ಶಿಥಿಲಗೊಂಡ ಶಾಲಾ ಕಟ್ಟಡ ನೆಲಸಮಕ್ಕೆ ಆದೇಶ 


Team Udayavani, Nov 21, 2018, 5:19 PM IST

21-november-23.gif

ಧಾರವಾಡ: ವಿದ್ಯಾರ್ಥಿಗಳ ಪ್ರಾಣ ರಕ್ಷಣೆಯ ಮುನ್ನೆಚ್ಚರಿಕೆಯ ಕ್ರಮವಾಗಿ ಶಿಥಿಲಗೊಂಡ ಶಾಲಾ ಕಟ್ಟಡಗಳನ್ನು ನೆಲಸಮಗೊಳಿಸಿ ಹೊಸ ಕಟ್ಟಡ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವ ನಿಟ್ಟಿನಲ್ಲಿ ಎಲ್ಲ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿ(ಬಿಇಒ) ಅವರು ಅಗತ್ಯ ಕ್ರಮ ಕೈಕೊಳ್ಳಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಅಪರ ಆಯುಕ್ತ ಮೇಜರ್‌ ಸಿದ್ದಲಿಂಗಯ್ಯ ಹಿರೇಮಠ ಆದೇಶಿಸಿದರು.

ಕವಿವಿ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಭಾಭವನದಲ್ಲಿ ಮಂಗಳವಾರ ಜರುಗಿದ ಬೆಳಗಾವಿ ವಿಭಾಗ ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು. ಶಿಕ್ಷಣ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗಳು ಈಗಾಗಲೇ ಲೋಕೋಪಯೋಗಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು, ಶಿಥಿಲಗೊಂಡ ಶಾಲಾ ಕಟ್ಟಡಗಳನ್ನು ತಕ್ಷಣ ನೆಲಸಮಗೊಳಿಸಿ ಅಲ್ಲಿ ಹೊಸ ಕಟ್ಟಡಗಳ ನಿರ್ಮಾಣಕ್ಕೆ ಮುಂದಾಗುವಂತೆ ಸೂಚಿಸಿದ್ದಾರೆ. ಹಾಗಾಗಿ ಅಧಿ ಕಾರಿಗಳು ಶಾಲಾ ಕಟ್ಟಡಗಳ ರಕ್ಷಣಾತ್ಮಕ ಸರ್ವೇ ನಡೆಸಿ ಪೂರಕ ಕ್ರಮ ಕೈಕೊಳ್ಳಬೇಕೆಂದು ಸೂಚಿಸಿದರು.

ರಾಜ್ಯ ಸಮಗ್ರ ಶಿಕ್ಷಣ ಅಭಿಯಾನ ಗುಣಮಟ್ಟ ನಿರ್ದೇಶಕ ನಾಗೇಂದ್ರ ಮಧ್ಯಸ್ಥ ಮಾತನಾಡಿ, ಎಲ್ಲ ಸರಕಾರಿ ಶಾಲೆಗಳಲ್ಲಿ ಎಸ್‌ ಡಿಎಂಸಿ ರಚನೆಯಾಗುವಂತೆ ಕ್ರಮ ಕೈಕೊಂಡು ವರದಿ ಸಲ್ಲಿಸಬೇಕು. 2019ರ ಜನವರಿ ಮತ್ತು ಫೆಬ್ರವರಿಯಲ್ಲಿ ಎಸ್‌ಡಿಎಂಸಿ ಸದಸ್ಯರಿಗೆ ತರಬೇತಿ ನೀಡಲಾಗುವುದು. ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಸುಧಾರಣೆಗೆ ವಿದ್ಯಾರ್ಥಿಗಳ ಕಲಿಕಾ ಗುಣಮಟ್ಟ ವೃದ್ಧಿಸಲು ಎಲ್ಲೆಡೆ ವ್ಯಾಪಕ ಚಿಂತನೆ ನಡೆಯಬೇಕು ಎಂದರು.

ಸಿಸ್ಲೆಪ್‌-ಕರ್ನಾಟಕ ಸಂಸ್ಥೆ ನಿರ್ದೇಶಕ ಬಿ.ಎಸ್‌. ರಘುವೀರ, ಇಲಾಖೆಯ ಜಂಟಿ ನಿರ್ದೇಶಕ ಡಾ| ಬಿ.ಕೆ.ಎಸ್‌. ವರ್ಧನ್‌, ಬೆಳಗಾವಿ ಸಿಟಿಇ ಪ್ರಿನ್ಸಿಪಾಲ್‌ ಮಮತಾ ನಾಯಕ, ಜಮಖಂಡಿ ಸಿಟಿಇ ಪ್ರಿನ್ಸಿಪಾಲ್‌ ರಾಜು ನಾಯಕ, ವಿಜಯಪುರ, ಬಾಗಲಕೋಟೆ, ಉತ್ತರಕನ್ನಡ, ಗದಗ, ಧಾರವಾಡ, ಹಾವೇರಿ, ಬೆಳಗಾವಿ, ಚಿಕ್ಕೋಡಿ ಹಾಗೂ ಶಿರಸಿ ಶೈಕ್ಷಣಿಕ ಜಿಲ್ಲೆಗಳ ಎಲ್ಲ ಆಡಳಿತ ಹಾಗೂ ಅಭಿವೃದ್ಧಿ ಉಪ ನಿರ್ದೇಶಕರು, 59 ಜನ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಸಮಗ್ರ ಶಿಕ್ಷಣ ಅಭಿಯಾನ ಅಧಿಕಾರಿಗಳು ಹಾಜರಿದ್ದರು.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

increase-in-number-of-crime-cases-after-congress-came-minister-joshi

Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.