ವಿದ್ಯಾರ್ಥಿನಿಲಯ ಶಿಥಿಲ ಕಟ್ಟಡ
Team Udayavani, Dec 5, 2018, 11:59 AM IST
ಬಂಟ್ವಾಳ: ಪುರಸಭಾ ವ್ಯಾಪ್ತಿಯ ಮೊಡಂಕಾಪು ಸಮಾಜ ಕಲ್ಯಾಣ ಇಲಾಖೆ ಸುಪರ್ದಿಯ ಶಿಥಿಲಾವಸ್ಥೆಯಲ್ಲಿರುವ ಸಾರ್ವಜನಿಕ ವಿದ್ಯಾರ್ಥಿನಿಲಯಕ್ಕೆ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ ಮತ್ತು ಆಡಳಿತ ಸಮಿತಿಯವರು ಡಿ. 4ರಂದು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಳಿಕ ಸಂಬಂಧಿಸಿದ ಇಲಾಖೆಯ ಸಿಬಂದಿ ಜತೆ ಮಾತನಾಡಿದರು. ಹಳೆಯ ಕಾಲದ ಕಟ್ಟಡ ಮತ್ತು ಬಿರುಕು ಬಿಟ್ಟಿರುವ ಗೋಡೆಗಳನ್ನು ನೋಡಿ ಶೀಘ್ರವಾಗಿ ಹೊಸ ಕಟ್ಟಡ ನಿರ್ಮಾಣ ಮಾಡಬೇಕು ಎಂದು ತಾ.ಪಂ.ನಲ್ಲಿ ನಿರ್ಣಯ ಮಾಡಿ ಸರಕಾರದ ಮುಂದೆ ಕಳುಹಿಸಲಾಗುವುದು ಎಂದು ತಿಳಿಸಿದರು.
ಈ ಹಿಂದೆ ಶಿಥಿಲಾವಸ್ಥೆಯಲ್ಲಿರುವ ವಿದ್ಯಾರ್ಥಿನಿಲಯದ ಬಗ್ಗೆ ಆರು ತಿಂಗಳ ಹಿಂದೆಯೇ ಮಾಧ್ಯಮದ ಮೂಲಕ ವಿಷಯವನ್ನು ಗಮನಕ್ಕೆ ತಂದು ಎಚ್ಚರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಮತ್ತು ಸಾರ್ವಜನಿಕ ದೂರಿನಂತೆ ಭೇಟಿ ನೀಡಿರುವುದಾಗಿ ಅಧ್ಯಕ್ಷರು ತಿಳಿಸಿದರು. ತಾ.ಪಂ. ಉಪಾಧ್ಯಕ್ಷ ಅಬ್ಟಾಸ್ ಆಲಿ, ಸ್ಥಾಯೀ ಸಮಿತಿಯ ಅದ್ಯಕ್ಷೆ ಧನಲಕ್ಷ್ಮೀ ಸಿ.ಬಂಗೇರ, ತಾ.ಪಂ. ಸದಸ್ಯೆ ಮಲ್ಲಿಕಾ ಶೆಟ್ಟಿ, ತಾ.ಪಂ. ಸದಸ್ಯ ಹೈದರ್ ಕೈರಂಗಳ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ
Lok Sabha Election; ಕಾಂಗ್ರೆಸ್ ಗೆದ್ದರೆ ಸಿದ್ದರಾಮಯ್ಯ ಸ್ಥಾನ ಭದ್ರ
BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್ವೈ
Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’