ಸ್ವಾಮಿ ವಿವೇಕಾನಂದರು ಯುವಕರಿಗೆ ಪ್ರೇರಕ ಶಕ್ತಿ  


Team Udayavani, Sep 12, 2018, 3:54 PM IST

12-sepctember-19.jpg

ಬೆಳಗಾವಿ: ಸ್ವಾಮಿ ವಿವೇಕಾನಂದರು ಶಿಕಾಗೋ ಸಮ್ಮೇಳನದಲ್ಲಿ ಮಾಡಿದ ಉಪನ್ಯಾಸ ಸುವರ್ಣಾಕ್ಷರಗಳಲ್ಲಿ ಬರೆದಿಡುವಂಥದು ಎಂದು ಕುಣಿಗಲ್‌ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ| ಎಂ. ಗೋವಿಂದರಾಯ ಹೇಳಿದರು. ನಗರದ ಕುಮಾರ ಗಂಧರ್ವ ರಂಗಮಂದಿರದಲ್ಲಿ ಸ್ವಾಮಿ ವಿವೇಕಾನಂದರ ಶಿಕಾಗೋ ಉಪನ್ಯಾಸದ ನಿಮಿತ್ತ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

1893ರಲ್ಲಿ ನಡೆದ ಷಿಕಾಗೋ ಸಮ್ಮೇಳನ ವಿವೇಕಾನಂದರ ಜೀವನದ ದಿಕ್ಕನ್ನೇ ಬದಲಾಯಿಸಿತು. ಈ ಸಮ್ಮೇಳನದ ಮೂಲಕ ವಿವೇಕಾನಂದರು ತಮ್ಮ ಅಗಾಧ ಜ್ಞಾನ ಹಾಗೂ ಭಾರತದ ಸಂಸ್ಕೃತಿಯನ್ನು ಇಡೀ ಜಗತ್ತಿಗೆ ಪರಿಚಯಿಸಿದರು. ಈ ಸಮ್ಮೇಳನ ಸಮಸ್ತ ಮಾನವ ಜನಾಂಗದ ಸಮ್ಮೇಳನವಾಗಿತ್ತು. ವಿವೇಕಾನಂದರು ಸಹಿಷ್ಣುತಾ ಭಾವವನ್ನು ಪ್ರಪಂಚಕ್ಕೆ ಸಂದೇಶವಾಗಿ ನೀಡಿದರು. ಹಿಂದೂ ಧರ್ಮಕ್ಕೆ ಅಪಾರ ಕೊಡುಗೆ ನೀಡಿ ವಿಶ್ವ ಧರ್ಮಕ್ಕೆ ತಳಹದಿ ಹಾಕಿದರು. ವಿವೇಕಾನಂದರು ಯುವ ಜನಾಂಗಕ್ಕೆ ಮಾದರಿಯಾಗಿದ್ದು, ಯುವಕರಿಗೆ ಪ್ರೇರಕ ಶಕ್ತಿಯಾಗಿದ್ದಾರೆ ಎಂದು ಹೇಳಿದರು.

ಭಾರತವನ್ನು ಅರ್ಥೈಸಿಕೊಳ್ಳಬೇಕೆಂದರೆ ವಿವೇಕಾನಂದರ ಬಗ್ಗೆ ಓದಿ ಎಂದು ಮಹಾತ್ಮಾ ಗಾಂಧೀಜಿ ಹೇಳಿದ್ದರು. ವಿವೇಕಾನಂದರ ಬಗ್ಗೆ ಓದಿದಾಗ ತಮ್ಮಲ್ಲಿ ರಾಷ್ಟ್ರೀಯತೆ ಭಾವ ಹೆಚ್ಚಾಯಿತು ಎಂದು ಗಾಂಧೀಜಿ ಅವರು ಉಲ್ಲೇಖೀಸಿದ್ದಾರೆ. ವಿವೇಕಾನಂದರು ಯುವ ಜನಾಂಗದ ಬಗ್ಗೆ ಹೆಚ್ಚಿನ ವಿಶ್ವಾಸ ಹೊಂದಿದ್ದರು ಎಂದರು. ಶಾಸಕ ಅನಿಲ ಬೆನಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿವೇಕಾನಂದರ ಶಿಕಾಗೋ ಭಾಷಣಕ್ಕಿಂತ ಮುಂಚೆ ವಿದೇಶಿಗರಲ್ಲಿ ಭಾರತದ ಬಗ್ಗೆ ಕೀಳು ಭಾವನೆ ಇತ್ತು. ವಿವೇಕಾನಂದರ ಭಾಷಣದ ನಂತರ ಭಾರತದ ಸಂಸ್ಕೃತಿ, ಆಚಾರ, ವಿಚಾರ ಪ್ರಪಂಚದಾದ್ಯಂತ ಪ್ರಚಾರವಾಯಿತು. 1892ರ ಅ.15 ರಂದು ಸ್ವಾಮಿ ವಿವೇಕಾನಂದರು ಬೆಳಗಾವಿಗೆ ಭೇಟಿ ನೀಡಿ 12 ದಿನಗಳ ಕಾಲ ಇಲ್ಲಿ ತಂಗಿದ್ದರು ಎಂಬುದು ಹೆಮ್ಮೆಯ ವಿಚಾರ. ನಗರದಲ್ಲಿರುವ ರಾಮಕೃಷ್ಣ ಆಶ್ರಮಕ್ಕೆ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ನೀಡಿ, ವಿವೇಕಾನಂದರ ಬಗ್ಗೆ ತಿಳಿದುಕೊಳ್ಳಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಡಾ| ಎಚ್‌.ಬಿ. ಬೂದೆಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿ, ಸ್ವಾಮಿ ವಿವೇಕಾನಂದರು ಅಪಾರ ಪಾಂಡಿತ್ಯ ಹೊಂದಿದ್ದರು. ವೇದ, ಉಪನಿಷತ್‌, ರಾಮಾಯಣ, ಮಹಾಭಾರತ ಸೇರಿದಂತೆ ಅನೇಕ ವಿಷಯಗಳನ್ನು ವಿಸ್ತೃತವಾಗಿ ತಿಳಿದುಕೊಂಡಿದ್ದರು ಎಂದರು.

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಸಿ.ಬಿ. ರಂಗಯ್ಯ ಪ್ರಾಸ್ತಾವಿಕ ಮಾತನಾಡಿ, ಷಿಕಾಗೋ ಸಮ್ಮೇಳನದ 125ನೇ ವರ್ಷಾಚರಣೆ ನಿಮಿತ್ತ ಸೆ. 11ರಿಂದ ಅ.11 ರವರೆಗೆ ತಿಂಗಳ ಕಾಲ ಶಾಲೆ, ಕಾಲೇಜು, ವಿವಿಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ, ಭಾಷಣ ಸೇರಿದಂತೆ ವಿವಿಧ ಸ್ಪರ್ಧೆ ಹಾಗೂ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿದೆ ಎಂದರು.

ಟಾಪ್ ನ್ಯೂಸ್

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Food Safety: ಆಹಾರ ಸುರಕ್ಷೆ- ನೂರು ಪ್ರತಿಶತ ಖಾತರಿ ಅಗತ್ಯ‌

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.