ಚಿಕ್ಕಯ್ಯಮಠ: ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
Team Udayavani, Nov 2, 2022, 9:00 PM IST
ಬಂಟ್ವಾಳ: ಬಿ.ಸಿ.ರೋಡು ಸಮೀಪದ ಚಿಕ್ಕಯ್ಯಮಠದಲ್ಲಿ ಕಳ್ಳರು ಹಾಡುಹಗಲೇ ಮನೆಯೊಂದರ ಬೀಗ ಮುರಿದು ಕಪಾಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ನ. 1ರಂದು ನಡೆದಿದೆ.
ಚಿಕ್ಕಯ್ಯಮಠ ನಿವಾಸಿ ಸತೀಶ್ ಅವರ ಮನೆಯಲ್ಲಿ ಕಳ್ಳತನ ನಡೆದಿದ್ದು, ಸತೀಶ್ ಹಾಗೂ ಅವರ ಪತ್ನಿ ಸಂಧ್ಯಾ ಮನೆಗೆ ಬೀಗ ಹಾಕಿ ಕೆಲಸಕ್ಕೆ ಹೋಗಿದ್ದು, ಸಂಜೆ ಮನೆಗೆ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.
ಕಪಾಟಿನಲ್ಲಿದ್ದ ಬಟ್ಟೆಗಳನ್ನು ಚೆಲ್ಲಾಪಿಲ್ಲಿಗೊಳಿಸಿರುವ ಕಳ್ಳರು ಸುಮಾರು 4.60 ಲಕ್ಷ ರೂ. ಮೌಲ್ಯದ 11.5 ಪವನ್ ಚಿನ್ನವನ್ನು ಕಳವು ಮಾಡಿದ್ದಾರೆ ಎಂದು ಸಂಧ್ಯಾ ಅವರು ಬಂಟ್ವಾಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬಂಟ್ವಾಳ ನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಕಳ್ಳರ ಪತ್ತೆಗೆ ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ