‘ಕಲಿ-ತಿಳಿ ಎಂಬುದು ಸಮ್ಮೇಳನದ ಸಂದೇಶ’


Team Udayavani, Dec 8, 2018, 10:09 AM IST

8-december-2.gif

ಬಂಟ್ವಾಳ (ಡಾ| ಎಫ್‌.ಎಚ್‌. ಒಡೆಯರ್‌ ವೇದಿಕೆ): ಫರಂಗಿಪೇಟೆ ಸೇವಾಂಜಲಿ ಸಭಾಂಗಣದಲ್ಲಿ ಡಿ. 7 ರಂದು ಬೆಳಗ್ಗೆ ಜಿ.ಪಂ. ಸದಸ್ಯ ರವೀಂದ್ರ ಕಂಬಳಿ ರಾಷ್ಟ್ರ ಧ್ವಜಾರೋಹಣ ಮಾಡುವ ಮೂಲಕ ಬಂಟ್ವಾಳ ತಾಲೂಕು 19ನೇ ಸಾಹಿತ್ಯ ಸಮ್ಮೇಳನಕ್ಕೆ ವಿಧ್ಯುಕ್ತ ಚಾಲನೆ ನೀಡಿದರು.

ಬಳಿಕ ಅವರು ಮಾತನಾಡಿ, ಇದೊಂದು ಐತಿಹಾಸಿಕ ಕ್ಷಣ, ಕನ್ನಡದ ಕೆಲಸದಲ್ಲಿ ತುಳುವರು ಮುಂದಿದ್ದಾರೆ. ನಮ್ಮ ಮಾತೃ ಭಾಷೆ ತುಳು ಆದರೂ ನಮ್ಮೆಲ್ಲ ಶೈಕ್ಷಣಿಕ ವ್ಯವಸ್ಥೆ ಕನ್ನಡದಲ್ಲಿದ್ದು, ಕನ್ನಡಿಗರು/ತುಳುವರು ಎಂಬ ಹೆಮ್ಮೆ ನಮ್ಮದಾಗಿದೆ. ನಮಗೆ ಭಾಷೆಯ ಬಗ್ಗೆ ಘರ್ಷಣೆ ಇಲ್ಲ. ನಾವು ಎಲ್ಲವನ್ನು ಕಲಿಯಬೇಕು-ತಿಳಿಯಬೇಕು ಎಂಬುದೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಜವಾದ ಸಂದೇಶವಾಗಿದೆ ಎಂದರು.

ಪುದು ಗ್ರಾ.ಪಂ. ಅಧ್ಯಕ್ಷ ರಮ್ಲಾನ್‌ ಮಾರಿಪಳ್ಳ ಕನ್ನಡ ಧ್ವಜಾರೋಹಣವನ್ನು ಮಾಡಿ, ಫರಂಗಿಪೇಟೆ ಇಂದು ನಾಡಿನ ಗೌರವಾನ್ವಿತ ಸ್ಥಾನಮಾನವನ್ನು ಸಾಹಿತ್ಯ ಸಮ್ಮೇಳನದ ಮೂಲಕ ಪಡೆಯುವಂತಾಗಿದೆ. ಇದೆಲ್ಲ ನಮ್ಮ ಸೌಭಾಗ್ಯ ಎಂದರು.

ಬಂಟ್ವಾಳ ಕಸಾಪ ಅಧ್ಯಕ್ಷ ಕೆ. ಮೋಹನ ರಾವ್‌, ಸ್ವಾಗತ ಸಮಿತಿ ಕಾರ್ಯಾಧ್ಯಕ್ಷ ಕೃಷ್ಣ ಕುಮಾರ್‌ ಪೂಂಜ, ಅಧ್ಯಕ್ಷ ಕೆ.ಎನ್‌. ಗಂಗಾಧರ ಆಳ್ವ, ಉದ್ಯಮಿ ಎಸ್‌. ಮಹಮ್ಮದ್‌, ಸಾಮಾಜಿಕ ಸೇವಾಕರ್ತ ಪಿ.ಎ. ರಹೀಂ, ಗಣ್ಯರಾದ ಸದಾಶಿವ ಪೇರ್ಲಬೈಲು, ಪಲ್ಲವಿ ಕಾರಂತ, ಅಬ್ದುಲ್‌ ರಹಿಮಾನ್‌ ಡಿ.ಬಿ., ಜಯಾನಂದ ಪೆರಾಜೆ, ಮಹಾಬಲೇಶ್ವರ ಹೆಬ್ಟಾರ್‌, ಜಗದೀಶ ರೈ ಬಿ., ಕೆ.ಆರ್‌. ದೇವದಾಸ್‌, ವಿ.ಸು. ಭಟ್‌, ಕೃಷ್ಣ ಶರ್ಮ, ಬಿ.ಎಂ. ತುಂಬೆ, ಸುಜಾತಾ ಸಹಿತ ವಿವಿಧ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಧ್ವಜಾರೋಹಣ ಬಳಿಕ ನಾಡಗೀತೆ ಹಾಡಲಾಯಿತು. ಎಲ್ಲರಿಗೂ ಬೆಳಗ್ಗಿನ ಉಪಾಹಾರ, ಮಧ್ಯಾಹ್ನದ ಊಟ, ಸಂಜೆಯ ಉಪಾಹಾರ, ರಾತ್ರಿ ಊಟದ ವ್ಯವಸ್ಥೆ ಮಾಡಲಾಗಿತ್ತು.

ಮನಸ್ಸು ಒಂದಾಗಿಸಲಿ
ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾಧ್ಯಕ್ಷ ಎಸ್‌. ಪ್ರದೀಪ ಕುಮಾರ್‌ ಕಲ್ಕೂರ ಪರಿಷತ್‌ ಧ್ವಜಾರೋಹಣ ಮಾಡಿ ಮಾತನಾಡಿ, ಕನ್ನಡದ ಕುವರರಾದ ಜನತೆಗೆ ಇಂದು ಸ್ಮರಣೀಯ ದಿನವಾಗಿದೆ. ಸಮ್ಮೇಳನ ನಮ್ಮ ಮನಸ್ಸುಗಳನ್ನು ಒಂದಾಗಿಸಲಿ. ಕನ್ನಡವನ್ನು ಕಟ್ಟುವುದು ಪ್ರೀತಿ ವಿಶ್ವಾಸದ ನಡೆಯ ಮೂಲಕ ಬೆಸೆಯುವುದು ಹೊಂದಾಣಿಕೆ ಕೊಡುಕೊಳ್ಳುವಿಕೆಯಿಂದ ಎಂಬ ನಂಬಿಕೆ ನಮ್ಮದಾಗಿದೆ. ನಾವು ನೈಜ ಪ್ರೀತಿಯಿಂದ ಎಲ್ಲ ಭಾಷೆಯನ್ನು ಕಲಿಯುವ, ತಿಳಿಯುವ, ಓದುವ ಮೂಲಕ ಬೆಳೆದು ಬಂದಿದ್ದೇವೆ ಎಂದರು.

 ರಾಜಾ ಬಂಟ್ವಾಳ

ಟಾಪ್ ನ್ಯೂಸ್

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

prahlad-joshi

Neha ಹತ್ಯೆ ಲವ್ ಜಿಹಾದ್ ಅಲ್ಲ ಅನ್ನೋಕೆ ಇವರ್ಯಾರು?: ಸಚಿವ ಜೋಶಿ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.