ರಾಜ್ಯದಲ್ಲಿ 1236 ದೌರ್ಜನ್ಯ ಪ್ರಕರಣ ವಿಚಾರಣೆ ಪೂರ್ಣ


Team Udayavani, Oct 6, 2018, 4:30 PM IST

6-october-17.gif

ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಿಗೆ ಬೆಂಗಳೂರಿನ ಸಾರ್ವಜನಿಕ ಸ್ಥಳಗಳು ಸುರಕ್ಷಿತವಲ್ಲ ಎಂಬ ಭಾವನೆ ಹೆಚ್ಚಾಗಿರುವುದು ಇತ್ತೀಚೆಗೆ ನಡೆದ ಸಮೀಕ್ಷೆಯಲ್ಲಿ ಗೊತ್ತಾಗಿದ್ದು, ಇದೇ ಪರಿಸ್ಥಿತಿ ದೇಶದ ಇತರ ನಗರಗಳಲ್ಲಿಯೂ ಇದೆ ಎಂದು ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯ ರೂಪಕಕುಮಾರ ದತ್ತ ಹೇಳಿದರು.

ನಗರದಲ್ಲಿ ಶುಕ್ರವಾರ ನವದೆಹಲಿಯ ಹನ್ಸ್‌ ಸೆಡಲ್‌ ಪ್ರತಿಷ್ಠಾನ, ಗ್ಲೋಬಲ್‌ ಕನ್‌ ಸರ್ನ್ಸ್ ಇಂಡಿಯಾ, ಸಾಧನಾ ಮಾನವ ಹಕ್ಕುಗಳ ಕೇಂದ್ರ, ಹಾಗೂ ಮಾನವ ಹಕ್ಕುಗಳ ಆಯೋಗದ ಸಹಯೋಗದಲ್ಲಿ ಮಹಿಳೆ ಮತ್ತು ಮಕ್ಕಳಿಗೆ ಸುರಕ್ಷಿತ ನಗರಗಳ ನಿರ್ಮಾಣ ವಿಷಯವಾಗಿ ಆಯೋಜಿಸಿರುವ ಎರಡು ದಿನಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಬೆಂಗಳೂರಿನಂತಹ ಮೆಟ್ರೋ ನಗರಗಳಲ್ಲಿ ಶೇ.90ರಷ್ಟು ಮಹಿಳೆಯರು ಸಾರ್ವಜನಿಕ ಸ್ಥಳಗಳಿಗೆ ಹೋಗಲು ಈಗಲೂ ಹಿಂದೇಟು ಹಾಕುತ್ತಿದ್ದಾರೆ. ಅಲ್ಲಿ ಅತಂಕ ಹಾಗೂ ಭಯದ ವಾತಾವರಣ ಇರುವದೇ ಇದಕ್ಕೆ ಕಾರಣ. ಇದನ್ನು ಹೋಗಲಾಡಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.

ಮಹಿಳೆಯರು ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳು ನಿರೀಕ್ಷಿತ ಪ್ರಮಾಣದಲ್ಲಿ ಇತ್ಯರ್ಥಗೊಳ್ಳುತ್ತಿಲ್ಲ. 2016ರಿಂದ ಇಲ್ಲಿಯವರೆಗೆ ದೇಶದಲ್ಲಿ 22 ಲಕ್ಷ ಪ್ರಕರಣಗಳು ವಿಚಾರಣೆಗೆ ಬಂದಿದ್ದು, ಅದರಲ್ಲಿ 23 ಸಾವಿರ ಪ್ರಕರಣಗಳು ಇತ್ಯರ್ಥಗೊಂಡಿವೆ. ರಾಜ್ಯದಲ್ಲಿ 1236 ದೌರ್ಜನ್ಯ ಪ್ರಕರಣಗಳ ವಿಚಾರಣೆ ಪೂರ್ಣಗೊಂಡಿದ್ದು, 60 ಪ್ರಕರಣಗಳಲ್ಲಿ ಮಾತ್ರ ಆರೋಪಿಗಳಿಗೆ ಶಿಕ್ಷೆಯಾಗಿದೆ ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಧೀರಕುಮಾರ ರೆಡ್ಡಿ ಮಾತನಾಡಿ, ನಮ್ಮ ನಗರ ಹಾಗೂ ಜಿಲ್ಲೆಗಳಲ್ಲಿ ಸುರಕ್ಷತೆ ಒಡಗಿಸಲಾಗುತ್ತಿದೆ ಎಂದು ಹೇಳಿದರೂ ವಾಸ್ತವದಲ್ಲಿ ಹಾಗಿಲ್ಲ. ಪರಿಸ್ಥಿತಿ ಹಾಗೂ ನಮ್ಮ ಕಾರ್ಯವೈಖರಿ ನ್ಯೂನ್ಯತೆಗಳನ್ನು ಹುಟ್ಟು ಹಾಕುತ್ತಿದೆ ಎಂದರು. ಗ್ಲೋಬಲ್‌ ಕನ್‌ಸರ್ನ್ಸ್ ಇಂಡಿಯಾ ಸಂಸ್ಥೆ ಸಂಯೋಜಕಿ ಬೃಂದಾ ಅಡಿಗೆ ಮಾತನಾಡಿ, ಪೊಲೀಸ್‌ ಹಾಗೂ ನ್ಯಾಯಾಂಗ ಇಲಾಖೆಯಿಂದ ನ್ಯಾಯ ಸಿಗುತ್ತದೆ ಎನ್ನುವ ಭಾವನೆ ಜನರಲ್ಲಿ ಇನ್ನೂ ಗಟ್ಟಿಯಾಗಿ ಉಳಿದುಕೊಂಡಿದೆ. ಒತ್ತಡದ ನಡುವೆ ಕೆಲಸ ನಿರ್ವಹಿಸುವ ಪೊಲೀಸ್‌ ಸಿಬ್ಬಂದಿ ಹಕ್ಕುಗಳನ್ನು ರಕ್ಷಿಸಲು ಸಹ ಆಯೋಗ ಚಿಂತನೆ ಮಾಡಬೇಕು ಎಂದರು. 

ನಗರ ಪೊಲೀಸ್‌ ಆಯುಕ್ತ ಡಿ.ಸಿ. ರಾಜಪ್ಪ, ಸಾಧನಾ ಮಾನವ ಹಕ್ಕುಗಳ ಕೇಂದ್ರದ ಸಂಯೋಜಕಿ ಇಸಬೆಲ್ಲಾ ಕ್ಸೇವಿಯರ್‌, ಮಹಿಳಾ ಕಲ್ಯಾಣ ಸಂಸ್ಥೆ ಗೌರವ ಕಾರ್ಯದರ್ಶಿ ವೈಜಯಂತಿ ಚೌಗಲಾ ಉಪಸ್ಥಿತರಿದ್ದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರ್‌.ಕೆ. ದತ್ತಾ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮಹಿಳೆ ಮತ್ತು ಮಕ್ಕಳ ಸುಕ್ಷರಣೆಗಾಗಿ ಸರ್ಕಾರ ಕ್ರಮ ಕೈಗೊಳ್ಳುತ್ತಿದೆ. ಜತೆಗೆ ದೌರ್ಜನ್ಯಕ್ಕೆ ಒಳಗಾಗಿರುವವರಿಗೆ ಎಲ್ಲ ರೀತಿಯ ಸಹಾಯ ಸೌಲಭ್ಯ, ಕಾನೂನು ರಕ್ಷಣೆ ಸೇರಿದಂತೆ ಇನ್ನಿತರ ರಕ್ಷಣಾ ಸೌಲಭ್ಯ ಕಲ್ಪಿಸುತ್ತಿದೆ. ಆದರೆ, ಪೊಲೀಸರು ಮತ್ತು ಇನ್ನಿತರ ಇಲಾಖೆಗಳ ನಡುವಿನ ಸಮನ್ವಯ ಕೊರತೆಯಿಂದ ತನಿಖೆಗಳು ಪೂರ್ಣಗೊಳ್ಳುತ್ತಿಲ್ಲ ಎಂದರು. ಎಸ್ಪಿ ಸುಧೀರಕುಮಾರ ರೆಡ್ಡಿ ಮಾತನಾಡಿ, ಬೆಳಗಾವಿ ಜಿಲ್ಲೆಯಲ್ಲಿ 6590 ದೌರ್ಜನ್ಯ ಪ್ರಕರಣಗಳು ಬಾಕಿ ಉಳಿದಿದ್ದವು. ಇದೀಗ ಅವುಗಳ ಸಂಖ್ಯೆ 2300ಕ್ಕೆ ಇಳಿಕೆಯಾಗಿದೆ. ಶೇ.30 ಪ್ರಕರಣಗಳ ತನಿಖೆ ಪೂರ್ಣಗೊಂಡಿದೆ. ಶೇ.95 ಪ್ರಕರಣಗಳು ಅಂತಿಮ ಹಂತದಲ್ಲಿವೆ ಎಂದರು.

ಟಾಪ್ ನ್ಯೂಸ್

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೆಟ್ಟರ್ ನಾಮಪತ್ರ ಸಲ್ಲಿಕೆ

Nomination: ನಾಮಪತ್ರ ಸಲ್ಲಿಸಿದ ಜಗದೀಶ್ ಶೆಟ್ಟರ್, ಬಿಎಸ್ ವೈ, ಗೋವಾ ಸಿಎಂ ಭಾಗಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

HDK ವಿರುದ್ಧ ರಾಜ್ಯಾದ್ಯಂತ ಮಹಿಳೆಯರಿಂದ ಪ್ರತಿಭಟನೆ: ಡಿಕೆಶಿ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

ಮೋದಿ ಪ್ರಧಾನಿಯಾದರೆ ಪಿಒಕೆ ಭಾರತಕ್ಕೆ: ಜಗದೀಶ ಶೆಟ್ಟರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.