ಫೆ. 18-25ರ ವರೆಗೆ ನಾಗಮಂಡಲ
Team Udayavani, Feb 17, 2018, 4:57 PM IST
ಮಾಣಿಲ : ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಲೋಕಕಲ್ಯಾಣಾರ್ಥ ಅಷ್ಟಪವಿತ್ರ ನಾಗಮಂಡಲ ಫೆ. 18ರಿಂದ 25ರ ವರೆಗೆ ನಡೆಯಲಿದೆ. ಪ್ರತಿಷ್ಠಾ ವರ್ಧಂತ್ಯುತ್ಸವ, ಶ್ರೀನಿವಾಸ ಕಲ್ಯಾಣ, ಭಜನೆ, ಮಹಿಳಾ ಸಮಾವೇಶ, ಯಕ್ಷಗಾನ, ನೇಮ ನಡೆಯಲಿದೆ. ನಾಗ, ಭೂಮಿ, ನಾಗಮಂಡಲ ಒಂದಕ್ಕೊಂದು ಪೂರಕವಾಗಿದ್ದು, ಸಮಾಜದಲ್ಲಿ ಋಣಾತ್ಮಕ ಪ್ರಕ್ರಿಯೆಯನ್ನು ಹೋಗಲಾಡಿಸಿ, ಧನಾತ್ಮಕ ಚಿಂತನೆ ಮೂಡಿಸುವುದಕ್ಕೆ ಪ್ರೇರಣೆಯಾಗಲಿದೆ ಎಂದು ಮಾಣಿಲ ಶ್ರೀಧಾಮ ಶ್ರೀ ಮಹಾಲಕ್ಷ್ಮೀ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಹೇಳಿದರು.
ಅವರು ಗುರುವಾರ ಮಾಣಿಲ ಶ್ರೀಧಾಮದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಗ್ರಾಮೀಣ ಕೃಷಿ, ಅರಣ್ಯ ಸಂರಕ್ಷಣೆ ಸಂದೇಶವನ್ನು ಈ ಮೂಲಕ ನೀಡಬಹುದಾಗಿದೆ. ಪ್ರಾಕೃತಿಕ ಅಸಮತೋಲನ, ಸಾಮಾಜಿಕ ತೊಂದರೆ ನಿವಾರಿಸಲು, ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಇಂಥ ಧಾರ್ಮಿಕ ಕಾರ್ಯ ಅಗತ್ಯ. ಮಾನವ ಬದುಕಿಗೂ ಕೃಷಿಗೂ ನಾಗನಿಗೂ ವಿಭಿನ್ನವಾದ ಬಂಧವಿದೆ. ಸಮೃದ್ಧಿ, ಸದ್ಬುದ್ಧಿ, ಸಂತೃಪ್ತಿಯ ಜೀವನಕ್ಕೆ ಚೇತೋಹಾರಿಯಾಗಲಿದೆ ಎಂದರು.
ಹಸಿರುವಾಣಿ ಹೊರೆಕಾಣಿಕೆ, ಸ್ವರ್ಣ ಮಂಟಪ ಮೆರವಣಿಗೆ
ಫೆ. 18ರಂದು ಮಂಗಳೂರು ಶ್ರೀ ಮಂಗಳಾದೇವಿ ದೇವಸ್ಥಾನದಿಂದ ವೈಭವದ ಹಸಿರುವಾಣಿ ಹೊರೆಕಾಣಿಕೆ ಹಾಗೂ ಶ್ರೀ ದುರ್ಗಾಪರಮೇಶ್ವರೀ ದೇವಿಯ ಸ್ವರ್ಣ ಮಂಟಪ ಮೆರವಣಿಗೆ ಕ್ಷೇತ್ರಕ್ಕೆ ಆಗಮಿಸಲಿದೆ ಎಂದರು.
ನಾಡಿನ ಅಭ್ಯುದಯಕ್ಕಾಗಿ ನಾಗಮಂಡಲ
ಕ್ಷೇತ್ರದ ಟ್ರಸ್ಟಿ, ನಾಗಮಂಡಲ ಸಮಿತಿ ಗೌರವ ಸಲಹೆಗಾರ ತಾರಾನಾಥ ಕೊಟ್ಟಾರಿ ಮಾತನಾಡಿ, ಯಜ್ಞ- ಯಾಗಾದಿಗಳಿಗೆ ಅತ್ಯಂತ ಶ್ರೇಷ್ಠವಾದ ಮಾಣಿಲ ಕ್ಷೇತ್ರದಲ್ಲಿ ಸ್ವಾಮೀಜಿ ಅವರು ಜನರ ಕಷ್ಟಗಳಿಗೆ ಸ್ಪಂದಿಸುತ್ತ ದಾನ, ಧರ್ಮಗಳಿಂದ ಸಮಾಜದ ಶ್ರೇಯಸ್ಸಿಗೆ ಕಾರಣರಾಗಿದ್ದಾರೆ. ಅದೇ ರೀತಿಯಲ್ಲಿ ನಾಗಮಂಡಲವು ನಾಡಿನ ಅಭ್ಯುದಯಕ್ಕಾಗಿ ಏರ್ಪಡಿಸಲಾಗಿದೆ. ಮಹಾಲಕ್ಷ್ಮೀ ಸೇವಾ ಪ್ರತಿಷ್ಠಾನ, ಮಹಿಳಾ ಸೇವಾ ಸಮಿತಿ, ವಿವಿಧ ಸಂಘ -ಸಂಸ್ಥೆಗಳು ಸಹಕಾರ ನೀಡುತ್ತಿವೆ. ಭಕ್ತರು ತಂಡೋಪತಂಡವಾಗಿ ಆಗಮಿಸಿ, ಶ್ರಮದಾನ ಸೇವೆ ನಡೆಸುತ್ತಿದ್ದಾರೆ ಎಂದು ವಿವರಿಸಿದರು.
ಪತ್ರಿಕಾಗೋಷ್ಠಿಯಲ್ಲಿ ನಾಗಮಂಡಲ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಶೆಟ್ಟಿ ಚೆಲ್ಲಡ್ಕ, ಸಾಂಸ್ಕೃತಿಕ ಸಮಿತಿ ಸಂಚಾಲಕ ಮಂಜು ವಿಟ್ಲ, ಪ್ರಚಾರ ಸಮಿತಿ ಸಂಚಾಲಕ ಪುಷ್ಪರಾಜ ಶೆಟ್ಟಿ ಬಿ.ಸಿ. ರೋಡ್, ವ್ಯವಸ್ಥಾಪಕ ವಿಟ್ಠಲ ಶೆಟ್ಟಿ ಸುಣ್ಣಂಬಳ, ಮಹಿಳಾ ಸೇವಾ ಸಮಿತಿ ಅಧ್ಯಕ್ಷೆ ವನಿತಾ ವಿ. ಶೆಟ್ಟಿ ಸುಣ್ಣಂಬಳ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ