ಕಿತ್ತೂರು-ಕಲ್ಯಾಣ ಕರ್ನಾಟಕಕ್ಕೆ ರೈಲು ಮಾರ್ಗ ಕಲ್ಪಿಸಿ
Team Udayavani, Nov 11, 2018, 4:27 PM IST
ಬೆಳಗಾವಿ: ಕಿತ್ತೂರ ಕಲ್ಯಾಣ ಕರ್ನಾಟಕದ ರೈಲು ಮಾರ್ಗ ಯೋಜನೆಗಳಿಗೆ ಕೇಂದ್ರ ಸರಕಾರದಿಂದ ಅನುಮೋದನೆ ತಂದು ಅವುಗಳ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಲೋಕಸತ್ತಾ ಪಕ್ಷದ ಮುಖಂಡರು ಶನಿವಾರ ಸಂಸದ ಸುರೇಶ ಅಂಗಡಿಗೆ ಮನವಿ ಸಲ್ಲಿಸಿದರು.
ಬೇಡಿಕೆಗೆ ಅನುಗುಣವಾಗಿ ರೈಲು ಮಾರ್ಗಗಳು ಇರದೇ ಇರುವುದರಿಂದ ಉತ್ತರ ಕರ್ನಾಟಕ ಭಾಗ ಅರ್ಥಿಕವಾಗಿ ಹಿಂದುಳಿದಿದೆ. ಅಭಿವೃದ್ಧಿ ಕಾರ್ಯಗಳು ಸಹ ನಿರೀಕ್ಷಿತ ಮಟ್ಟದಲ್ಲಿ ಆಗಿಲ್ಲ. ಹೊಸ ಹೊಸ ರೈಲು ಯೋಜನೆಗಳು ಈ ಭಾಗಕ್ಕೆ ಸಿಗುತ್ತಿಲ್ಲ ಎಂದು ಪಕ್ಷದ ಮುಖಂಡರು ಹೇಳಿದರು.
ಉತ್ತರ ಕರ್ನಾಟಕದಲ್ಲಿ ಈಗ ನಿರ್ಮಾಣ ಹಂತದಲ್ಲಿರುವ ಕುಡಚಿ-ಬಾಗಲಕೋಟೆ ಹಾಗೂ ಗದಗ- ವಾಡಿ ರೈಲು ಮಾರ್ಗಗಳು ಈ ಭಾಗಕ್ಕೆ ತಕ್ಕ ಮಟ್ಟಿಗೆ ಪ್ರಯೋಜನಕಾರಿಯಾದರೂ ಕಿತ್ತೂರು-ಕರ್ನಾಟಕ ( ಉತ್ತರ ಕರ್ನಾಟಕ) ಹಾಗೂ ಕಲ್ಯಾಣ-ಕರ್ನಾಟಕ (ಹೈದರಾಬಾದ್ ಕರ್ನಾಟಕ) ವನ್ನು ಸಮರ್ಪಕವಾಗಿ ಜೋಡಿಸಿ ಉತ್ತರ ಕರ್ನಾಟಕದ ಆರ್ಥಿಕತೆಯನ್ನು ಗಣನೀಯವಾಗಿ ಬಲಪಡಿಸುವ ನಿಟ್ಟಿನಲ್ಲಿ ಪ್ರಯತ್ನಗಳು ಆಗಿಲ್ಲ ಎಂದು ಹೇಳಿದರು.
ಹುಬ್ಬಳ್ಳಿವರೆಗೆ ಸೀಮಿತವಾದ ಬೆಂಗಳೂರು ಸೇರಿದಂತೆ ದಕ್ಷಿಣ ಭಾರತದಿಂದ ಬರುವ ಎಲ್ಲ ರೈಲುಗಳನ್ನು ಬೆಳಗಾವಿಂಯವರೆಗೆ ವಿಸ್ತರಿಸಬೇಕು. ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಬೆಳೆಂಯ ಲಾಗುವ ದ್ರಾಕ್ಷಿ, ನಿಂಬೆ, ದಾಳಿಂಬೆಗಳ ರಫ್ತಿಗೆ ಹೆಚ್ಚಿನ ಅವಕಾಶ ಒದಗಿಸಬೇಕು. ರೈಲ್ವೆ ಇಲಾಖೆಯು ಈ ಜಿಲ್ಲೆಗಳ ರೈಲು ನಿಲ್ದಾಣದ ಬಳಿ ಶೀತಲೀಕರಣ ಘಟಕಗಳ ನಿರ್ಮಾಣ ಮಾಡಬೇಕು ಎಂದು ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಸುರೇಶ ಅಂಗಡಿ, ಕಿತ್ತೂರು ಕಲ್ಯಾಣ ಕರ್ನಾಟಕ ರೈಲು ಮಾರ್ಗಗಳ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಈ ಸಂದರ್ಭದಲ್ಲಿ ಲೋಕಸತ್ತಾ ಪಕ್ಷದ ಕರ್ನಾಟಕ ಘಟಕದ ಕಾರ್ಯದರ್ಶಿ ರವಿಕಿರಣ ಕಾಂಬಳೆ, ಸಂತೋಷ ಪಾಟೀಲ, ಎಂ ಸಾಖರೆ, ನಿಂಗಪ್ಪ ಕಾಂಬಳೆ, ಸುಶಾಂತ ಪಾಟೀಲ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
MUST WATCH
ಹೊಸ ಸೇರ್ಪಡೆ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್