ಕಳ್ಳಭಟ್ಟಿ ಅಡ್ಡೆ; ಪೊಲೀಸ್ ಬೆನ್ನಟ್ಟಿದ್ದಾಗ ಆರೋಪಿ ಸಾವು
Team Udayavani, Dec 2, 2017, 9:11 AM IST
ಬೆಳಗಾವಿ: ಜಿಲ್ಲೆಯ ಕಾಕತಿ ಪೊಲೀಸ್ ಠಾಣೆಯ ವ್ಯಾಪ್ತಿಯ ಹೊನಗಾ ಗ್ರಾಮದಲ್ಲಿ ಕಳ್ಳ ಭಟ್ಟಿ ಸರಾಯಿ ಸಾಗಿಸುತ್ತಿದ್ದ ಶಂಕಿತನನ್ನು ಅಬಕಾರಿ ಪೊಲೀಸರು ಬೆನ್ನಟ್ಟಿದಾಗ ತಪ್ಪಿಸಿಕೊಳ್ಳುವ ಯತ್ನದಲ್ಲಿ ಆತ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಶನಿವಾರ ಬೆಳಗಿನ ಜಾವ ನಡೆದಿದ್ದು, ಘಟನೆಯ ಬಳಿಕ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ.
24 ವರ್ಷದ ಅಡಿವೆಪ್ಪ ಎಂಬಾತ ಮೃತಪಟ್ಟಿದ್ದು, ಘಟನೆಯ ಬಳಿಕ ಗ್ರಾಮದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಅಡಿವೆಪ್ಪ ಸಂಬಂಧಿಕರು ಮತ್ತು ಗ್ರಾಮಸ್ಥರು ಅಬಕಾರಿ ಕಚೇರಿಯ ಮೇಲೆ ದಾಳಿ ನಡೆಸಿ ಆಕ್ರೋಶ ಹೊರಹಾಕಿದ್ದಾರೆ.
ಕೊಲ್ಲಾಪುರ ವೃತ್ತದಲ್ಲಿ ಅಬಕಾರಿ ಕಚೇರಿಯ ಗಾರ್ಡ್ ಏಕನಾಥ ಅವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪೊಲೀಸರೆ ಹೊಡೆದು ಬಾವಿಗೆ ತಳ್ಳಿದ್ದಾರೆ ಎಂದು ಉದ್ರಿಕ್ತರು ಆರೋಪಿಸಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪಡೆಗಳನ್ನು ಕಳುಹಿಸಲಾಗಿದೆ.
ಆರೋಪಿ ಬಾವಿಗೆ ಬಿದ್ದು ಪ್ರಾಣ ಭಿಕ್ಷೆ ನೀಡಿದರೂ ಅಬಕಾರಿ ಸಿಬಂದಿಗಳು ರಕ್ಷಿಸುವ ಯಾವ ಯತ್ವನ್ನೂ ಮಾಡಲಿಲ್ಲ ಎಂದು ಆರೋಪಿಸಲಾಗಿದೆ.
ದಾಳಿ ವೇಳೆ ನೊಂದಿಗೆ ಕಳ್ಳ ಭಟ್ಟಿ ಸಾಗಿಸುತ್ತಿದ್ದ ಇನ್ನಿಬ್ಬರು ಪರಾರಿಯಾಗಿದ್ದಾರೆ.
ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ