ಸಜೀಪಮುನ್ನೂರು: ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ಸಭೆ
Team Udayavani, Apr 19, 2018, 11:42 AM IST
ಬಂಟ್ವಾಳ : ದ.ಕ. ಜಿಲ್ಲಾ ರೈತ ಸಂಘ, ಹಸಿರು ಸೇನೆ, ಬಂಟ್ವಾಳ ತಾಲೂಕು ಘಟಕ ಹಾಗೂ ತುಂಬೆ ಡ್ಯಾಂ ಸಂತ್ರಸ್ತ ರೈತರ ಹೋರಾಟ ಸಮಿತಿ ಸಭೆಯು ಸಜೀಪಮುನ್ನೂರುನಲ್ಲಿ ಮನೋಹರ್ ಶೆಟ್ಟಿ ನಡಿಕಂಬಳಗುತ್ತು ಅಧ್ಯಕ್ಷತೆಯಲ್ಲಿ ಜರಗಿತು.
ನೂತನ ತುಂಬೆ ಡ್ಯಾಂನಲ್ಲಿ 3 ತಿಂಗಳಿಂದ 6 ಮೀ. ನೀರು ಸಂಗ್ರಹಿಸಿ ರೈತರಿಗೆ ಯಾವುದೇ ರೀತಿಯಲ್ಲಿ ನೆಲಬಾಡಿಗೆ/ ಶಾಶ್ವತ ಪರಿಹಾರ ನೀಡದ ಜಿಲ್ಲಾಡಳಿತದ ರೈತ ವಿರೋಧಿ ನೀತಿಯ ಬಗ್ಗೆ ಸಂಬಂಧಿಸಿದ ಎಲ್ಲ ಜನ ಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಲಿಖೀತ ಮನವಿ ನೀಡಿದ್ದು, ಈ ತನಕ ಯಾವುದೇ ಕ್ರಮಕೈಗೊಳ್ಳದಿರುವುದರಿಂದ ಸೂಕ್ತ ಪರಿಹಾರ ಕೂಡಲೇ ವ್ಯವಸ್ಥೆ ಮಾಡದಿದ್ದಲ್ಲಿ ಕಾನೂನು ಹೋರಾಟ ನಡೆಸಲು ಸಭೆ ಸರ್ವಾನುಮತದಿಂದ ತೀರ್ಮಾನಿಸಿತು.
ಇದೇ ಸಂದರ್ಭದಲ್ಲಿ ಆರ್ಟಿಐ ಕಾರ್ಯಕರ್ತ ಮತ್ತು ತಾಲೂಕು ರೈತ ಸಂಘ ಅಧ್ಯಕ್ಷ ದಿ| ಶರತ್ ಕುಮಾರ್ ನಿಧನಕ್ಕೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ರೈತರ ಹೋರಾಟ ಸಮಿತಿ ಅಧ್ಯಕ್ಷ ಎಂ. ಸುಬ್ರಹ್ಮಣ್ಯ ಭಟ್, ಪದಾಧಿಕಾರಿಗಳಾದ ಎನ್.ಕೆ. ಇದಿನಬ್ಬ, ಪಿ. ಸುದೇಶ್ ಮಯ್ಯ, ಶೇಕಬ್ಬ, ಅಬ್ದುಲ್ ರಹಿಮಾನ್, ರಾಬರ್ಟ್ ಡಿ’ಸೋಜಾ, ದೇವರಾಜ ರೈ, ಶರತ್ ಕುಮಾರ್ ಶೆಟ್ಟಿ, ರಂಜನಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ