‘ಕಂದಾಯ-ಪಿಂಚಣಿ ಅದಾಲತ್‌ ಅವಶ್ಯ’


Team Udayavani, Jul 28, 2018, 1:24 PM IST

28-july-16.jpg

ಬಂಟ್ವಾಳ : ಆಧುನಿಕ ಗಣಕೀಕರಣ ವ್ಯವಸ್ಥೆಯಲ್ಲಿ ಅನೇಕ ವ್ಯತ್ಯಾಸಗಳು ಆಗುತ್ತವೆ. ಇಂತಹ ತೊಂದರೆಗಳನ್ನು ನಿವಾರಿಸಿಕೊಳ್ಳಲು ಕಂದಾಯ ಅದಾಲತ್‌ ಅವಶ್ಯ ಎಂದು ಶಾಸಕ ರಾಜೇಶ್‌ ನಾೖಕ್‌ ಉಳಿಪ್ಪಾಡಿಗುತ್ತು ಹೇಳಿದರು. ಅವರು ಜು. 27ರಂದು ಬಂಟ್ವಾಳ ಮಿನಿ ವಿಧಾನಸೌಧದಲ್ಲಿ ನಡೆದ ಪಾಣೆಮಂಗಳೂರು ಫಿರ್ಕಾ ವ್ಯಾಪ್ತಿಯ ಕಂದಾಯ ಮತ್ತು ಪಿಂಚಣಿ ಅದಾಲತ್‌ ಉದ್ಘಾಟಿಸಿ ಮಾತನಾಡಿದರು.

ಎಲ್ಲರಿಗೂ ಅದಾಲತ್‌ನ ಪ್ರಯೋಜನ ಮುಟ್ಟಬೇಕು. ಸರಕಾರದ ಯೋಜನೆಗಳು ಜನ ಸಾಮಾನ್ಯರಿಗೆ ಅದಾಲತ್‌ ವ್ಯವಸ್ಥೆಯಲ್ಲಿ ಸಮರ್ಪಕವಾಗಿ ತಲುಪಲು ಸಾಧ್ಯ. ಸರಕಾರದ ಪ್ರತಿ ಯೋಜನೆಯೂ ಜನಸಾಮಾನ್ಯನಿಗೆ ಮುಟ್ಟುವಲ್ಲಿ ಕೆಲಸ ಮಾಡುತ್ತೇನೆ. ಜನರ ಸಮಸ್ಯೆಗೆ ಸ್ಪಂದಿಸಿ, ಕಾನೂನು ಚೌಕಟ್ಟಿನಲ್ಲಿ ಉಪಯೋಗ ಆಗುವ ಕೆಲಸ ನಡೆಯಲಿ ಎಂದರು.ತಾ| ಕಚೇರಿ ಬಗ್ಗೆ ಸಾಕಷ್ಟು ದೂರುಗಳು ಬರುತ್ತಿವೆ. ದೂರುಗಳು ಬಾರದಂತೆ ಕೆಲಸಗಳು ಆಗಬೇಕು. ಜನರಿಗೆ ಸವಲತ್ತುಗಳು ಅರ್ಹವಾಗಿ ಮುಟ್ಟಿಸಲು ಸರಕಾರಿ ಅಧಿಕಾರಿಗಳಿಂದ ಮಾತ್ರ ಸಾಧ್ಯ ಎಂದು ವಿವರಿಸಿದರು. ಪುರಸಭಾ ಅಧ್ಯಕ್ಷ ಪಿ. ರಾಮಕೃಷ್ಣ ಆಳ್ವ, ತಾಲೂಕು ಪಂಚಾಯತ್‌ ಅಧ್ಯಕ್ಷ ಚಂದ್ರಹಾಸ ಕರ್ಕೇರ, ಉಪಾಧ್ಯಕ್ಷ ಅಬ್ಟಾಸ್‌ ಅಲಿ, ಜಿ.ಪಂ. ಸದಸ್ಯ ಚಂದ್ರಪ್ರಕಾಶ್‌ ಶೆಟ್ಟಿ ಮೊದಲಾದವರು ಮಾತನಾಡಿದರು.

ಜಿಲ್ಲಾ ಪಂಚಾಯತ್‌ ಸದಸ್ಯರಾದ ಕಮಲಾಕ್ಷಿ ಕೆ. ಪೂಜಾರಿ, ರವೀಂದ್ರ ಕಂಬಳಿ, ಬುಡಾ ಅಧ್ಯಕ್ಷ ಸದಾಶಿವ ಬಂಗೇರ, ತಾಲೂಕು ಪಂಚಾಯತ್‌ ಸದಸ್ಯರಾದ ಗಣೇಶ ಸುವರ್ಣ, ಯಶವಂತ ಪೊಳಲಿ, ಮಾಜಿ ಶಾಸಕ ಕೆ. ಪದ್ಮನಾಭ ಕೊಟ್ಟಾರಿ, ಕಳ್ಳಿಗೆ ಗ್ರಾ.ಪಂ. ಉಪಾಧ್ಯಕ್ಷ ಪುರುಷ ಎನ್‌. ಸಾಲ್ಯಾನ್‌, ಪುರಸಭಾ ಸದಸ್ಯರು, ವಿವಿಧ ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು ಉಪಸ್ಥಿತರಿದ್ದರು.

ಬಂಟ್ವಾಳ ತಹಶೀಲ್ದಾರ್‌ ಪುರಂದರ ಹೆಗ್ಡೆ ಸ್ವಾಗತಿಸಿ, ಪ್ರಭಾರ ಉಪತಹಶೀಲ್ದಾರ್‌ ಗ್ರೆಟ್ಟಾ ಮಸ್ಕರೇನಸ್‌, ಕಂದಾಯ ನಿರೀಕ್ಷಕ ಪಿ. ರಾಮ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು. ಸದಾಶಿವ ಕೈಕಂಬ, ಸುಂದರ ಮತ್ತಿತರರು ಸಹಕರಿಸಿದರು.

ಸವಲತ್ತು ವಿತರಣೆ
ಅದಾಲತ್‌ನಲ್ಲಿ ರಾಷ್ಟ್ರೀಯ ಕುಟುಂಬ ಸಹಾಯಧನ-20 ಮಂದಿಗೆ 3.40 ಲಕ್ಷ ರೂ. ಚೆಕ್‌ ವಿತರಣೆ, ಅಂತ್ಯ ಸಂಸ್ಕಾರ ಪರಿಹಾರ-20 ಮಂದಿಗೆ 1 ಲಕ್ಷ ರೂ. ಚೆಕ್‌ ವಿತರಣೆ, ಪ್ರಾಕೃತಿಕ ವಿಕೋಪ ಪರಿಹಾರ-33 ಮಂದಿಗೆ 2.05 ಲಕ್ಷರೂ. ಚೆಕ್‌ ವಿತರಣೆ, ವಿಧವಾ ವೇತನ ಆದೇಶ ಪತ್ರ-19 ಮಂದಿಗೆ, ಅಂಗವಿಕಲ ವೇತನ-12 ಮಂದಿಗೆ, ಸಂಧ್ಯಾ ಸುರಕ್ಷಾ-22 ಮಂದಿಗೆ , ಮನಸ್ವಿನಿ-ಒಬ್ಬರಿಗೆ ವಿತರಿಸಲಾಯಿತು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.