ಮೆರವಣಿಗೆಯಲ್ಲಿ ಸಾಗಿ ಬಂದ ಶಾಸಕರು
Team Udayavani, Jun 3, 2018, 12:52 PM IST
ಬಂಟ್ವಾಳ : ಬಂಟ್ವಾಳ ಕ್ಷೇತ್ರದ ನೂತನ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು ಅವರ ವಿಜಯೋತ್ಸವ ಮೆರವಣಿಗೆ ಜೂ. 2ರಂದು ಬಿ.ಸಿ. ರೋಡ್ ಕೈಕಂಬ ಪೊಳಲಿ ದ್ವಾರದಿಂದ ಆರಂಭವಾಗಿ ಬಿ.ಸಿ. ರೋಡ್, ಬಂಟ್ವಾಳ ಬೈಪಾಸ್, ಭಂಡಾರಿಬೆಟ್ಟು, ನೆರೆ ವಿಮೋಚನೆ ರಸ್ತೆ, ಬಂಟ್ವಾಳ ಪೇಟೆ, ಜಕ್ರಿಬೆಟ್ಟು ಮೂಲಕ ಬಂಟ್ವಾಳ ಬೈಪಾಸ್ ಜಂಕ್ಷನ್ ವರೆಗೆ ಸಾಗಿತು.
ತೆರೆದ ವಾಹನದಲ್ಲಿ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿಗುತ್ತು, ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಜಿಲ್ಲಾ ಬಿಜೆಪಿ ವಕ್ತಾರ ಕೆ. ಹರಿಕೃಷ್ಣ ಬಂಟ್ವಾಳ, ರಾಜ್ಯ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಸುಲೋಚನಾ ಜಿ.ಕೆ. ಭಟ್ ನಿಂತುಕೊಂಡು ಜನರ ಶುಭ ಹಾರೈಕೆ ಸ್ವೀಕರಿಸಿದರು. ಬಂಟ್ವಾಳ ಕ್ಷೇತ್ರ ಬಿಜೆಪಿ ಅಧ್ಯಕ್ಷ ಬಿ. ದೇವದಾಸ ಶೆಟ್ಟಿ, ಯುವ ಮೋರ್ಚಾ ಅಧ್ಯಕ್ಷ ವಜ್ರನಾಥ ಕಲ್ಲಡ್ಕ ವಾಹನದಲ್ಲಿ ಉಪಸ್ಥಿತರಿದ್ದರು.
ವಿಜಯೋತ್ಸವ ಮೆರವಣಿಗೆ ಸಾಗಿ ಬರುವ ದಾರಿಯಲ್ಲಿ ಅಪಾರ ಸಂಖ್ಯೆಯಲ್ಲಿ ಸೇರಿದ್ದ ಜನತೆ ಶಾಸಕರಿಗೆ ಮಾಲಾರ್ಪಣೆ ಮಾಡಿದರು. ಜೋಡುಮಾರ್ಗ ನಗರದ ಮಧ್ಯದಲ್ಲಿ ನಡುವೆ ಪೇಟ ತೊಡಿಸಲಾಯಿತು. ಸಾರ್ವಜನಿಕರು ಸಿಹಿ ತಿಂಡಿ, ಪಾನೀಯ ವಿತರಣೆ ನಡೆಸಿ ಸಂಭ್ರಮಿಸಿದರು.
ಬ್ಯಾಂಡ್-ವಾದ್ಯ, ಕೊಂಬು, ಗೊಂಬೆ ಕುಣಿತ, ನಾಸಿಕ್ ಬ್ಯಾಂಡ್, ಚೆಂಡೆ ವಾದನ ಮೂಲಕ ಮೆರವಣಿಗೆಯನ್ನು ಆಕರ್ಷಕವಾಗಿ ಸಂಘಟಿಸಲಾಗಿತ್ತು. ಪಕ್ಷದ ಪ್ರಮುಖ ನೇತಾರರು, ಕಾರ್ಯಕರ್ತರು, ಅಭಿಮಾನಿಗಳು ಭಾಗವಹಿಸಿದ್ದರು. ಯುವಕರು ಡಿಜೆ ಸಂಗೀತಕ್ಕೆ ಕುಣಿದು ಸಂಭ್ರಮಿಸಿದರು. ಪ್ರಮುಖ ಸ್ಥಳಗಳಲ್ಲಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ