ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯ
Team Udayavani, Oct 17, 2018, 4:50 PM IST
ಹಿರೇಕೆರೂರ: ಪರಿಶಿಷ್ಟ ಪಂಗಡದ ಹೆಸರಿನಲ್ಲಿ ನಡೆಯುತ್ತಿರುವ ನಕಲಿ ಜಾತಿ ಪ್ರಮಾಣ ಪತ್ರ ನೀಡುವುದನ್ನು ತಡೆಗಟ್ಟಬೇಕು. ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ತಾಲೂಕು ವಾಲ್ಮೀಕಿ ನಾಯಕ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಸಂಘದ ಅಧ್ಯಕ್ಷ ಜಿ.ಎಚ್.ತಳವಾರ ಮಾತನಾಡಿ, ರಾಜ್ಯದಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರದ ಕೆಲವರು ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದು, ಇದನ್ನು ತಡೆಗಟ್ಟಬೇಕು. ರಾಜಕೀಯದಲ್ಲಿ ಪರಿಶಿಷ್ಟ ಪಂಗಡದವರಿಗೆ ಶೇ. 7ರಷ್ಟು ಮೀಸಲಾತಿ ನೀಡುತ್ತಿದ್ದು, ಉದ್ಯೋಗ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಕೇವಲ ಶೇ. 3ರಷ್ಟು ಮೀಸಲಾತಿ ನೀಡುತ್ತಿದೆ. ಇದನ್ನು ಶೇ. 7ಕ್ಕೆ ಹೆಚ್ಚಿಸಬೇಕು. ಪರಿಶಿಷ್ಟ ನೌಕರರ ಮುಂಬಡ್ತಿ ಮೀಸಲಾತಿಯನ್ನು ಕಾನೂನು ಪ್ರಕಾರ ಶೀಘ್ರದಲ್ಲಿ ಜಾರಿಗೊಳಿಸಬೇಕು. ಪರಿಶಿಷ್ಟ ಪಂಗಡ ಅಭಿವೃದ್ಧಿಗೆ ಪ್ರತ್ಯೇಕ ಸಚಿವಾಲಯ ತೆರೆಯಬೇಕು ಎಂದು ಆಗ್ರಹಿಸಿದರು.
ಪರಿಶಿಷ್ಟ ಪಂಗಡದ ಆದಾಯ ಮಿತಿಯನ್ನು 2.50 ಲಕ್ಷ ರೂ.ದಿಂದ 10 ಲಕ್ಷಕ್ಕೆ ಹೆಚ್ಚಿಸಬೇಕು. ವಾಲ್ಮೀಕಿ ಸಮಾಜಕ್ಕೆ ಸೇರಿದ ಇನ್ನೂ 3 ಶಾಸಕರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು. ಸಂಘದ ಪ್ರಧಾನ ಕಾರ್ಯದರ್ಶಿ ಹುಚ್ಚಪ್ಪ ಗೋಣೇರ, ಪಟ್ಟಣ ಪಂಚಾಯತ್ ಸದಸ್ಯ ಬಸವರಾಜ ಕಟ್ಟಿಮನಿ, ಜಿ.ಕೆ.ಸುಳಗನ್ನಿ, ಹನುಮಂತಪ್ಪ ದೀವಿಗಿಹಳ್ಳಿ, ಕೆ.ಡಿ.ದೀವಿಗಿಹಳ್ಳಿ, ಚಂದ್ರಪ್ಪ ಮಾರವಳ್ಳಿ, ರವಿ ಹಾದ್ರಿಹಳ್ಳಿ, ಪಿ.ಎಸ್. ಸಾಲಿ, ಹೊನ್ನಪ್ಪ ಸಾಲಿ, ಮಂಜು ದೊಡ್ಡತಳವಾರ, ಗದಿಗೆಪ್ಪ ಮಾರವಳ್ಳಿ, ಪ್ರವೀಣ ತಳವಾರ, ವಸಂತಪ್ಪ ವಾಲ್ಮೀಕಿ, ರಾಮಚಂದ್ರಪ್ಪ ಓಲೇಕಾರ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri: ಮೋದಿ ವಿರುದ್ಧ ಚುನಾವಣಾ ಆಯೋಗ ಕ್ರಮ ಜರುಗಿಸಲಿ: ಹರಿಪ್ರಸಾದ್ ಆಗ್ರಹ
Lok Sabha Elections ನಾಮಪತ್ರಕ್ಕೆ ಸೂಚಕರ ಸಹಿ ನಕಲಿ: ಅಭ್ಯರ್ಥಿ ವಿರುದ್ಧ ದೂರು
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Ls polls: ರಾಜ್ಯದಲ್ಲಿ ನಾವು 18 -20 ಸೀಟ್ ಗೆಲ್ಲುತ್ತೇವೆ; ಸಚಿವ ಶಿವಾನಂದ ಪಾಟೀಲ ವಿಶ್ವಾಸ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ