ಹೊತ್ತಿ ಉರಿದ ಮನೆ: ಮಹಿಳೆ ಸಜೀವ ದಹನ
Team Udayavani, Oct 28, 2018, 11:49 AM IST
ಪೂಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಕಾವಳಮಡೂರು ಗ್ರಾಮದಲ್ಲಿ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಮನೆಗೆ ಹೊತ್ತಿ ಉರಿದು ಮಹಿಳೆ ಸಜೀವ ದಹನಗೊಂಡ ಘಟನೆ ಶನಿವಾರ ತಡರಾತ್ರಿ ನಡೆದಿದೆ.
ಮೃತ ಮಹಿಳೆಯನ್ನು ರೇವತಿ (40) ಎಂದು ಗುರುತಿಸಲಾಗಿದೆ. ಇವರು ಅವಿವಾಹಿತೆಯಾಗಿದ್ದು, ಮನೆಯಲ್ಲಿ ಒಬ್ಬರೇ ವಾಸಿಸುತ್ತಿದ್ದರು.
ಒಂದು ವಾರದ ಹಿಂದೆ ಈ ಮನೆಗೆ ಸಿಡಿಲು ಬಡಿದಿದ್ದು, ನಂತರ ರೇವತಿ ಅವರು ಸಂಬಂಧಿಕರ ಮನೆಯಲ್ಲಿ ನೆಲೆಸಿದ್ದರು. ಶನಿವಾರವಷ್ಟೇ ತಮ್ಮ ಮನೆಗೆ ಹಿಂದುರಿಗಿದ್ದು, ಅಂದೇ ಈ ಅವಗಢ ಸಂಭವಿಸಿದೆ.
ಮನೆಯೊಳಗೆ ಕಟ್ಟಿಗೆ ರಾಶಿ ಹಾಕಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿಕೊಂಡ ಬೆಂಕಿ ಕಟ್ಟಿಗೆ ರಾಶಿಗೆ ತಗುಲಿ ಮನೆಗೆ ವ್ಯಾಪಿಸಿರಬಹುದು ಎಂದು ಶಂಕಿಸಲಾಗಿದೆ.
ತಡರಾತ್ರಿ ಮನೆ ಹೊತ್ತಿ ಉರಿಯುದನ್ನು ಕಂಡ ಊರವರು ತಕ್ಷಣ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದರೂ ಮಹಿಳೆಯನ್ನು ಉಳಿಸಿಕೊಳ್ಳಲಾಗಲಿಲ್ಲ.
ರೇವತಿ ಅವರ ಮೃತದೇಹ ಸಂಪೂರ್ಣ ಸುಟ್ಟು ಹೋಗಿದ್ದು, ಬಂಟ್ವಾಳ ಸರಕಾರಿ ಆಸ್ಪತೆಯಲ್ಲಿ ಇರಿಸಲಾಗಿದೆ. ಪೂಂಜಾಲಕಟ್ಟೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ