ಪಟ್ಟಣ ಸೊಂಡೆಕೊಪ್ಪ ರಸ್ತೆಯಲ್ಲಿರುವ ಹೊನ್ನಗಂಗಯ್ಯನ ಪಾಳ್ಯದಲ್ಲಿರುವ ಡಾ. ವಿಷ್ಣುವರ್ಧನ್‌ ಮಂದಿರದ ಎದುರು ಡಾ.
ವಿಷ್ಣು ಸೇವಾ ಸಮಿತಿ ಪದಾಧಿಕಾರಿಗಳು ಮತ್ತು ವಿಷ್ಣು ಅಭಿಮಾನಿಗಳು ಬೃಹತ್‌ ಪ್ರತಿಭಟನೆ ನಡೆಸುವ ಮೂಲಕ ಸರ್ಕಾರ ಕೂಡಲೆ ಸ್ಮಾರಕ ನಿರ್ಮಿಸಬೇಕೆಂದು ಒತ್ತಾಯಿಸಿದರು.

ಮೂವರೂ ದಿಗ್ಗಜರು ಒಂದೇ ಕಡೆ: ಈ ವೇಳೆ ಮಾತನಾಡಿದ ಡಾ.ವಿಷ್ಣು ಸೇವಾ ಸಮಿತಿ ರಾಜ್ಯಾಧ್ಯಕ್ಷ ವಿ.ಕುಮಾರ್‌, ಕಳೆದ 9 ವರ್ಷಗಳಿಂದ ವಿಷ್ಣು ಸ್ಮಾರಕ ನಿರ್ಮಾಣ ವಾಗುತ್ತದೆ ಎಂದು ಕಾತರದಿಂದ ಕಾಯುತ್ತಿದ್ದೇವೆ. ಆದರೆ, ವಿಷ್ಣು ಅಣ್ಣನಿಗೆ ಸ್ಮಾರಕ ನಿರ್ಮಾಣ ಮಾಡಲು ಸರ್ಕಾರ ಮುಂದಾಗದೇ ಅಭಿಮಾನಿಗಳಿಗೆ ಮೋಸ ಮಾಡಿದೆ ಎಂದುಆಕ್ರೋಶ ವ್ಯಕ್ತಪಡಿಸಿದರು. 

ಕಂಠೀರವ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಮಾಡಲಾಗುವುದು ಎಂಬ ಮುಖ್ಯಮಂತ್ರಿ ಕುಮಾರಸ್ವಾಮಿ
ಮಾತು ಕೇಳಿ ಬಹಳ ಸಂತೋಷವಾಗಿತ್ತು. ಆದರೆ, ನಟ ಅನಿರುದ್ಧ ಹೇಳಿಕೆ ಸರಿಯಲ್ಲ. ನಮಗೆ ವಿಷ್ಣು ಸ್ಮಾರಕ ಎಲ್ಲಾದರೂ ಪರವಾಗಿಲ್ಲ. ಪ್ರಥಮ ಆದ್ಯತೆಯಾಗಿ ಕಠೀರವ ಸ್ಟುಡಿಯೊದಲ್ಲೇ ಸ್ಮಾರಕ ನಿರ್ಮಾಣವಾದರೆ ಕನ್ನಡ ಚಲನ ಚಿತ್ರ ರಂಗದ ಮೂವರೂ ದಿಗ್ಗಜರನ್ನು ಒಂದೇ ಕಡೆ ನೋಡುವ ಭಾಗ್ಯ ನಮ್ಮದಾಗುತ್ತದೆ ಎಂದು ಹೇಳಿದರು.

ಬೆಂಗಳೂರಿನಲ್ಲೇ ವಿಷ್ಣು ಮಂದಿರ ನಿರ್ಮಿಸಿ: ಈ ವಿಚಾರದಲ್ಲಿ ನಟ ಅನಿರುದ್ಧ್ ವೈಯಕ್ತಿಕ ವಿಚಾರಗಳನ್ನು ಮುಂದೆ
ತರದೇ ಸಾಹಸಸಿಂಹ ವಿಷ್ಣುರ ಸ್ಮಾರಕ ನಿರ್ಮಾಣ ಮಾಡಬೇಕು. ಮುಖ್ಯ ಮಂತ್ರಿಗಳು ಯಾರ ಮಾತಿಗೂ ಗಮನ ಹರಿಸದೇ ಅಭಿಮಾನಿಗಳ ಆಸೆಯಂತೆ ಬೆಂಗಳೂರಿನಲ್ಲಿಯೇ ವಿಷ್ಣು ಮಂದಿರ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು.

ರಾಜ್ಯಾದ್ಯಂತ ಪ್ರತಿಭಟನೆ ಎಚ್ಚರಿಕೆ: ಸ್ಮಾರಕ ನಿರ್ಮಾಣ ಮಾಡದಿದ್ದರೆ ನೆಲಮಂಗಲ ದಿಂದ ಬೆಂಗಳೂರಿನವರೆಗೂ ಬೃಹತ್‌ ಮೆರೆವಣಿಗೆ ಮತ್ತು ರಾಜ್ಯಾದ್ಯಂತ ಪ್ರತಿ ಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ವಿಷ್ಣು ಅಭಿಮಾನಿ ಯಶ್ವಂತ್‌ ಮಾತನಾಡಿ, ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಅಭಿಮಾನಿಗಳಿಂದ ಪೂರ್ಣ ಸಹಕಾರವಿದೆ. ಬೆಂಗಳೂರಿನಲ್ಲಿಯೇ ಸ್ಮಾರಕ ನಿರ್ಮಾಣ ಮಾಡಿದರೆ ಅಭಿಮಾನಿಗಳು ಅವರ ನೆರಳಲ್ಲಿ ಕುಳಿತು ಅವರ ಆಶ್ರಯ ಪಡೆದಷ್ಟು ಸಂತೋಷ ಪಡುತ್ತೇವೆ. ಸಮಾಜಕ್ಕೆ ವಿಷ್ಣುವರ್ಧನ್‌ರ ಕೊಡುಗೆ ಅಪಾರವಾಗಿದೆ. ಸರ್ಕಾರ 9 ವರ್ಷಗಳಿಂದ ಸತಾಯಿಸುತ್ತಿರುವುದು ವಿಷ್ಣು ಮತ್ತು ಅಭಿಮಾನಿಗಳಿಗೆ ಮಾಡಿದ ಮೋಸ ಎಂದರು.

 ಈ ಸಂದರ್ಭದಲ್ಲಿ ಡಾ.ವಿಷ್ಣು ಸೇವಾ ಸಮಿತಿ ಸದಸ್ಯ ಯಶ್ವಂತ್‌, ಉಮೇಶ್‌, ಮಂಜುನಾಥ್‌, ಸುರೇಶ್‌, ಪ್ರಮೋದ್‌,
ನಾಗರಾಜು, ಸ್ನೇಕ್‌ರಾಜು, ಕೃಷ್ಣಮೂರ್ತಿ, ಧನುಷ್‌, ಲಕ್ಷ್ಮೀಕಾಂತ್‌ ಹಾಗೂ ನೂರಾರು ವಿಷ್ಣು ಅಭಿಮಾನಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.