ಕುಡಿವ ನೀರಿನ ಸಮಸ್ಯೆ ನೀಗಿಸದಿದ್ದರೆ ಕ್ರಮ


Team Udayavani, Feb 20, 2019, 7:30 AM IST

kudiva.jpg

ದೊಡ್ಡಬಳ್ಳಾಪುರ: ತಾಲೂಕಿನಲ್ಲಿ ಬರದ ನಡುವೆಯೇ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು, ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಪರ್ಯಾಯ ಕ್ರಮಗಳಿಗೆ ಸ್ಪಂದಿಸದ ಪಿಡಿಒಗಳ ವಿರುದ್ಧ ಕಠಿಣ ಕ್ರಮ ಅನಿವಾರ್ಯ ಎಂದು ಶಾಸಕ ಟಿ.ವೆಂಕಟರಮಣಯ್ಯ ಎಚ್ಚರಿಕೆ ನೀಡಿದರು. ನಗರದ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ತಾಲೂಕಿನಲ್ಲಿ ಬರಆವರಿಸಿದ್ದು, ಅಧಿಕಾರಿಗಳು ಹೊಣೆಗಾರಿಕೆಯಿಂದ ಕಾರ್ಯನಿರ್ವಹಿಸಬೇಕೆಂದು ಸೂಚಿಸಿದರು.

ಕೊಳವೆಬಾವಿಯಿಂದ ನೀರು ಸಾಧ್ಯವೆ?: ಬರಪೀಡಿತ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಡೆಗಟ್ಟಲು ಹಾಗೂ ಪರ್ಯಾಯ ಕ್ರಮಗಳ ಬಗ್ಗೆ ಮುಂಜಾಗ್ರತೆ ವಹಿಸಲು ಜಿಲಾಡಳಿತ ಹಾಗೂ ತಾಲೂಕು ಆಡಳಿತದಳು ಸಂಪೂರ್ಣ ಸಿದ್ಧವಾಗಿವೆ. ಅನವಶ್ಯಕವಾಗಿ ಕೊಳವೆ ಬಾವಿ ಕೊರೆಸದೇ, ಸಾಧ್ಯವಾದಷ್ಟು ನೀರಿನ ಲಭ್ಯತೆ ಕಡಿಯಾಗಿರುವ ಕೊಳವೆ ಬಾವಿಗಳಿಂದಲೇ ನೀರು ಹೊರತೆಗೆಯಲು ಹೆಚ್ಚಿನ ಆದ್ಯತೆ ನೀಡಬೇಕು. ರೈತರಿಂದ ನೀರು ಪಡೆಯಲು ಸಾಧ್ಯವೇ ಎಂಬುದರ ಕುರಿತು ಪಿಡಿಒಗಳು ತ್ವರಿತವಾಗಿ ಚಿಂತನೆಗೆ ನಡೆಸಬೇಕೆಂದರು.

ಬೆಸ್ಕಾಂ ಸಿಬ್ಬಂದಿ ವಿರುದ್ಧ ಕಿಡಿ: ಇನ್ನು ಕೆಲ ಗ್ರಾಮಗಳಿಗೆ ನೀರು ಪೂರೈಸ‌ಲು ವಿದ್ಯುತ್‌ ಸಂಪರ್ಕ, ಟಿ.ಸಿ.ಬದಲಿಸುವುದು ಸೇರಿದಂತೆ ಅನೇಕ ಸಮಸ್ಯೆಗಳು ಬೆಸ್ಕಾಂ ಸಿಬ್ಬಂದಿಯಿಂದ ಉಂಟಾಗುತ್ತಿದೆ. ರೈತರ ಟಿ.ಸಿ.ಬದಲಿಸಲು ಟ್ರ್ಯಾಕ್ಟರ್‌ ತರಬೇಕೆಂಬ ಅಘೋಷಿತ ನಿಯಮ ಮಾಡಿರುವ ಬಗ್ಗೆ ದೂರುಗಳು ಹೆಚ್ಚಾಗಿವೆ. ಬೇಜವಾಬ್ದಾರಿ ತೋರುವ ಬದಲು ತಾಲೂಕಿನಿಂದ ವರ್ಗಾವಣೆ ಮಾಡಿಸಿಕೊಂಡು ಹೋಗಬಹುದು. ಇಲಾಖೆಗಳಲ್ಲಿ ಸಾರ್ವಜನಿಕರಿಗೆ ಸ್ಪಂದಿಸುವಂತಹ ಅಧಿಕಾರಿಗಳು ಬೇಕೆ ಹೊರತು, ಬೇಜವಾಬ್ದಾರಿ ಅಧಿಕಾರಿಗಳ ಅವಶ್ಯಕತೆಯಿಲ್ಲ ಎಂದು ಹರಿಹಾಯ್ದರು.

ತಾಪಂ ಅಧ್ಯಕ್ಷ ಎಚ್‌. ವಿ.ಶ್ರೀವತ್ಸ ಮಾತನಾಡಿ, ತಾಲೂಕಿನಲ್ಲಿ ನೀರಿನ ಸಮಸ್ಯೆಯಿದೆ. ನೀರು ಲಭ್ಯವಿರುವ ಗ್ರಾಮಗಳಲ್ಲಿ ನೀರು ಸರಬರಾಜುದಾರರು ಸಮರ್ಪಕವಾಗಿ ಕಾರ್ಯನಿರ್ವಹಿಸದ ಕಾರಣ ನೀರು ಪೋಲಾಗುತ್ತಿದೆ. ಬರದ ಭೀಕರತೆ ಹೆಚ್ಚಾಗಿದ್ದು, ನೀರಿನ ಮಹತ್ವದ ಕುರಿತು ಗ್ರಾಪಂ ಪಿಡಿಒಗಳು ನೀರು ಸರಬರಾಜುದಾರರಿಗೆ ಕಟ್ಟುನಿಟ್ಟಿನ ಆದೇಶ ನೀಡಬೇಕು.ಅಲ್ಲದೇ, ನೀರಿನ ಸಮಸ್ಯೆ ಉಂಟಾದರೆ ಕಚೇರಿಯಲ್ಲಿ ಕುಳಿತು ಆದೇಶ ನೀಡದೇ, ಸ್ಥಳಕ್ಕೆ ತೆರಳಿ ಸಾಧಕ, ಭಾದಕಗಳ ಬಗ್ಗೆ ಚರ್ಚಿಸಿ ತೀರ್ಮಾನಿಸಬೇಕೆಂದರು.

ತಾಲೂಕಿನ ಕೆಲವು ಗ್ರಾಪಂಗಳಲ್ಲಿ ನೀರಿಗಾಗಿ 1,000 ಅಡಿ ಆಳಕ್ಕೆ ಕೊಳವೆಬಾವಿ ಕೊರೆಸುವುದರ ಅವಶ್ಯಕತೆ ಏನು?, ಅದಕ್ಕೆ ಬೇಕಾದ 25 ಎಚ್‌ಪಿ ಮೋಟರ್‌ ಖರೀದಿಗೆ ಅನುದಾನ ಸಿಗುವುದೇ ಎಂಬ ಬಗ್ಗೆ ಚಿಂತಿಸಬೇಕಿದೆ ಎಂದು ಸಲಹೆ ನೀಡಿದರು. ಸಭೆಯಲ್ಲಿ ಕೆಆರ್‌ಡಿಎಲ್‌ ಇಲಾಖೆಯಿಂದ ಸ್ಥಾಪಿಸಲಾದ ಶುದ್ಧ ಕುಡಿಯುವ ನೀರಿನ ಘಟಕಗಳ ಪರಿಶೀಲನೆ, ದುಸ್ಥಿತಿಗೆ ಬಂದಿರುವ ಘಟಕಗಳ ಪಟ್ಟಿ ಸಂಗ್ರಹಿಸಿ, ದುರಸ್ತಿಗೆ ಸೂಚನೆ, ಶಾಲೆಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಲು ಒತ್ತು ನೀಡುವುದು,

ನಗರ ಹಾಗೂ ಕನಸವಾಡಿಯಲ್ಲಿ ಎಲ್‌ಕೆಜಿಯಿಂದ ಪಿಯುಸಿ ವರೆಗೆ ಆಂಗ್ಲ ಮಾಧ್ಯಮ ಶಾಲೆ ಸ್ಥಾಪನೆ, ಶಾಲಾ ಅವಧಿಯಲ್ಲಿ ನಗರದಲ್ಲಿರುವ ಶಿಕ್ಷಕರ ಕುರಿತು ನಿಗಾ ವಹಿಸುವುದು, ನಗರದಲ್ಲಿ ರಸ್ತೆ ಕಾಮಗಾರಿ ನಡೆಸಲು ಸ್ಪಂದಿಸದ ಅರಣ್ಯ ಹಾಗೂ ಬೆಸ್ಕಾಂ ಇಲಾಖೆಗೆ ಹೆಚ್ಚರಿಕೆ ನೀಡುವುದು, ಮಾದಗೊಂಡನಹಳ್ಳಿ ರಸ್ತೆ ಸರ್ವೆ ನಡೆಸಲು ಲೋಕೋಪಯೋಗಿ ಅಧಿಕಾರಿಗಳಿಗೆ‌ ಮನವಿ ಮಾಡುವುದು, ರಸ್ತೆ ಕಾಮಗಾರಿ ವಿಳಂಬ, ಸೂಕ್ತ ಮಾಹಿತಿ ಹಾಗೂ ದಾಖಲೆಗಳಿಲ್ಲದೇ ಸಭೆಗೆ ಬರುವ ಅಧಿಕಾರಿಗಳಿಗೆ ಛೀಮಾರಿ ಹಾಕುವುದು ಸೇರಿದಂತೆ ವಿವಿಧ ವಿಚಾರಗಳ ಕುರಿತು ಸದಸ್ಯರು ಸ ಭೆಯ ಗಮನಕ್ಕೆ ತಂದರು.

20 ವಾರಗಳ ಮೇವು ಲಭ್ಯ: ಪಶುಸಂಗೋಪನೆ ಇಲಾಖೆಯ ಡಾ.ವಿಶ್ವನಾಥ್‌ ಮಾತನಾಡಿ, ತಾಲೂಕಿನಲ್ಲಿ ಮುಂಬರುವ 15 ರಿಂದ 20 ವಾರಗಳ ಕಾಲ ಮೇವಿನ ಲಭ್ಯತೆ ಇದೆ. ಈಗಾಗಲೇ ನೀರಾವರಿ ಹಾಗೂ ದನಕರುಗಳನ್ನು ಹೊಂದಿರುವ ರೈತರಿಗೆ 5 ಸಾವಿರ ಮೇವಿನ ಕಿಟ್‌ಗಳನ್ನು ನೀಡಲಾಗಿದೆ. ಹೋಬಳಿಗೊಂದು ಗೋಶಾಲೆ ಹಾಗೂ ಎರಡು ಮೇವಿನ ಬ್ಯಾಂಕ್‌ ಸ್ಥಾಪಿಸಲು ಸರಕಾರಕ್ಕೆ ವರದಿ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.

ಸಭೆಯಲ್ಲಿ ತಹಶೀಲ್ದಾರ್‌ ಎಂ.ಕೆ.ರಮೇಶ್‌, ತಾಪಂ ಉಪಾಧ್ಯಕ್ಷೆ ಮೀನಾಕ್ಷಿ ಕೆಂಪಣ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ಮೋಹನ್‌, ಸರ್ಕಲ್‌ ಇನ್ಸ್‌ಪೆಕ್ಟರ್‌ ಜಿ.ಸಿದ್ಧರಾಜು, ನಗರ ಠಾಣೆ ಸಬ್‌ಇನ್ಸ್‌ಪೆಕ್ಟರ್‌ ವೆಂಕಟೇಶ್‌, ಸಹಾಯಕ ಕಾರ್ಯಪಾಲಕ ಅಭಿಯಂತರ ಜಯಪಾಲ್‌ ಮತ್ತಿತರರು ಭಾಗವಹಿಸಿದ್ದರು.

ಟಾಪ್ ನ್ಯೂಸ್

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

10

Electricity problem: ಬೇಸಿಗೆ ಬೆನ್ನಲ್ಲೇ ಕಾಡುತ್ತಿದೆ ವಿದ್ಯುತ್‌ ಸಮಸ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.