ತಮ್ಮನಿಂದ ಪತಿಯ ಮರ್ಯಾದೆ ಹತ್ಯೆ; ನೊಂದ ಪತ್ನಿ ಆತ್ಮಹತ್ಯೆ
Team Udayavani, Dec 6, 2018, 11:55 AM IST
ದೇವನಹಳ್ಳಿ: ಪತಿಯ ಮರ್ಯಾದೆ ಹತ್ಯೆ ಬಳಿಕ ತೀವ್ರವಾಗಿ ಮನನೊಂದಿದ್ದ ಪತ್ನಿಯೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಿದಲೂರು ಗ್ರಾಮದಲ್ಲಿ ನಡೆದಿದೆ.
6 ತಿಂಗಳ ಹಿಂದೆ ಅಂತರ್ಜಾತಿ ಪ್ರೇಮ ವಿವಾಹವಾಗಿದ್ದ 28 ರ ಹರೆಯದ ಮೀನಾ ಎಂಬಾಕೆ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನವೆಂಬರ್ 21 ರಂದು ಪತಿ ಹರೀಶ್ನನ್ನು ಮೀನಾಳ ತಮ್ಮ ಬರ್ಬರವಾಗಿ ಹತ್ಯೆಗೈದಿದ್ದ.
ಹತ್ಯೆಗೀಡಾಗಿದ್ದ ಹರೀಶ್ ಮತ್ತು ಮೀನಾ ಸಹೋದರ ವಿನಯ್ ಇಬ್ಬರು ಸ್ನೇಹಿತರಾಗಿದ್ದರು. ವಿನಯ್ ಮನೆಗೆ ಹರೀಶ್ ಆಗಮಿಸಿದಾಗ ಮೀನಾ ಪರಿಚಯವಾಗಿ ಪ್ರೇಮಾಂಕುರವಾಗಿತ್ತು.
ವಿನಯ್ ಮತ್ತು ಮನೆಯವರ ತೀವ್ರ ವಿರೋಧದ ನಡುವೆಯೂ ಮೀನಾ ಮತ್ತು ಹರೀಶ್ ವಿವಾಹವಾಗಿದ್ದರು.
ನವೆಂಬರ್ 21 ರಂದು ಹರೀಶ್ನನ್ನು ಚೀಟಿ ಹಣ ನೀಡಲೆಂದು ಗುಲಾಬಿ ತೋಟಕ್ಕೆ ಕರೆದೊಯ್ದು ವಿನಯ್ ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈದು ಪೊಲೀಸರಿಗೆ ಶರಣಾಗಿದ್ದ.
ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಮೀನಾ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ