ಸಾಧನೆಯೊಂದೇ ವಿದ್ಯಾರ್ಥಿಗಳ ಗುರಿಯಾಗಲಿ: ಪ್ರೇಮಾ
Team Udayavani, Sep 9, 2018, 5:21 PM IST
ಬೆಳಗಾವಿ: ಪೈಪೋಟಿಯ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೌಲ್ಯಯುತ ಶಿಕ್ಷಣ ಪಡೆಯುವುದರೊಂದಿಗೆ ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಎಂದು ಚಿತ್ರನಟಿ ಪ್ರೇಮಾ ಕರೆ ನೀಡಿದರು. ನಗರದ ನಾಯ್ಕರ ಶಿಕ್ಷಣ ಸಂಸ್ಥೆಯ ರವೀಂದ್ರನಾಥ ಠಾಗೋರ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಆಶ್ರಯದಲ್ಲಿ ಶನಿವಾರ ಜಿಲ್ಲೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಲಕ್ಷ್ಯ -2018 ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೀವನದಲ್ಲಿ ನೂರಾರು ಕಷ್ಟಗಳು ಬರುತ್ತವೆ. ಅವುಗಳನ್ನೆಲ್ಲ ಬದಿಗೊತ್ತಿ ಸಾಧನೆಯೊಂದೇ ವಿದ್ಯಾರ್ಥಿಗಳ ಗುರಿಯಾಗಬೇಕು.
ಗುರಿ ಸಾಧನೆಗೆ ಯೋಗವನ್ನು ಆಳವಡಿಸಿಕೊಳ್ಳುವುದು ಉತ್ತಮ ಮಾರ್ಗವಾಗಿದೆ. ಮಕ್ಕಳು ಸದಭಿರುಚಿಗೆ ತಕ್ಕಂತೆ ಶಿಕ್ಷಣ ಮಾರ್ಗ ಆಯ್ಕೆ ಮಾಡಿಕೊಳ್ಳಲು ಪಾಲಕರು ಪ್ರಯತ್ನಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ| ಸಿ.ಎನ್.ನಾಯ್ಕರ ಮಾತನಾಡಿ, ಸಂಸ್ಥೆಯ ಧ್ಯೇಯ ಹಾಗೂ ಉದ್ದೇಶಗಳ ಬಗ್ಗೆ ವಿವರಿಸಿದರು. ಲಕ್ಷ್ಯ-2018 ಸಾಂಸ್ಕೃತಿಕ ಕಾರ್ಯಕ್ರಮವಲ್ಲ. ಇದೊಂದು ಸಾಂಸ್ಕೃತಿಕ ಜಾತ್ರೆಯಾಗಿದ್ದು, ಸುಮಾರು 63 ಶಾಲೆಗಳ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಶ್ಯಾಮ ಘಾಟಗೆ, ಜಿಪಂ ಅಧ್ಯಕ್ಷ ಆಶಾ ಐಹೊಳೆ ಹಾಗೂ ನಾಯ್ಕರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶ್ವೇತಾ ನಾಯ್ಕರ ಉಪಸ್ಥಿತರಿದ್ದರು. ಸೃತಿ ಮತ್ತು ಚೈತ್ರಾ ನಿರೂಪಿಸಿದರು. ಹೃತುರಾಜ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ
Belagavi; ಸೋಲಿನ ಭಯದಿಂದ ಮೃಣಾಲ್ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ