ಪೊಲೀಸ್‌ ಠಾಣೆಯಲ್ಲೇ  ಸಪ್ತಪದಿ ತುಳಿದ ಜೋಡಿಹಕ್ಕಿ 


Team Udayavani, Oct 1, 2018, 4:31 PM IST

1-october-17.gif

ಬೆಳಗಾವಿ: ತಮ್ಮ ಪ್ರೀತಿ ಹಾಗೂ ಮದುವೆಗೆ ಮನೆಯವರ ತೀವ್ರ ವಿರೋಧದಿಂದ ಬೇಸತ್ತಿದ್ದ ಯುವ ಪ್ರೇಮಿಗಳು ಕೊನೆಗೆ ಪೊಲೀಸ್‌ ಠಾಣೆಯ ಮೆಟ್ಟಿಲೇರಿ ಅಲ್ಲಿಯೇ ಪೋಷಕರ ಹಾಗೂ ಪೊಲೀಸರ ಸಮ್ಮುಖದಲ್ಲಿ ಹಸೆಮನೆ ಏರಿದ ಅಪರೂಪದ ಪ್ರಕರಣ ಬೆಳಗಾವಿ ನಗರದಲ್ಲಿ ಶನಿವಾರ ನಡೆದಿದೆ.

ಇಲ್ಲಿಯ ವೈಭವ ನಗರದ ಅನಿಲ ಚವ್ಹಾಣ(24) ಹಾಗೂ ರಾಮತೀರ್ಥ ನಗರದ ದೀಪಾ ಲಮಾಣಿ (21) ಮದುವೆಯಾದ ಜೋಡಿ. ಶನಿವಾರ ಸಂಜೆ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪೊಲೀಸ್‌ ಇನ್ಸ್‌ಪೆಕ್ಟರ್‌ ಶ್ರೀದೇವಿ ಪಾಟೀಲ ಹಾಗೂ ಪಾಲಕರ ಸಮ್ಮುಖದಲ್ಲಿ ಈ ಜೋಡಿಯು ಪರಸ್ಪರ ಹಾರ ಹಾಕಿಕೊಳ್ಳುವ ಮೂಲಕ ಹೊಸ ಜೀವನಕ್ಕೆ ಕಾಲಿಟ್ಟಿತು. 

ಕುಟುಂಬದ ವಿರೋಧದಿಂದ ಬೇಸತ್ತು ಠಾಣೆಗೆ ಬಂದಿದ್ದ ಈ ಜೋಡಿಯ ಪ್ರೇಮದ ಕತೆ ಕೇಳಿದ ಪೊಲೀಸ್‌ ಅಧಿಕಾರಿ ಶ್ರೀದೇವಿ ಪಾಟೀಲ ಇಬ್ಬರೂ ಪಾಲಕರನ್ನು ಠಾಣೆಗೆ ಕರೆಸಿ ಮಾತನಾಡಿದ್ದಾರೆ. ಎರಡೂ ಕಡೆಯ ಕುಟುಂಬದ ಸದಸ್ಯರ ಅಭಿಪ್ರಾಯ ಆಲಿಸಿದ ಪೊಲೀಸ್‌ ಸಿಬ್ಬಂದಿ, ಕೊನೆಗೆ ಪಾಲಕರ ಮನವೊಲಿಸುವಲ್ಲಿ ಯಶಸ್ವಿಯಾಗಿ ಠಾಣೆಯಲ್ಲೇ ಈ ಜೋಡಿಯ ಮದುವೆ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಎರಡು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಈ ಜೋಡಿಗೆ ಮದುವೆಯಾಗಲು ಮನೆಯವರ ಒಪ್ಪಿಗೆ ಇರಲಿಲ್ಲ. ಅನಿಲ ಚವ್ಹಾಣ ಕುಟುಂಬದಿಂದ ಒಪ್ಪಿಗೆ ಸಿಕ್ಕಿರಲಿಲ್ಲ. ಇದರಿಂದ ಬೇಸತ್ತ ದೀಪಾ ಹಾಗೂ ಅನಿಲ ಮನೆಯವರು ಇದಕ್ಕೆ ವಿರೋಧ ಮಾಡಿದ್ದರು. ಎರಡೂ ಮನೆಯವರನ್ನು ಅನುಮತಿ ಕೊಡುವಂತೆ ಸಾಕಷ್ಟು ಪ್ರಯತ್ನ ಮಾಡಿದ ದೀಪಾ ಹಾಗೂ ಅನಿಲ ಕೊನೆಗೆ ಅನಿವಾರ್ಯವಾಗಿ ಪೊಲೀಸ್‌ ಠಾಣೆಯ ಮೆಟ್ಟಿಲು ಹತ್ತಿದರು. ಯುವ ಜೊಡಿಯ ಬೆಂಬಲಕ್ಕೆ ನಿಂತು ಠಾಣೆಯಲ್ಲೇ ಅಪರೂಪದ ಮದುವೆ ಮಾಡಿ ಯುವ ಜೋಡಿಯ ಬಾಳಲ್ಲಿ ಸಂತಸ ಮೂಡುವಂತೆ ಮಾಡಿದರು. ಎರಡೂ ಮನೆಯ ಪಾಲಕರು ಈ ಸಂತಸದಲ್ಲಿ ಭಾಗಿಯಾಗಿದ್ದರು.

ಈ ಜೋಡಿಯು ಶನಿವಾರ ಇಲ್ಲಿಗೆ ಬರುವ ಮೊದಲು ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ. ಆದರೆ ಅವರಿಗೆ ಧೈರ್ಯ ಇರಲಿಲ್ಲ. ನಮ್ಮನ್ನು ಸಂಪರ್ಕಿಸಿ ನಾವು ಠಾಣೆಯಲ್ಲೇ ಮತ್ತೆ ನಿಮ್ಮ ಎದುರಲ್ಲಿ ಮದುವೆಯಾಗುತ್ತೇವೆ ಎಂದು ಕೇಳಿದರು. ಇವರ ಮಾತು ಕೇಳಿ ನಾವೇ ಅವರ ಪಾಲಕರನ್ನು ಕರೆಸಿ ಅವರ ಮನವೊಲಿಸಿ ಮದುವೆ ಮಾಡಿಸಿದ್ದೇವೆ ಎಂದು ಪೊಲೀಸ್‌ ಅಧಿಕಾರಿ ಶ್ರೀದೇವಿ ಪಾಟೀಲ ‘ಉದಯವಾಣಿ’ಗೆ ತಿಳಿಸಿದರು.

ಟಾಪ್ ನ್ಯೂಸ್

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

14-mng

Ullala: ಮಲಗಿದ್ದಲ್ಲೇ ಹೃದಯಾಘಾತದಿಂದ ಸಾವು

13-

Muddebihal: ಅಪರಿಚಿತ ವಾಹನ ಡಿಕ್ಕಿ: ಯುವಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.