ಅಂಚೆಯಣ್ಣ ನಿಂದ ಬ್ಯಾಂಕ್ ಸೇವೆ: ಅಂಗಡಿ
Team Udayavani, Sep 2, 2018, 3:09 PM IST
ಬೆಳಗಾವಿ: ಕೆಲ ವರ್ಷಗಳ ಹಿಂದೆ ದೂರದ ಸಂಬಂಧವನ್ನು ಗಟ್ಟಿಗೊಳ್ಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದ್ದ ಅಂಚೆಯಣ್ಣ ಈಗ ಮತ್ತೆ ಜನರ ಮನೆ ಬಾಗಿಲಿಗೆ ಬಂದು ಬ್ಯಾಂಕ್ ಸೇವೆ ನೀಡುವ ಮೂಲಕ ಮತ್ತಷ್ಟು ಹತ್ತಿರವಾಗಲಿದ್ದಾನೆ ಎಂದು ಸಂಸದ ಸುರೇಶ ಅಂಗಡಿ ಹೇಳಿದರು.
ನಗರದ ಟಿಳಕವಾಡಿಯ ರಾಮನಾಥ ಮಂಗಲ ಕಾರ್ಯಾಲಯದಲ್ಲಿ ಶನಿವಾರ ನಡೆದ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಹಳ್ಳಿ ಜನರಿಗೆ ಉತ್ಕೃಷ್ಟ ಹಾಗೂ ಪ್ರಾಮಾಣಿಕ ಸೇವೆ ನೀಡುವ ಮೂಲಕ ಪೋಸ್ಟ್ಮನ್ಗಳು ಜನರಿಗೆ ಹತ್ತಿರವಾಗಿದ್ದಾರೆ. ಇನ್ನು ಮನೆ ಬಾಗಿಲಿಗೆ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಬರಲಿದ್ದು, ಮುಖ್ಯವಾಗಿ ಜನರ ಅನುಕೂಲಕ್ಕಾಗಿ ಈ ಬ್ಯಾಂಕ್ ನಿತ್ಯ ಸೇವೆ ನೀಡಲಿದೆ ಎಂದರು.
ಜಿಲ್ಲೆಯ ಐದು ಕಡೆಗಳಲ್ಲಿ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ (ಪಿಐಐಬಿ) ಆರಂಭಿಸಲಾಗುತ್ತಿದ್ದು, ಹಂತ ಹಂತವಾಗಿ ಎಲ್ಲ ಅಂಚೆ ಕಚೇರಿಗಳಲ್ಲಿ ಆರಂಭಿಸಲಾಗುವುದು. ಟಿಳಕವಾಡಿ, ಸವದತ್ತಿ, ರಾಮದುರ್ಗ, ಹುಲಿಕಟ್ಟಿ ಹಾಗೂ ಹಳೆ ಹುಲಗೇರಿಯಲ್ಲಿ ಆರಂಭಿಸಲಾಗಿದೆ. ಈ ಯೋಜನೆ ಮೂಲಕ ಗ್ರಾಮೀಣ ಪ್ರದೇಶದ ಸಾಮಾನ್ಯ ಜನರ ಮನೆ ಬಾಗಿಲಿಗೆ ಬ್ಯಾಂಕ್ ಸೇವೆ ನೀಡಲಿದೆ. ಈ ಸೇವೆ ಗ್ರಾಮೀಣ ಜನರಿಗೆ ಅನುಕೂಲವಾಗಲಿದೆ ಎಂದರು.
ನಗರದಲ್ಲಿ ಕೇಂದ್ರ ಅಂಚೆ ಕಚೇರಿ ಬಳಿಯ ವೃತ್ತದಲ್ಲಿ ಅಂಚೆಯಣ್ಣನ ಮೂರ್ತಿ ಸ್ಥಾಪನೆಗೆ ಈಗಾಗಲೇ ದಂಡುಮಂಡಳಿ ಒಪ್ಪಿಗೆ ಸೂಚಿಸಿದೆ. ಅಕ್ಟೋಬರ್ ಒಳಗೆ ಮೂರ್ತಿ ಸ್ಥಾಪನೆ ಮಾಡಲಾಗುವುದು. ಕಾರ್ಯಕ್ರಮಕ್ಕೆ ಕೇಂದ್ರ ಸಚಿವರನ್ನು ಆಹ್ವಾನಿಸಲಾಗುವುದು ಎಂದು ಸಂಸದ ಅಂಗಡಿ ತಿಳಿಸಿದರು.
ಶಾಸಕ ಅನಿಲ ಬೆನಕೆ ಮಾತನಾಡಿ, ಮೊಬೈಲ್ ಯುಗದಲ್ಲಿ ಅಂಚೆ ಕಚೇರಿಗಳು ಬಂದ್ ಆಗುವ ಸ್ಥಿತಿಯಲ್ಲಿದ್ದವು. ಪ್ರಧಾನಿ ನರೇಂದ್ರ ಮೋದಿ ಅಂಚೆ ಕಚೇರಿ ಬಗ್ಗೆ ವಿಶೇಷ ಕಾಳಜಿ ವಹಿಸುವ ಮೂಲಕ ವಿವಿಧ ಯೋಜನೆಗಳನ್ನು ಜಾರಿಗೆ ತಂದು ಇದನ್ನು ತ್ತೇಜಿಸುವ ಕೆಲಸ ಮಾಡುತ್ತಿದ್ದಾರೆ ಎಂದರು.
ಪಾಲಿಕೆ ಸದಸ್ಯ ರಾಕೇಶ ಪಲಂಗೆ, ಬಿಜೆಪಿ ನಗರ ಅಧ್ಯಕ್ಷ ರಾಜೇಂದ್ರ ಹರಕುಣಿ, ಮಂಗೇಶ ಪವಾರ, ಅಂಚೆ ಇಲಾಖೆ ಅಧೀಕ್ಷಕ ಎಸ್.ಡಿ. ಕುಲಕರ್ಣಿ, ನೂತನ ಬ್ಯಾಂಕ್ ವ್ಯವಸ್ಥಾಪಕ ಮನೇಶ ತಿವಾರಿ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
MUST WATCH
ಹೊಸ ಸೇರ್ಪಡೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!