‘ದೇಶ, ನಾಗರಿಕರಿಗೆ ಯಾವುದೇ ಲಾಭವಾಗಿಲ್ಲ ‘


Team Udayavani, Nov 9, 2017, 11:40 AM IST

9-Nov-6.jpg

ಬಂಟ್ವಾಳ: ಮೋದಿ ಸರಕಾರ ಒಂದು ರೀತಿಯಲ್ಲಿ ತುಘಲಕ್‌ ದರ್ಬಾರ್‌ ನಡೆಸುತ್ತಿರುವ ಸರ್ವಾಧಿಕಾರಿ ಸರಕಾರವಾಗಿದೆ. ದೇಶದ ಇತಿಹಾಸದಲ್ಲೇ ಕಪ್ಪು ಚುಕ್ಕೆಯಾಗಿ ಮಾರ್ಪಟ್ಟಿರುವ ‘ನೋಟ್‌ ಅಪಮೌಲ್ಯ’ ಕ್ರಮವನ್ನು ಸಮರ್ಥಿಸಲು ಕೋಟ್ಯಂತರ ರೂ. ಖರ್ಚು ಮಾಡಲಾಯಿತಾದರೂ ಅದರಿಂದ ದೇಶಕ್ಕೆ, ಯಾವುದೇ ನಾಗರಿಕನಿಗೆ ಒಂದು ಪೈಸೆಯೂ ಲಾಭವಾಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ ರಮಾನಾಥ ರೈ ತಿಳಿಸಿದರು.

ಅವರು ನ. 8ರಂದು ಬಿ.ಸಿ.ರೋಡ್‌ನಲ್ಲಿ ಕಾಂಗ್ರೆಸ್‌ನ ಮುಂಚೂಣಿ ಘಟಕಗಳ ವತಿಯಿಂದ ನೋಟ್‌ ಬ್ಯಾನ್‌ಗೆ ವರ್ಷ ಪೂರ್ತಿಯಾದ ಹಿನ್ನೆಲೆಯಲ್ಲಿ ಏರ್ಪಡಿಸಲಾದ ಕರಾಳ ದಿನ, ಪ್ರತಿಭಟನ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಕೆಪಿಸಿಸಿ ಸದಸ್ಯ ಚಂದ್ರಪ್ರಕಾಶ್‌ ಶೆಟ್ಟಿ ತುಂಬೆ ಮಾತನಾಡಿ ಬಣ್ಣದ ಮಾತುಗಳಿಂದ ಅಧಿಕಾರಕ್ಕೆ ಬಂದು ಮೂರೂವರೆ ವರ್ಷ ಪೂರೈಸಿದ ನರೇಂದ್ರ ಮೋದಿ ಸರಕಾರ ಒಂದೇ ಒಂದು ಜನಪರ ಕಾರ್ಯಕ್ರಮ ಹಮ್ಮಿಕೊಳ್ಳಲು ಸಾಧ್ಯವಾಗಿಲ್ಲ. ಯುಪಿಎ ಸರಕಾರದ ಯೋಜನೆಗಳನ್ನೇ ಕೈಗೆತ್ತಿಕೊಂಡು ಅದನ್ನೇ ಸಾಧನೆ ಎಂದು ಬಿಂಬಿಸುತ್ತಿದ್ದಾರೆ ಎಂದು ಟೀಕಿಸಿದರು.

ಕಪ್ಪು ಹಣವನ್ನು ಬಯಲಿಗೆಳೆಯಲು ಮೋದಿಗೆ ಸಾಧ್ಯವಾಗುತ್ತಿಲ್ಲ. ಆಡಳಿತ ವೈಫಲ್ಯ ಮರೆಮಾಚಲು ಮೋದಿ ಸರಕಾರ ಮಾಧ್ಯಮಗಳನ್ನು ಕೊಂಡುಕೊಳ್ಳುವ ಕಾರ್ಯಕ್ಕೂ ಕೈ ಹಾಕುತ್ತಿದೆ ಎಂದು ಆರೋಪಿಸಿದರು.

ಜಿ.ಪಂ. ಸದಸ್ಯೆ ಮಂಜುಳಾ ಮಾವೆ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸದಸ್ಯ ಪಿಯೂಸ್‌ ಎಲ್‌. ರೋಡ್ರಿಗಸ್‌, ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಸದಸ್ಯ ಜನಾರ್ದನ ಚಂಡ್ತಿಮಾರ್‌ ಮೊದಲಾದವರು ಪ್ರತಿಭಟನಕಾರರನ್ನುದ್ದೇಶಿಸಿ ಮಾತನಾಡಿದರು.

ಜಿ.ಪಂ. ಸದಸ್ಯ ಬಿ. ಪದ್ಮಶೇಖರ ಜೈನ್‌, ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷ ಹಾಜಿ ಬಿ.ಎಚ್‌. ಖಾದರ್‌, ಬಂಟ್ವಾಳ ಪುರಸಭಾ ಅಧ್ಯಕ್ಷ ಪಿ. ರಾಮಕೃಷ್ಣ ಆಳ್ವ, ಸದಸ್ಯೆ ವಸಂತಿ ಚಂದಪ್ಪ, ವಾಸು ಪೂಜಾರಿ, ಅಕ್ರಮ- ಸಕ್ರಮ ಸಮಿತಿ ಅಧ್ಯಕ್ಷ ಮಾಯಿಲಪ್ಪ ಸಾಲ್ಯಾನ್‌, ಎಪಿಎಂಸಿ ಅಧ್ಯಕ್ಷ ಕೆ ಪದ್ಮನಾಭ ರೈ, ಅರಾಧನ ಸಮಿತಿ ಸದಸ್ಯ ಯೂಸುಫ್‌ ಕರಂದಾಡಿ, ತಾ.ಪಂ. ಸದಸ್ಯೆ ಗಾಯತ್ರಿ ಆರ್‌. ಸಪಲ್ಯ, ಬಿ.ಕೆ. ಇದಿನಬ್ಬ, ಪಕ್ಷದ ಪ್ರಮುಖರಾದ ಶರೀಫ್‌ ಶಾಂತಿಅಂಗಡಿ, ಜನಾರ್ದನ ಚೆಂಡ್ತಿಮಾರ್‌, ವಸಂತಿ ಚಂದಪ್ಪ, ಅಬೂಬಕ್ಕರ್‌ ಸಿದ್ದಿಕ್‌ ಗುಡ್ಡೆಅಂಗಡಿ, ಪ್ರಶಾಂತ್‌ ಕುಲಾಲ್‌, ಗಂಗಾಧರ್‌, ಮುಹಮ್ಮದ್‌ ನಂದಾವರ, ಸಿದ್ದೀಕ್‌ ಸರವು, ಚಿತ್ತರಂಜನ್‌ ಶೆಟ್ಟಿ ಬೊಂಡಾಲ, ಮಹೇಶ್‌ ನಾಯಕ್‌ ಖಂಡಿಗ, ವೆಂಕಪ್ಪ ಪೂಜಾರಿ, ಶ್ರೀಧರ್‌ ರೈ, ಮಧುಸೂಧನ ಶೆಣೈ, ಐಡಾ ಸುರೇಶ್‌, ಹಸೈನಾರ್‌, ಆದಂ ಪಲ್ಲ, ಕಾಸಿಂ ಶಾಂತಿಅಂಗಡಿ ಮೊದಲಾದವರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು. ತಾ.ಪಂ. ಉಪಾಧ್ಯಕ್ಷ ಅಬ್ಟಾಸ್‌ ಅಲಿ ಸ್ವಾಗತಿಸಿ ಪ್ರಸ್ತಾವನೆ ನೀಡಿದರು. ಪ್ರತಿಭಟನೆಯಲ್ಲಿ ಎಲ್ಲರೂ ಕಪ್ಪು ಶಾಲು ಹಾಕಿಕೊಳ್ಳುವ ಮೂಲಕ ನೋಟ್‌ಬ್ಯಾನ್‌ ಕರಾಳ ದಿನಾಚರಣೆ ಆಚರಿಸಿದರು.

ಬಡ ಜನರ ಮೇಲೆ ಗದಾ ಪ್ರಹಾರ
ಕಪ್ಪು ಹಣದ ಹೆಸರಿನಲ್ಲಿ ಮೋದಿ ಸರಕಾರ ನೋಟ್‌ಅಪಮೌಲ್ಯ ನಡೆಸಿ ಜನರ ಮುಂದೆ ಬೆತ್ತಲಾಗಿದೆ. ನೋಟ್‌ ಅಪಮೌಲ್ಯದಿಂದ ದುಡಿದು ತಿನ್ನುವ ಬಡ ಜನರ ಮೇಲೆ ಸವಾರಿ ನಡೆಸಿದರೇ ಹೊರತು ದೊಡ್ಡ ದೊಡ್ಡ ಕುಳಗಳನ್ನು ನಿಯಂತ್ರಿಸಲು ಸಾಧ್ಯವಾಗಿಲ್ಲ. ಇದೀಗ ಪರಿವರ್ತನೆ ಯಾತ್ರೆಯ ಹೆಸರಿನಲ್ಲಿ ರಾಜ್ಯ ಬಿಜೆಪಿ ನಾಯಕರು ಮತ್ತೂಂದು ನಾಟಕಕ್ಕೆ ಯತ್ನಿಸುತ್ತಿದ್ದಾರೆ.
ರಮಾನಾಥ ರೈ, ಉಸ್ತುವಾರಿ ಸಚಿವ 

ಟಾಪ್ ನ್ಯೂಸ್

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ

Lok Sabha Election; ಕಾಂಗ್ರೆಸ್‌ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewq

Congress ನಿಂದ ಬದುಕು; ಬಿಜೆಪಿಯದ್ದು ಭಾವನೆಗಳ ಚೆಲ್ಲಾಟ: ಡಾ| ಭಂಡಾರಿ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.