ಬಾಳೆ ಬಗಸಿ ಬಿಟ್ಟ್  ಕಾಯೂದಾಗೇತ್ರೀ


Team Udayavani, Oct 13, 2018, 4:16 PM IST

13-october-19.gif

ರಾಮದುರ್ಗ: ಮನ್ಯಾನ್‌ ಕೆಲಸ್‌ ಬಿಟ್‌ ಉತಾರ್‌ ಸಲುವಾಗಿ ಕಾದ್‌ ನಿಂದ್ರುದಾಗೇತ್ರಿ.. ಹೊತ್ತ್ ಏರಿದ್‌ ಕೂಡಲೆ ಬಂದ್‌ ನಿಂತಾಗ ಮಾತ್ರ ಉತಾರ ಸಿಗತಾವ್ರಿ. ಅದೇನ್‌ ನೆಟ್ಟ್ ಅಂತರಿ ಅದ ಹೋತಂದ್ರ್ ಉತಾರ್‌ ಸಿಗಂಗಿಲ್ರೀ.ಬಾಳೆ ಬಗಸಿ ಬಿಟ್ಟ್ ಸಂಜಿತನಕಾ ನಿಂತ ಹೊತ್‌ ಕಳೆಯೋದಾಗೈತ್ರೀ.

ಇದು ತಾಲೂಕಿನಲ್ಲಿ ಪಹಣಿ ಪತ್ರ ಪಡೆಯಲು ಬರುವ ರೈತರ ಗೋಳು. ರಾಜ್ಯ ಸರಕಾರದ ಸಾಲ ಮನ್ನಾ ವಿಚಾರವಾಗಿ ಸಾಲಗಾರರ ವಿವಿಧ ದಾಖಲಾತಿ ಕೇಳಿದ ಹಿನ್ನೆಲೆಯಲ್ಲಿ ಸಾಲ ಪಡೆದ ಹಾಗೂ ವಿವಿಧ ಸೌಲಭ್ಯಗಳಿಗಾಗಿ ಬೇಕಾದ ಪಹಣಿ ಪಡೆಯಲು ರೈತರು ಇಲ್ಲಿನ ತಹಶೀಲ್ದಾರ್‌ ಕಚೇರಿಯಲ್ಲಿ ಬೆಳಗ್ಗೆಯಿಂದ ಸಂಜೆಯವರೆಗೂ ಸರದಿಯಲ್ಲಿ ನಿಂತು ಪಡೆಯಬೇಕಾದ ಪರಸ್ಥಿತಿ ಇದೆ. 

ದೂರದ ಊರಿನಿಂದ ಬರುವ ಗ್ರಾಮಸ್ಥರು ಕೆಲಸ ಕಾರ್ಯ ಬಿಟ್ಟು ದಿನವಿಡೀ ಕಾಯುವ ಸ್ಥಿತಿ ಒಂದೆಡೆಯಾದರೆ. ತಾಂತ್ರಿಕ ಸಮಸ್ಯೆಗಳೇನಾದರೂ ಎದುರಾದರೆ ಉತಾರ ಇಲ್ಲದೇ ಊರಿಗೆ ಹೋಗಬೇಕಾದ ಪರಿಸ್ಥಿತಿ ಇದೆ ಎನ್ನುವುದು ಪಹಣಿ ಪತ್ರಕ್ಕಾಗಿ ಕಾದು ನಿಂತ ಅಸಹಾಯಕ ವೃದ್ಧರ ದೂರು.

ಬೆಳೆ ವಿಮೆ, ಸಾಲ ಪಡೆಯಲು ಸೇರಿದಂತೆ ಇನ್ನಿತರ ಸೌಲಭ್ಯಕ್ಕಾಗಿ ಪಹಣಿ ಪತ್ರ ಅವಶ್ಯಕ. ಒಂದು ಪಹಣಿ ಪತ್ರ ಪಡೆಯಲು ದಿನವಿಡಿ ಕೆಲಸ ಬಿಟ್ಟು ಹೋಬಳಿ ಅಥವಾ ತಾಲೂಕು ಕಚೇರಿಗೆ ಬರಬೇಕಾದ ಪರಸ್ಥಿತಿ ಇದೆ. ಖಾಸಗಿ ಕಂಪ್ಯೂಟರ್‌ ಕೇಂದ್ರಗಳಲ್ಲಿ ಪಡೆಯಲು ಅವಕಾಶವಿದ್ದರೂ ಅಲ್ಲಿ 20-30 ರೂ. ಶುಲ್ಕ ಪಡೆಯುತ್ತಾರೆ. ಹೀಗಾಗಿ ಅನಿವಾರ್ಯವಾಗಿ ತಾಲೂಕು ಕಚೇರಿಯಲ್ಲಿಯೇ ಪಡೆಯಬೇಕಾಗಿದೆ ಎನ್ನುವುದು ಸಾಕಷ್ಟು ರೈತರ ಅಳಲು.

ತಹಶೀಲ್ದಾರ್‌ ಕಚೇರಿಯಲ್ಲಿ ಪಹಣಿ ಪತ್ರ ನೀಡುವ ಸಿಬ್ಬಂದಿ ಬೆಳಗ್ಗೆ 10ರಿಂದ ರಾತ್ರಿ 10 ಗಂಟೆಯವರೆಗೆ ಕಾರ್ಯ ನಿರ್ವಹಿಸಿದರೂ ಪಹಣಿ ಪತ್ರ ಪಡೆಯುವ ರೈತರ ಸಂಖ್ಯೆ ಮಾತ್ರ ಕಡಿಮೆ ಯಾಗುತ್ತಿಲ್ಲ. ಈ ಕಾರಣದಿಂದಾಗಿ ಗ್ರಾಪಂ ಮಟ್ಟದಲ್ಲಿ ಪಹಣಿ ನೀಡಲು ಅವಕಾಶಗಳಿದ್ದರೂ ಅದನ್ನು ಬಳಸಿಕೊಳ್ಳದಿರುವ ಕಾರಣ ರೈತರು ತೊಂದರೆ ಪಡಬೇಕಾಗಿದೆ ಎನ್ನುವುದು ಕಂದಾಯ ಇಲಾಖೆಯ ಅಧಿಕಾರಿಗಳ ಅಸಮಾಧಾನ.

ಸರಕಾರದವರು ಯಾವುದೇ ಯೋಜನೆ ತಂದರೂ ಅದಕ್ಕೆ ನೂರೆಂಟು ಮಾಹಿತಿ ಕೇಳುತ್ತಾರೆ. ಅವುಗಳನ್ನು ಪಡೆಯಬೇಕಾದರೆ ವಾರಗಟ್ಟಲೇ ಅಲೆದಾಡಬೇಕು. ಅಗತ್ಯ ದಾಖಲೆಗಳನ್ನು ಗ್ರಾಪಂ ಮಟ್ಟದಲ್ಲಿ ನೀಡುವ ವ್ಯವಸ್ಥೆಯಾದರೆ ಒಂದು ದಿನದಲ್ಲಿ ಕೆಲಸ ಮುಗಿಯುತ್ತದೆ. ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ತೋಡಿಕೊಂಡರು ಅದನ್ನು ಪರಿಹರಿಸುವಲ್ಲಿ ಅಧಿಕಾರಿಗಳು ಹಾಗೂ ಸರಕಾರ ಮುಂದಾಗದೆ ಇರುವುದು ಬೇಸರ ತರಿಸಿದೆ ಎಂದು ತಾಲೂಕಿನ ದಾಡಿಬಾಂವಿ ಗ್ರಾಮದ ರೈತ ಹನಮಂತ ಜೋಗೆಲ್ಲಪ್ಪನವರ ಬೇಸರ ವ್ಯಕ್ತಪಡಿಸುತ್ತಾರೆ.

ಸರಕಾರದ ಒಂದು ಯೋಜನೆಯ ಸೌಲಭ್ಯ ಪಡೆಯಬೇಕಾದರೆ ರೈತರು ಅಗತ್ಯ ದಾಖಲೆಗಳನ್ನು ನೀಡಬೇಕು. ಆ ದಾಖಲೆಗಳನ್ನು ಪಡೆಯಲು ಒಂದು ವಾರ ಕೆಲಸ ಬಿಟ್ಟು ಅಲೆಯಬೇಕು. ಒಟ್ಟಾರೆ ಲೆಕ್ಕ ಹಾಕಿದರೆ ಸೌಲಭ್ಯದಿಂದ ಸಿಗುವ ಅರ್ಧದಷ್ಟು ಹಣವನ್ನು ಖರ್ಚು ಮಾಡುವ ಪರಸ್ಥಿತಿ ಇದೆ. ರೈತರ ಅಲೆದಾಟ ತಪ್ಪಬೇಕೆಂದರೆ ಗ್ರಾಪಂ ಮಟ್ಟದಲ್ಲಿಯೇ ಎಲ್ಲವೂ ದೊರೆಯುಂತಾಗಬೇಕು.
. ಜಗದೀಶ ದೇವರಡ್ಡಿ, ತಾಲೂಕಾಧ್ಯಕ್ಷರು,
ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ.

ರೈತರಿಗಾಗುವ ತೊಂದರೆಯನ್ನು ಅರಿತು ಈಗಾಗಲೇ ಗ್ರಾಮ ಪಂಚಾಯ್ತಿಯಲ್ಲಿ ಪಹಣಿ ಪತ್ರಗಳನ್ನು ನೀಡುವಂತೆ ತಾಲೂಕ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ನೀಡಿದ್ದರೂ ಸ್ಪಂದಿಸಿಲ್ಲ. ಎಲ್ಲರೂ ತಾಲೂಕು ಕೇಂದ್ರದಲ್ಲಿ ಪಡೆಯಲು ಆಗಮಿಸುವ ಹಿನ್ನಲೆಯಲ್ಲಿ ಸಮಸ್ಯೆ ಎದುರಾಗಿದೆ. ಸಮಸ್ಯೆ ಕುರಿತು ಮೇಲಧಿ ಕಾರಿಗಳ ಗಮನಕ್ಕೆ ತಂದು ಪರಿಹರಿಸುವ ವ್ಯವಸ್ಥೆ ಮಾಡಲಾಗುವುದು.
.ಆರ್‌.ವಿ. ಕಟ್ಟಿ, ತಹಶೀಲ್ದಾರರು, ರಾಮದುರ್ಗ

„ಈರನಗೌಡ ಪಾಟೀಲ

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

police crime

ಗೋ ಸಾಗಾಟ ತಡೆದು ಹಲ್ಲೆ:7 ಹಿಂದೂ ಕಾರ್ಯಕರ್ತರ ಬಂಧನ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

Belagavi; ಸೋಲಿನ ಭಯದಿಂದ ಮೃಣಾಲ್‌ ಬಾಯಿಗೆ ಬಂದಂಗೆ ಮಾತನಾಡುತ್ತಿದ್ದಾರೆ: ಮಂಗಲಾ ಅಂಗಡಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.