ಗುಣಮಟ್ಟದ ಶಿಕ್ಷಣ ನೀಡಿ: ಜಾರಕಿಹೊಳಿ


Team Udayavani, Oct 7, 2018, 4:12 PM IST

7-october-18.gif

ಮೂಡಲಗಿ: ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ (ಆರ್‌ಎಂಎಸ್‌ಎ) ಯೋಜನೆಯಡಿ ವಲಯದ 151 ಶಾಲಾ ಕೊಠಡಿಗಳ ನಿರ್ಮಾಣಕ್ಕಾಗಿ 12 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ತುಕ್ಕಾನಟ್ಟಿ ಗ್ರಾಮದ ಕೆರಿಸಿದ್ಧೇಶ್ವರ ವನದಲ್ಲಿ ಶನಿವಾರ ನಡೆದ ಗುರುಸ್ಮರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, 2004 ರಿಂದ ಇಲ್ಲಿಯವರೆಗೆ ಒಟ್ಟು 45 ಕೋಟಿ ರೂ. ಅನುದಾನದಲ್ಲಿ ಶಾಲಾ ಕೊಠಡಿಗಳನ್ನು ನಿರ್ಮಾಣಗೊಳಿಸಲಾಗಿದೆ ಎಂದರು.

ಮೂಡಲಗಿ ಶೈಕ್ಷಣಿಕ ವಲಯ ರಾಜ್ಯದಲ್ಲಿಯೇ ಮುಂಚೂಣಿಗೆ ತರಲು ಎಲ್ಲ ರೀತಿಯ ಪ್ರಯತ್ನ ಮಾಡಲಾಗುತ್ತಿದೆ. ಸತತ ಮೂರು ವರ್ಷ ರಾಜ್ಯದಲ್ಲಿಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಪ್ರಥಮ ಸ್ಥಾನ ಪಡೆದಿರುವ ಹೆಗ್ಗಳಿಕೆ ಮೂಡಲಗಿ ವಲಯದ್ದಾಗಿದೆ. ಪ್ರತಿಯೊಬ್ಬರೂ ಸಾಕ್ಷರರನ್ನಾಗಿ ಪರಿವರ್ತಿಸುವ ಮಹತ್ವಾಕಾಂಕ್ಷೆಯಿಂದ ಶಿಕ್ಷಣಕ್ಕೆ ಪ್ರಥಮ ಪ್ರಾಶಸ್ತ್ಯ ನೀಡಲಾಗುತ್ತಿದೆ. ಮೂಡಲಗಿ ವಲಯವನ್ನು ಶೇ.100ರಷ್ಟು ವಿದ್ಯಾವಂತರನ್ನಾಗಿ ರೂಪಿಸುವ ಜವಾಬ್ದಾರಿಯನ್ನು ಶಿಕ್ಷಕರು ನಿರ್ವಹಿಸಿದರೆ ಪ್ರಯತ್ನಕ್ಕೆ ಫಲ ಸಿಕ್ಕಂತಾಗುತ್ತದೆ. ಶೇ ನೂರರಷ್ಟು ಸಾಕ್ಷರತೆಯಲ್ಲಿ ಸಾಧನೆಗೈದರೆ ಮಾತ್ರ ನನ್ನ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ ಎಂದರು.

ಮೂಡಲಗಿ ವಲಯದಿಂದ ರಾಜ್ಯಕ್ಕೆ ಎಲ್ಲ ವಿಧದಲ್ಲೂ ಕೊಡುಗೆ ನೀಡಲು ಶಿಕ್ಷಕರು ಪ್ರಾಮಾಣಿಕ ಪ್ರಯತ್ನ ನಡೆಸಬೇಕು. ಪ್ರತಿಯೊಬ್ಬರೂ ವಿದ್ಯಾವಂತರಾದರೆ ಮಾತ್ರ ಸಮಾಜ ಸುಧಾರಿಸಲು ಸಾಧ್ಯವಿದೆ. ಅದರಲ್ಲೂ ಶಿಕ್ಷಣದಿಂದ ಹಿಂದುಳಿದಿರುವ ತುಕ್ಕಾನಟ್ಟಿ ಜಿಪಂ ಕ್ಷೇತ್ರವನ್ನು ಸಂಪೂರ್ಣ ಸಾಕ್ಷರರನ್ನಾಗಿ ಮಾಡುವ ಸಂಕಲ್ಪ ಮಾಡಿದೆ ಎಂದರು.

2004ರಿಂದ ಇಲ್ಲಿಯವರೆಗೆ ಒಟ್ಟು 22 ಹೊಸ ಸರ್ಕಾರಿ ಪ್ರೌಢ ಶಾಲೆಗಳನ್ನು ಆರಂಭಿಸಲಾಗಿದೆ. ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿಯೇ ಅತ್ಯಧಿಕ ಸರ್ಕಾರಿ ಪ್ರೌಢ ಶಾಲೆ ಹೊಂದಿರುವ ವಲಯ ನಮ್ಮದಾಗಿದೆ. ಇದರ ಜೊತೆಗೆ ಒಟ್ಟು 9 ವಸತಿ ಶಾಲೆಗಳು ಹಾಗೂ ಒಂದು ವಸತಿ ರಹಿತ ಶಾಲೆಯನ್ನು ಮಂಜೂರು ಮಾಡಿಸಲಾಗಿದೆ. ಸರ್ಕಾರಿ ಶಾಲೆಗಳಲ್ಲಿಯೂ ಉತ್ತಮ ಗುಣಮಟ್ಟದ ಶಿಕ್ಷಣ ದೊರೆಯುತ್ತಿರುವುದರಿಂದ 50 ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವುದು ಹೆಮ್ಮೆಯಾಗಿದೆ. ಕೌಜಲಗಿ, ಬಳ್ಳೋಬಾಳ ಹಾಗೂ ಹಳ್ಳೂರ ಗ್ರಾಮಗಳಲ್ಲಿ ಹೊಸ ಪಿಯುಸಿ ಕಾಲೇಜು ಆರಂಭಿಸಲಾಗಿದೆ ಎಂದರು.

ನಿವೃತ್ತ ಶಿಕ್ಷಕರು, ಸಾಧಕ ಶಿಕ್ಷಕರು-ವಿದ್ಯಾರ್ಥಿಗಳಿಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇದೇ ಸಂದರ್ಭದಲ್ಲಿ ಸತ್ಕರಿಸಿ, ಗೌರವಿಸಿದರು. ತುಕ್ಕಾನಟ್ಟಿಯ ಶಾಂತಾನಂದ ಭಾರತಿ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಚಿಕ್ಕೋಡಿ ಉಪನಿರ್ದೇಶಕರ ಕಚೇರಿಯ ಇಒ ಅಜಿತ್‌ ಮನ್ನಿಕೇರಿ ಮಾತನಾಡಿದರು.

ಮುಖ್ಯ ಅತಿಥಿಗಳಾಗಿ ಬಿಡಿಸಿಸಿ ಬ್ಯಾಂಕ್‌ ಉಪಾಧ್ಯಕ್ಷ ಸುಭಾಶ ಢವಳೇಶ್ವರ, ಜಿಪಂ ಮಾಜಿ ಅಧ್ಯಕ್ಷ ಬಸಗೌಡ ಪಾಟೀಲ, ತಾಪಂ ಅಧ್ಯಕ್ಷೆ ಸುನಂದಾ ಕರದೇಸಾಯಿ, ಉಪಾಧ್ಯಕ್ಷ ಯಲ್ಲಪ್ಪ ನಾಯಿಕ, ಜಿಪಂ ಸದಸ್ಯ ಗೋವಿಂದ ಕೊಪ್ಪದ, ತುಕ್ಕಾನಟ್ಟಿ ಗ್ರಾಪಂ ಅಧ್ಯಕ್ಷೆ ಪಾರ್ವತಿ ನಾವಿ, ತಾಪಂ ಸದಸ್ಯ ಪರಶುರಾಮ ಗದಾಡಿ, ಸಿದ್ದಪ್ಪ ಹಮ್ಮನವರ, ಸುಲೋಚನಾ ಶಿವಪ್ಪ ಮರ್ದಿ, ಪ್ರಕಾಶ ಬಾಗೇವಾಡಿ, ಭರಮಪ್ಪ ಉಪ್ಪಾರ, ಭೀಮಶಿ ಗದಾಡಿ, ಯಲ್ಲವ್ವ ಅಂಬಲಿ, ಶೋಭಾ ಬಬಲಿ, ಅಶೋಕ ಖಂಡ್ರಟ್ಟಿ, ನೀಲಕಂಠ ಕಪ್ಪಲಗುದ್ದಿ, ಶಂಕರ ಬಿಲಕುಂದಿ, ಪರಮೇಶ್ವರ ಹೊಸಮನಿ, ವಿಠ್ಠಲ ಸವದತ್ತಿ, ಸುಧೀರ ಜೋಡಟ್ಟಿ, ಭೀಮಶಿ ಮಗದುಮ್ಮ, ಬಸವಂತ ಕಮತಿ, ರಾಮಣ್ಣಾ ಹುಕ್ಕೇರಿ ಸೇರಿದಂತೆ ಅನೇಕರು ಇದ್ದರು. ಬಿಇಒ ಎ.ಸಿ. ಗಂಗಾಧರ ಸ್ವಾಗತಿಸಿದರು.

ಟಾಪ್ ನ್ಯೂಸ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.