ಸೇತುವೆ ಕಾಮಗಾರಿ ಪರಿಶೀಲಿಸಿದ ಸಂಸದ ಹುಕ್ಕೇರಿ


Team Udayavani, Nov 16, 2018, 4:01 PM IST

16-november-16.gif

ಚಿಕ್ಕೋಡಿ: ಗಡಿ ಭಾಗದ ಕರ್ನಾಟಕ-ಮಹಾರಾಷ್ಟ್ರ ಸಂಪರ್ಕ ಕಲ್ಪಿಸುವ ಚೆಂದೂರ-ಸೈನಿಕ ಟಾಕಳಿ ಮಧ್ಯೆ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡುತ್ತಿರುವ ಸೇತುವೆ ಕಾಮಗಾರಿಯನ್ನು ಬರುವ ಮಾರ್ಚ ಅಂತ್ಯದವರಿಗೆ ಮುಕ್ತಾಯ ಮಾಡಬೇಕೆಂದು ಸಂಸದ ಪ್ರಕಾಶ ಹುಕ್ಕೇರಿ ಸಂಬಂಧಿಸಿದ ಗುತ್ತಿಗೆದಾರ ಮತ್ತು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಗಡಿ ಭಾಗದ ಚೆಂದೂರ ಗ್ರಾಮದ ಬಳಿ ಕೃಷ್ಣಾ ನದಿಗೆ ಅಡ್ಡಲಾಗಿ ಕಟ್ಟುತ್ತಿರುವ ಸೇತುವೆ ಕಾಮಗಾರಿಯನ್ನು ಪರಿಶೀಲಿಸಿದ ಅವರು ಸುಮಾರು 19 ಕೋಟಿ ರೂ. ವೆಚ್ಚದಲ್ಲಿ ಕೆಆರ್‌ಡಿಸಿಎಲ್‌ ನಿಂದ ನಿರ್ಮಾಣವಾಗುತ್ತಿರುವ ಈ ಸೇತುವೆ ಕಾಮಗಾರಿ ಅತೀ ವಿಳಂಭವಾಗುತ್ತಿದೆ. ಇದರಿಂದ ಗಡಿ ಭಾಗದ ಜನರಿಗೆ ಅನಾನುಕೂಲವಾಗುತ್ತಿದೆ. ಶೀಘ್ರವಾಗಿ ಕಾಮಗಾರಿ ಮುಕ್ತಾಯ ಮಾಡಬೇಕೆಂದು ಗುತ್ತಿಗೆದಾರ ಜಿ.ವಿ.ನಂಧಾ ಅವರಿಗೆ ಸೂಚನೆ ನೀಡಿದರು.

ಸೇತುವೆ ಮುಂಭಾಗದಲ್ಲಿ ರಸ್ತೆ ಮಾಡಲು ರೈತರ ಜಮೀನುಗಳನ್ನು ಸ್ವಾದೀನ ಪಡಿಸಿಕೊಳ್ಳಲಾಗಿದೆ. ಕೆಲವೊಬ್ಬ ರೈತರಿಗೆ ಪರಿಹಾರ ಸಿಗದೇ ಇರುವದರಿಂದ ತಕಾರಾರು ಮಾಡಿದ್ದರು. ಆದರೆ ಈ ಹಿಂದಿನ ಜಿಲ್ಲಾಧಿಕಾರಿ ಎನ್‌. ಜಯರಾಮ್‌ ಅವರು ಎಲ್ಲ ರೈತರಿಗೆ ಯೋಗ್ಯ ದರದಲ್ಲಿ ಪರಿಹಾರ ನೀಡುವ ಮೂಲಕ ರೈತರ ಸಮಸ್ಯೆ ಬಗೆ ಹರಿಸಿದ್ದಾರೆ. ಗುತ್ತಿಗೆದಾರರು ಯಾವುದೇ ಕುಂಟು ನೆಪ ಹೇಳದೆ ಕಾಮಗಾರಿ ಮುಕ್ತಾಯ ಮಾಡಬೇಕು ಎಂದರು.

ನದಿಯಲ್ಲಿ ಅಪಾರ ಪ್ರಮಾಣದ ನೀರು ಇರುವುದರಿಂದ ಕಾಮಗಾರಿ ವಿಳಂಭವಾಗುತ್ತಿದೆ. ಈಗಾಗಲೇ ಸೇತುವೆ ಎಲ್ಲ ಕಾಲಂಗಳನ್ನು ಹಾಕಲಾಗಿದೆ. ನೀರು ಹೆಚ್ಚಿಗೆ ಇರುವದರಿಂದ ಕಾಮಗಾರಿ ಕೈಗೆತ್ತಿಕೊಳ್ಳಲು ಸಾಧ್ಯವಾಗುತ್ತಿಲ್ಲ, ಮತ್ತು ಮರಳಿನ ಕೊರತೆ ಇರುವದರಿಂದ ಕಾಮಗಾರಿ ನೆನೆಗುದಿಗೆ ಕಾರಣವಾಗಿದೆಂದು ಗುತ್ತಿಗೆದಾರ ನಂದಾ ಅವರು ಸಂಸದರಿಗೆ ಸ್ಪಷ್ಟನೆ ನೀಡಿದರು. ಕೂಡಲೇ ಸಂಸದ ಪ್ರಕಾಶ ಹುಕ್ಕೇರಿ ಅವರು ಕೆಆರ್‌ಡಿಸಿಎಲ್‌ ಎಚಿಡಿ ಅವರಿಗೆ ದೂರವಾಣಿ ಕರೆ ಮಾಡಿ ಸೇತುವೆ ಕಾಮಗಾರಿ ವಿಳಂಭದ ಕುರಿತು ಸ್ಥಳಕ್ಕೆ ಬಂದು ಸ್ಪಷ್ಟನೆ ನೀಡಬೇಕು. ಇಲ್ಲವಾದರೆ ಶೀಘ್ರ ಕಾಮಗಾರಿ ಮುಕ್ತಾಯ ಮಾಡಬೇಕೆಂದು ತರಾಟೆಗೆ ತೆಗೆದುಕೊಂಡರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.