ಮತ್ತೆ ಹೊತ್ತಿ ಉರಿದ ಬೆಳಗಾವಿ


Team Udayavani, Dec 19, 2017, 7:40 AM IST

19-1.jpg

ಬೆಳಗಾವಿ: ಶಾಂತವಿದ್ದ ಬೆಳಗಾವಿ ನಗರ ಈಗ ಮತ್ತೆ ಹೊತ್ತಿ ಉರಿಯುತ್ತಿದ್ದು,  ಎರಡು ಕೋಮುಗಳ ಮಧ್ಯೆ ಕಲ್ಲು ತೂರಾಟ ನಡೆದಿದೆ. ಕೆಲವು ವಾಹನಗಳಿಗೆ ಬೆಂಕಿ ಹಚ್ಚಿ ಹಾಗೂ ಪೊಲೀಸ್‌ ಅಧಿಕಾರಿಗಳ ಮೇಲೆ ಕಲ್ಲು ತೂರಾಟ ನಡೆದಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.

ನಗರದ ಖಡಕಗಲ್ಲಿ ಹಾಗೂ ಖಂಜರಗಲ್ಲಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಕಲ್ಲು ತೂರಾಟ ನಡೆದಿದ್ದು, ಇದೇ ವಿಕೋಪಕ್ಕೆ ತಿರುಗಿ ನೂರಾರು ಯುವಕರ ಗುಂಪು ಪರಸ್ಪರ ಕಲ್ಲು ತೂರಾಟ ನಡೆಸಿದೆ. ಖಡಕಗಲ್ಲಿಯಲ್ಲಿ ಆರಂಭವಾದ ಗಲಭೆ ಬಡಕ ಗಲ್ಲಿ, ಖಂಜರಗಲ್ಲಿ, ಜಾಲಗಾರ ಗಲ್ಲಿ, ಚವಟಗಲ್ಲಿ, ದರ್ಬಾರ್‌ ಗಲ್ಲಿ, ಬಾಗವಾನ ಗಲ್ಲಿವರೆಗೂ ವ್ಯಾಪಿಸಿತು. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಮಾರ್ಕೆಟ್‌ ಎಸಿಪಿ ಶಂಕರ ಮಾರಿಹಾಳ, ಇನ್ಸ್‌ಪೆಕ್ಟರ್‌ ಪ್ರಶಾಂತ್‌ ಕುಮಾರ್‌, ಪಿಎಸ್‌ಐ ಸೌದಾಗರ ಹಾಗೂ ಇನ್ನಿಬ್ಬರು ಪೇದೆಗಳ ತಲೆಗಳಿಗೆ ಕಲ್ಲೇಟು ಬಿದ್ದಿದೆ. ಜತೆಗೆ ಸುದ್ದಿ ಮಾಡಲು ತೆರಳಿದ್ದ ಛಾಯಾಚಿತ್ರಗ್ರಾಹಕರ ಮೇಲೂ ಕಿಡಿಗೇಡಿಗಳು ಹಲ್ಲೆ ನಡೆಸಿದ್ದಾರೆ.

ಎಸಿಪಿ ಶಂಕರ ಮಾರಿಹಾಳ ಹೆಲ್ಮೆಟ್‌ ಧರಿಸಿದ್ದರೂ ಕಣ್ಣಿನ ಮೇಲ್ಭಾಗಕ್ಕೆ ಕಲ್ಲು ಬಿದ್ದಿದ್ದರಿಂದ ತೀವ್ರ ರಕ್ತ ಹರಿದಿದೆ. ಅನಂತರ ಗಾಯಳು ಪೊಲೀಸರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಈ ಗಲಭೆ ಇಷ್ಟಕ್ಕೆ ನಿಲ್ಲದೇ ಖಡೇ ಬಜಾರ್‌ನಲ್ಲೂ ರಾತ್ರಿ 11.30ರ ಸುಮಾರಿಗೆ ವ್ಯಾಪಿಸಿಕೊಂಡಿದೆ. ಖಡೇಬಜಾರ್‌ನಲ್ಲಿರುವ ಮನೆ ಹಾಗೂ ಅಂಗಡಿಗಳ ಮುಂದೆ ನಿಲ್ಲಿಸಿದ್ದ ಕೆಲವು ವಾಹನಗಳಿಗೆ 
ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಸ್ಥಳಕ್ಕೆ ಪೊಲೀಸರು ಬಂದು ಬೆಂಕಿ ನಂದಿಸಿದ್ದಾರೆ. ಖಡಕಗಲ್ಲಿಯಲ್ಲಿ ಮಂಗಳವಾರ ಅಯಪ್ಪ ಸ್ವಾಮಿಯ ಮಹಾಪೂಜೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದ್ದು, ಪೂಜೆ ಹಿನ್ನೆಲೆಯಲ್ಲಿ ಸೋಮವಾರ ರಾತ್ರಿ ಖಡಕಗಲ್ಲಿ ಕಾರ್ನರ್‌ ಸಹಿತ ಇತರೆಡೆ ಬ್ಯಾನರ್‌ ಹಾಗೂ ಕಟೌಟ್‌ ಹಚ್ಚುವ ಕೆಲಸ ನಡೆದಿತ್ತು. ಯುವಕರು ಗುಂಪುಗೂಡಿ ಪೂಜಾ ಸಿದ್ಧತೆ ನಡೆಸುತ್ತಿರುವಾಗಲೇ ಬೇರೆ ಗಲ್ಲಿಗಳು ಕಲ್ಲು ಬಿದ್ದಿವೆ. ಇದರಿಂದ ಭಯಭೀತಗೊಂಡ ಯುವಕರ ಗುಂಪು ಅತ್ತಿತ್ತ ಓಡಾಟ ಶುರು ಮಾಡಿತು. ಅನಂತರ ಹೆಚ್ಚಿನ  ಸಂಖ್ಯೆಯಲ್ಲಿ ಸೇರಿದ ಯುವಕರು ಭಾರೀ ಪ್ರಮಾಣದಲ್ಲಿ ಪರಸ್ಪರ ಕಲ್ಲು ತೂರಾಟ ನಡೆಸಿದ್ದಾರೆ.  ಖಂಜರಗಲ್ಲಿ ಸುತ್ತಮುತ್ತಲಿನ ಅವರಣದಲ್ಲಿ ಕಲ್ಲಿನ ರಾಶಿಗಳೇ ಬಿದ್ದಿವೆ. ಬಿಗಿ ಬಂದೋ ಬಸ್ತ್ ಕೈಗೊಳ್ಳಲಾಗಿದ್ದು, ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಚನ್ನಮ್ಮನ ಕಿತ್ತೂರು: ಮಹಾನ್‌ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.