ಬೆಳ್ತಂಗಡಿ, ಬಂಟ್ವಾಳ ಶಿಕ್ಷಕರಿಗೆ ಪಗಾರವಿಲ್ಲ !


Team Udayavani, Jun 4, 2018, 7:36 AM IST

14.jpg

ಮಂಗಳೂರು: ಬೆಳ್ತಂಗಡಿ ಮತ್ತು ಬಂಟ್ವಾಳ ತಾಲೂಕುಗಳಲ್ಲಿ ಸರ್ವಶಿಕ್ಷಣ ಅಭಿಯಾನ ಹಾಗೂ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಕಳೆದ ಮೂರು ತಿಂಗಳುಗಳಿಂದ ಸಂಬಳ ಸಿಕ್ಕಿಲ್ಲ. ಹೀಗಾಗಿ ರಜೆ ಕಳೆದು ಪಾಠ ಮಾಡಲು ಸಿದ್ಧರಾದ ಶಿಕ್ಷಕರ ಮುಖಗಳಲ್ಲಿ ಸಂತಸವಿಲ್ಲ. 

ಜಿಲ್ಲೆಯ ಇತರೆಲ್ಲ ತಾಲೂಕುಗಳ ಶಿಕ್ಷಕರಿಗೆ ಸಂಬಳ ಸಿಕ್ಕಿದೆ, ಇಲ್ಲಿ ಮಾತ್ರ ಯಾಕೆ ಸಮಸ್ಯೆ ಎಂಬ ಪ್ರಶ್ನೆಗೆ, ಇದು ಸಣ್ಣ ತಾಂತ್ರಿಕ ದೋಷದಿಂದ ಆದ ಸಮಸ್ಯೆ ಎಂಬ ಉತ್ತರ ಶಿಕ್ಷಣ ಇಲಾಖೆ ಯಿಂದ ಕೇಳಿಬರುತ್ತಿದೆ. ತಾಂತ್ರಿಕ ದೋಷ ಸಣ್ಣದಾದರೂ ಅದರ ಪರಿಣಾಮ ಮಾತ್ರ ದೊಡ್ಡದು ಎಂಬುದು ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಳಲು. 

ಸಮಸ್ಯೆ ಏನು? 
ಈ ಎರಡು ತಾಲೂಕುಗಳಿಗೆ ಶಿಕ್ಷಣ ಇಲಾಖೆಯಿಂದ ಶಿಕ್ಷಕರ ವೇತನಕ್ಕಾಗಿ ಹಣಕಾಸು ಇಲಾಖೆಯಿಂದ ಬರುವ ಅನುದಾನ ಅದಲು ಬದಲಾಗಿರು ವುದೇ ಸಮಸ್ಯೆಗೆ ಮೂಲ ಕಾರಣ. ಅಂದರೆ ಬೆಳ್ತಂಗಡಿ ತಾಲೂಕಿಗೆ ಬಂಟ್ವಾಳದ್ದು, ಬಂಟ್ವಾಳಕ್ಕೆ ಬೆಳ್ತಂಗಡಿ ಯದು ಬಿಡುಗಡೆಯಾಗಿದೆ. ಇವೆರಡು ತಾಲೂಕುಗಳಲ್ಲಿ ಇರುವ ಶಿಕ್ಷಕರ ಸಂಖ್ಯೆಯಲ್ಲಿ ಅಜಗಜಾಂತರವಿದ್ದು, ಸಹಜವಾಗಿ ಅನುದಾನ ಮೊತ್ತ ದಲ್ಲಿಯೂ ಅಂತರವಿದೆ. ಬಂಟ್ವಾಳ ತಾಲೂಕಿನಲ್ಲಿ ಸರ್ವ ಶಿಕ್ಷಣ ಅಭಿಯಾನ ಹಾಗೂ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನದಡಿಯಲ್ಲಿ ಕರ್ತವ್ಯ 

ನಿರ್ವಹಿಸುತ್ತಿರುವ ಶಿಕ್ಷಕರ ಸಂಖ್ಯೆ ಸುಮಾರು 126, ಬೆಳ್ತಂಗಡಿ ತಾಲೂಕಿನಲ್ಲಿರುವ ಶಿಕ್ಷಕರ ಸಂಖ್ಯೆ ಬಹಳ ಕಡಿಮೆ. ಹೀಗಾಗಿ ವೇತನ ಅನುದಾನ ಬಿಡುಗಡೆಯಾಗಿದ್ದರೂ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅದನ್ನು ಶಿಕ್ಷಕರ ವೇತನಕ್ಕಾಗಿ ಬಳಸಿಕೊಳ್ಳುವ ಸ್ಥಿತಿ ಇಲ್ಲ. ಇದು ಅನುದಾನ ಬಿಡುಗಡೆ ಮಾಡುವ ಹಣಕಾಸು ಇಲಾಖೆಯ ಅಧಿಕಾರಿಗಳೇ ಸರಿಪಡಿಸಿಕೊಳ್ಳಬೇಕಾದ ತಪ್ಪಾಗಿ ರುವುದರಿಂದ ಕ್ಷೇತ್ರ ಶಿಕ್ಷಣಾಧಿಕಾರಿಗಳು ಮೇಲಧಿಕಾರಿಗಳಿಗೆ ದೂರು ನೀಡಿ, ತಪ್ಪು ಸರಿಪಡಿಸುವಂತೆ ಕೋರಿದ್ದಾರೆ. 

ಶಿಕ್ಷಕರ ಸಂಘದ ಒತ್ತಾಯ
ಶಿಕ್ಷಕರ ಸಂಕಷ್ಟವನ್ನು “ಉದಯ ವಾಣಿ’ಯ ಜತೆ ಹಂಚಿಕೊಂಡ ರಾಜ್ಯ ಪ್ರಾ.ಶಾ. ಶಿಕ್ಷಕರ ಸಂಘದ ದ.ಕ. ಜಿಲ್ಲಾ ಸಮಿತಿಯ ಅಧ್ಯಕ್ಷ ಶಿವಶಂಕರ್‌ ಭಟ್‌ ಕೆ., ಮಾರ್ಚ್‌ನಿಂದ ವೇತನ ಸಿಗದೆ ಶಿಕ್ಷಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ದ್ದಾರೆ. ಬೇಸಿಗೆ ರಜೆಯನ್ನು ಸಂತಸ ದಿಂದ ಕುಟುಂಬದೊಂದಿಗೆ ಕಳೆಯ ಬೇಕಾಗಿದ್ದ ಅವರು ಆರ್ಥಿಕ ಮುಗ್ಗಟ್ಟಿ ನಿಂದಿದ್ದರು. ಈಗ ಶಾಲೆ ಪ್ರಾರಂಭ ವಾಗಿದ್ದು, ಅಸಂತೋಷ ದಿಂದಲೇ ಕರ್ತವ್ಯಕ್ಕೆ ಹಾಜರಾಗು ತ್ತಿದ್ದಾರೆ. ಇದೊಂದು ಗಂಭೀರ ವಿಚಾರ, ಸಂಬಂಧಪಟ್ಟ ಅಧಿಕಾರಿಗಳು ತಪ್ಪು ಸರಿ ಪಡಿಸಿ ಶೀಘ್ರದಲ್ಲೇ ವೇತನ ಬಿಡುಗಡೆ ಯಾಗುವಂತೆ ಮಾಡಬೇಕು ಎಂದರು. 

ಇನ್ನೆರಡು ದಿನಗಳಲ್ಲಿ   ಇತ್ಯರ್ಥ ನಿರೀಕ್ಷೆ :
ಜಿಲ್ಲಾ  ಉಪಯೋಜನಾ ಸಮನ್ವಯಾಧಿಕಾರಿ ಜಿಲ್ಲಾ ಉಪಯೋಜನಾ ಸಮನ್ವಯಾಧಿಕಾರಿ ಮಹಾದೇವ್‌ ಎಸ್‌.ಪಿ. ಅವರನ್ನು ಸಂಪರ್ಕಿಸಿದಾಗ, ಸರ್ವಶಿಕ್ಷಾ ಅಭಿಯಾನದ ನಿರ್ದೇಶಕರಿಗೆ ಪತ್ರ ಬರೆಯ ಲಾಗಿದ್ದು, ತಾಂತ್ರಿಕ ದೋಷದಿಂದ ವೇತನ ಬಿಡುಗಡೆ ಅದಲು ಬದ ಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೆರಡು ದಿನಗಳಲ್ಲಿ ದೋಷ ಸರಿಪಡಿಸಿ ಮುಂದೆ ವೇತನ ವಿತರಣೆ ವಿಳಂಬ ಆಗದಂತೆ ನೋಡಿಕೊಳ್ಳಲಾಗುವುದು ಎಂದರು. 

ಎರಡು ತಿಂಗಳ ಸಂಬಳ ವಿತರಣೆಗೆ ಕ್ರಮ: ಬಿಇಒ 
ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಎನ್‌. ಶಿವಪ್ರಕಾಶ್‌ ಅವರು ಶಿಕ್ಷಕರು ಪದೇಪದೇ ವೇತನಕ್ಕಾಗಿ ವಿಚಾರಿಸುತ್ತಿರುವುದಾಗಿ ತಿಳಿಸಿದ್ದಾರೆ. “ಅನುದಾನ ನೀಡಿಕೆಯಲ್ಲಿ ಉಂಟಾದ ತಪ್ಪನ್ನು ಸರಿಪಡಿಸಲಾಗುವುದೆಂಬ ಉತ್ತರ ಮೇಲಧಿಕಾರಿಗಳಿಂದ ಸಿಕ್ಕಿದೆ. ಒಂದು ವೇಳೆ ಅದು ವಿಳಂಬವಾದರೆ, ಈಗಾಗಲೇ ಬಿಡುಗಡೆಯಾದ ಅನುದಾನವನ್ನೇ ಬಳಸಿ ಬಾಕಿ ಇರುವ ಮೂರು ತಿಂಗಳ ಸಂಬಳದಲ್ಲಿ ಎರಡು ತಿಂಗಳದ್ದನ್ನು ನೀಡಲಾಗುವುದು’ ಎಂದರು.

ಗಣೇಶ್‌ ಮಾವಂಜಿ 

ಟಾಪ್ ನ್ಯೂಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

11

ಕ್ರಿಕೆಟ್‌ ಬಗ್ಗೆ ಕಿಂಚಿತ್ತೂ ಜ್ಞಾನವಿಲ್ಲದ ವ್ಯಕ್ತಿಗೆ ಡ್ರೀಮ್‌11ನಲ್ಲಿ ಒಲಿಯಿತು 1.5 ಕೋಟಿ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

Dr Rajkumar: ಇಂದು ರಾಜ್‌ 96ನೇ ಹುಟ್ಟು ಹಬ್ಬ; ಅರ್ಥಪೂರ್ಣ ಆಚರಣೆಗೆ ಅಭಿಮಾನಿಗಳ ಸಿದ್ಧತೆ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

6-court

Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eqewqe

JP Hegde; ಉತ್ತಮರನ್ನು ಉಳಿಸಿಕೊಳ್ಳಬೇಕಾದ ಅನಿವಾರ್ಯತೆ ಜನತೆಗಿದೆ: ತೇಜಸ್ವಿನಿ

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

Udupi: ಅನುಮತಿಯಿಲ್ಲದೆ ಪೋಸ್ಟರ್‌ ಅಭಿಯಾನ; ಬಿಜೆಪಿ ಯುವ ಮೋರ್ಚಾ ಮುಖಂಡರ ವಿರುದ್ಧ ಕೇಸ್

1-gadaga

Gadaga: 28 ರಂದು ಯುವಚೈತನ್ಯ ಕಾರ್ಯಕ್ರಮ: ಜ್ಯೂ. ಕೆ.ಎಚ್. ಪಾಟೀಲ

1-qwewweq

K. Jayaprakash Hegde; ಮೀನುಗಾರಿಕೆ, ಪ್ರವಾಸೋದ್ಯಮದ ಅಭಿವೃದ್ದಿಗೆ ಹೆಚ್ಚಿನ ಆಧ್ಯತೆ 

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.