ಬಿಜೆಪಿಯಿಂದ ಪರಿವರ್ತನೆಗಾಗಿ ನಮ್ಮ ನಡಿಗೆ: ಸರಪಾಡಿಯಲ್ಲಿ ಸಭೆ


Team Udayavani, Jan 21, 2018, 3:01 PM IST

21-Jan-14.jpg

ಪುಂಜಾಲಕಟ್ಟೆ: ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಪ್ರಕಾರ ದ.ಕ. ಜಿಲ್ಲೆಯಲ್ಲಿ ಈಗ ಹೊಂದಿರುವ ಏಳು ವಿಧಾನ ಸಭಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್‌ ಸೋಲನುಭವಿಸಲಿದೆ. ಅದರಲ್ಲಿ ಬಂಟ್ವಾಳ ಕ್ಷೇತ್ರ ಮೊದಲ ಪಟ್ಟಿಯಲ್ಲಿದೆ ಎಂದು ಸಂಸದ ನಳಿನ್‌ ಕುಮಾರ್‌ ಕಟೀಲು ಹೇಳಿದರು.

ಬಿಜೆಪಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ನೇತೃತ್ವದಲ್ಲಿ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರ ಮುಂದಾಳತ್ವದಲ್ಲಿ ಜ.14ರಂದು ಆರಂಭವಾದ 13 ದಿನಗಳ ಬಂಟ್ವಾಳದ ಪರಿವರ್ತನೆಗೆ ಗ್ರಾಮದೆಡೆಗೆ ಬಿಜೆಪಿ ನಡಿಗೆಯ 6ನೇ ದಿನ ಶುಕ್ರವಾರ ರಾತ್ರಿ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಸಮೀಪ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.

ಕಾಂಗ್ರೆಸ್‌ಗೆ ಜಿಲ್ಲೆಯಲ್ಲಿ ಸೋಲಿನ ಭೀತಿ ಇದೆ. ವೇಣುಗೋಪಾಲ್‌ ನುಡಿದಂತೆ ರಮಾನಾಥ ರೈ ಸೋಲಿನ ಪಟ್ಟಿಯಲ್ಲಿದ್ದು, ಜಿಲ್ಲೆಯ 8 ಸ್ಥಾನಗಳಲ್ಲೂ ಬಿಜೆಪಿ ಗೆಲುವು ಸಾಧಿಸುತ್ತದೆ. ಬಂಟ್ವಾಳದಲ್ಲಿ ಬಿಜೆಪಿ ಗೆಲುವು ನಿಶ್ಚಿತ ಎಂದು ರಕ್ತಾಕ್ಷರದಲ್ಲಿ ಬರೆದುಕೊಡುತ್ತೇನೆ. ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಕೆಟ್ಟ ಮುಖ್ಯಮಂತ್ರಿ ಸಿದ್ದರಾಮಯ್ಯ
ಸ್ವಾತಂತ್ರ್ಯ ಅನಂತರ ಕರ್ನಾಟಕ ಕಂಡ ಕೆಟ್ಟ ಮುಖ್ಯ ಮಂತ್ರಿ ಎಂದರೆ ಸಿದ್ದರಾಮಯ್ಯ. ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ಅತಿ ಹೆಚ್ಚು ಕೊಲೆ, ಆತ್ಮಹತ್ಯೆ, ಅಪರಾಧ ಕೃತ್ಯಗಳು ನಡೆದಿವೆ ಎಂದು ನಳಿನ್‌ ವಿಶ್ಲೇಷಿಸಿದರು.

ಪ್ರಧಾನಿ ಮೋದಿ ಅವರನ್ನು ಜನರು ಹೃದಯದಲ್ಲಿಟ್ಟುಕೊಂಡಿದ್ದಾರೆ. ಜಿಎಸ್‌ಟಿ, ಡೀಮಾನಿಟೈಸೇಶನ್‌ ಬಂದಾಗ ರಾಹುಲ್‌ ಕಣ್ಣೀರು ಹಾಕಿದ್ದರು. ಆದರೆ ಅದು ಜನರಿಗೆ ಯಾವುದೇ ತೊಂದರೆ ಮಾಡಲಿಲ್ಲ. ಕರ್ನಾಟಕದಲ್ಲೂ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.

ಶಾಸಕ ಅಂಗಾರ ಅವರು ಮಾದರಿ ಎನಿಸುವ ಕಾರ್ಯ ಮಾಡಿದ್ದಾರೆ. ಆದರೆ ರಮಾನಾಥ ರೈ ಅವರು ಕೇವಲ ತೆಂಗಿನಕಾಯಿ ಒಡೆದದ್ದು ಬಿಟ್ಟರೆ, ಕೇಂದ್ರದ ಯೋಜನೆಗಳನ್ನು ಹಿಂದಿನ ಬಿಜೆಪಿ ಸರಕಾರ ಅನುಷ್ಠಾನಿಸಿದ್ದನ್ನು ತಾನು ಮಾಡಿದ್ದು ಎನ್ನುತ್ತಿದ್ದಾರೆ ಎಂದರು.

ವೃದ್ಧರಿಗೆ ಹಲ್ಲು, ಕಣ್ಣು ಕೊಡಿಸುತ್ತೇವೆ ಎಂದಿದ್ದ ಸಚಿವ ಯು.ಟಿ. ಖಾದರ್‌ ವಾಗ್ಧಾನ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದ ನಳಿನ್‌, ಸರಕಾರ ಅನಿಲಭಾಗ್ಯವನ್ನು ಇನ್ನೂ ಸಮರ್ಪಕವಾಗಿ ಒದಗಿಸಿಲ್ಲ. ನಾವು ಉಜ್ವಲ ಯೋಜನೆ ಮೂಲಕ ಜನರಿಗೆ ನೆರವಾಗಿದ್ದೇವೆ. ಕೇಂದ್ರದ ಯೋಜನೆಯಿಂದಾಗಿಯೇ ಜನರಿಗೆ ನೆರವುಗಳು ಲಭಿಸುತ್ತಿವೆ ಎಂದರು.

ಕಾಂಗ್ರೆಸ್‌ ತೊಲಗಿದರೆ ಶಾಂತಿ: ಹರಿಕೃಷ್ಣ
ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಮಾತನಾಡಿ, ಇಂದು ರಾಜ್ಯ ಸರಕಾರ ದಿವಾಳಿಯಾಗಿದ್ದು, ಇಂದಿರಾ ಕ್ಯಾಂಟೀನ್‌ ಬಂದ್‌ ಆಗಿದೆ. ಕಾಂಗ್ರೆಸ್‌ ಪಕ್ಷವೇ ಇಬ್ಭಾಗವಾಗುತ್ತಿದೆ ಎಂದರು. ಮನೆ ಹಕ್ಕುಪತ್ರ ದುಡ್ಡಿದ್ದವರಿಗೆ ಮಾತ್ರ ಎಂಬಂತಾಗಿದೆ. ಸರಪಾಡಿಯಲ್ಲೂ ಡ್ಯಾಂ ಪರಿಹಾರ ವಿಚಾರದಲ್ಲಿ ತನಿಖೆ ಆಗಬೇಕು ಎಂದು ಒತ್ತಾಯಿಸಿದ ಅವರು, ಕಾಂಗ್ರೆಸ್‌ ತೊಲಗಿದರೆ ಮಾತ್ರ ದ.ಕ. ಜಿಲ್ಲೆಯಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದರು. 

ಜನ ಬೆಂಬಲ: ರಾಜೇಶ್‌ ನಾೖಕ್‌
ಯಾತ್ರೆ ರೂವಾರಿ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಅವರು, ಜನರ ಬಳಿಗೆ ಬಿಜೆಪಿ ವತಿಯಿಂದ ಪರಿವರ್ತನೆಗಾಗಿ ತಾನು ಆರು ದಿನಗಳಿಂದ ಪಾದಯಾತ್ರೆಯಲ್ಲಿ ತೊಡಗಿದ್ದು, ಜನರ ಅಭೂತಪೂರ್ವ ಬೆಂಬಲ ದೊರಕಿದೆ ಎಂದು ಹೇಳಿದರು. ಪಕ್ಷವನ್ನು ಗೆಲ್ಲಿಸುವಂತೆ ಕೋರಿದರು.

ಬಿಜೆಪಿ ಕ್ಷೇತ್ರ ಅಧ್ಯಕ್ಷ ಬಿ.ದೇವದಾಸ ಶೆಟ್ಟಿ, ರಾಜ್ಯ ಸಹವಕ್ತಾರೆ ಸುಲೋಚನಾ ಜಿ.ಕೆ. ಭಟ್‌, ಬಿಜೆಪಿ ಮುಂಬಯಿ ದಕ್ಷಿಣ ಭಾರತ ಮೀರಾ ಭಾಯಂದರ್‌ ಕ್ಷೇತ್ರದ ಅಧ್ಯಕ್ಷ ಸಚ್ಚಿದಾನಂದ ಶೆಟ್ಟಿ ಮುನ್ನಲಾಯಿ ಮಾತನಾಡಿದರು. ಇದೇ ವೇಳೆ ಸ್ಥಳೀಯರಾದ ತಿಮ್ಮಪ್ಪ ಪೂಜಾರಿ, ನವೀನ್‌ ನಾಯಕ್‌, ಪ್ರಶಾಂತ್‌ ಲೋಬೊ ಬಿಜೆಪಿಗೆ ಸೇರ್ಪಡೆಗೊಂಡರು.

ಹಿರಿಯ ನಾಯಕ ಸರಪಾಡಿ ಸುಬ್ಬಣ್ಣ ಶೆಟ್ಟಿ, ಪಕ್ಷ ಪ್ರಮುಖರಾದ ಗೋವಿಂದ ಪ್ರಭು, ರಾಮದಾಸ್‌ ಬಂಟ್ವಾಳ, ದಿನೇಶ್‌ ಅಮ್ಟೂರು, ಮೋನಪ್ಪ ದೇವಸ್ಯ, ರಾಮಕೃಷ್ಣ ಮಯ್ಯ, ಉದಯ ಕುಮಾರ್‌ ರಾವ್‌, ಶಶಿಕಾಂತ ಶೆಟ್ಟಿ ಆರುಮುಡಿ, ನಾರಾಯಣ ಪೂಜಾರಿ ಬೊಳ್ಳುಕಲ್ಲು, ದಯಾನಂದ ಶೆಟ್ಟಿ ಮುನ್ನಲಾಯಿ, ಸಾಂತಪ್ಪ ಪೂಜಾರಿ ಹಟತಡ್ಕ, ಶಾಂತವೀರ ಪೂಜಾರಿ, ಪೂವಪ್ಪ ಕಡಮಾಜೆ, ಶಿವಪ್ಪ ಗೌಡ ನಿನ್ನಿಕಲ್ಲು, ಪುರುಷೋತ್ತಮ ಮಜಲು, ಸಂತೋಷ್‌ ಕುಮಾರ್‌ ಶೆಟ್ಟಿ, ಪ್ರೇಮಾ, ಧರಣೇಂದ್ರ ಜೈನ್‌, ಸೀತಾರಾಮ ಪೂಜಾರಿ, ರಮಾನಾಥ ರಾಯಿ, ಸದಾನಂದ ನಾವೂರ, ವಿಟ್ಠಲ ಶೆಟ್ಟಿ ಅಲ್ಲಿಪಾದೆ, ಸರಪಾಡಿ ಅಶೋಕ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು. ಎನ್‌. ಧನಂಜಯ ಶೆಟ್ಟಿ ಸ್ವಾಗತಿಸಿದರು. ಸುದರ್ಶನ್‌ ಬಜ ಕಾರ್ಯಕ್ರಮ ನಿರೂಪಿಸಿದರು. ರಾತ್ರಿ ಸರಪಾಡಿ ಸುಬ್ಬಣ್ಣ ಶೆಟ್ಟಿ ಅವರ ಮನೆಯಲ್ಲಿ ರಾಜೇಶ್‌ ನಾೖಕ್‌ ವಾಸ್ತವ್ಯ ಹೂಡಿದರು.

ಜಿಲ್ಲೆಗೆ ಕೇಂದ್ರದಿಂದ 14 ಸಾ. ಕೋ. ರೂ.
ದ.ಕ. ಜಿಲ್ಲೆಗೆ ಮೋದಿ ನೇತೃತ್ವದ ಕೇಂದ್ರ ಸರಕಾರ 14 ಸಾ. ಕೋ.ರೂ.ಗಳನ್ನು ಒದಗಿಸಿದೆ. ಬಿ.ಸಿ. ರೋಡಿನಿಂದ ಮುಕ್ಕದವರೆಗೆ 6 ಪಥದ ಕಾಂಕ್ರೀಟ್‌ ರಸ್ತೆಗೆ 924 ಕೋ. ರೂ.ಗೆ ಮಂಜೂರು ದೊರೆತಿದೆ. ಮುದ್ರಾ, ಜನಧನ ಯೋಜನೆ ದ.ಕ. ಜಿಲ್ಲೆಯಲ್ಲಿ ಪರಿಣಾಮಕಾರಿ ಅನುಷ್ಠಾನಗೊಂಡಿದೆ ಎಂದು ಸಂಸದ ನಳಿನ್‌ ತಿಳಿಸಿದರು.

ಟಾಪ್ ನ್ಯೂಸ್

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

1-24-thursday

Daily Horoscope: ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ತೃಪ್ತಿ, ಅಪೇಕ್ಷಿತ ಆರ್ಥಿಕ ನೆರವು ಲಭ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.