ಎಲ್ಲ ಕ್ಷೇತ್ರಗಳಲ್ಲೂ ಚಾಣಕ್ಯರ ಸಂಖ್ಯೆ ಹೆಚ್ಚಳ: ಶಾಸಕ ಜಾರಕಿಹೊಳಿ


Team Udayavani, Nov 22, 2018, 4:51 PM IST

22-november-21.gif

ಬೆಳಗಾವಿ: ಸಮಾಜದಲ್ಲಿ ಎಲ್ಲ ಕ್ಷೇತ್ರಗಳಲ್ಲೂ ಚಾಣಕ್ಯರಿದ್ದಾರೆ. ತಮ್ಮ ಸ್ಥಾನ ಭದ್ರಪಡಿಸಿಕೊಳ್ಳಲು ಇಂದಿನ ಯುಗದಲ್ಲಿ ಸಾವಿರಾರೂ ಚಾಣಕ್ಯರನ್ನು ನಾವು ಕಾಣಬಹುದಾಗಿದೆ ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ನಗರದ ಜೆಎನ್‌ಎಂಸಿಯ ಡಾ| ಎಚ್‌.ಬಿ. ರಾಜಶೇಖರ ಕನ್ವೆನ್ಶನ್‌ ಹಾಲ್‌ನಲ್ಲಿ ಬುಧವಾರ ಸಿದ್ಧಾರ್ಥ ವಾಡೆನ್ನವರ ಅವರ ಪೀಪಲ್ಸ್‌ ಚಾಣಕ್ಯ ಪುಸ್ತಕ ಬಿಡುಗಡೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಕಾಲಮಾನದಲ್ಲಿ ಎಲ್ಲರೂ ಅವರವರಿಗೆ ಚಾಣಕ್ಯರೇ. ರಾಜಕಾರಣದಲ್ಲಿ ಶಾಸಕರು ತಮ್ಮ ಆಡಳಿತ ನಡೆಸಲು, ಅಧಿಕಾರಿಗಳು ಖುರ್ಚಿ ಉಳಿಸಿಕೊಳ್ಳಲು, ಪತ್ರಕರ್ತರರು ತಮ್ಮ ಬುದ್ಧಿ ಮತ್ತೆಯಿಂದ ಚಾಣಕ್ಯ ನೀತಿ ಅನುಸರಿಸುತ್ತಾರೆ. ಚಾಣಕ್ಯರಾಗದಿದ್ದರೆ ಬದುಕಲು ಆಗುವುದಿಲ್ಲ ಎಂದರು.

ಸಾಧನೆ ಯಾವಾಗಲೂ ನಿಂತ ನೀರಾಗಬಾರದು. ಅವಕಾಶ ಸಿಕ್ಕಾಗ ಸಾಧನೆ ಮಾಡುವಂತಾಗಬೇಕು. ಮಾಲೀಕರಿಲ್ಲದೇ ನಡೆಯುತ್ತಿರುವ ದೇಶದ ಏಕೈಕ ಸಕ್ಕರೆ ಕಾರ್ಖಾನೆ ನಮ್ಮದಾಗಿದೆ. ಸ್ವತಂತ್ರವಾಗಿ ನಿರ್ಧಾರ ನಮ್ಮ ಕಾರ್ಖಾನೆಯಲ್ಲಿ ಕೆಲಸ ನಿರ್ವಹಿಸುವವರೇ ತೆಗೆಳುತ್ತಾರೆ. ಜತೆಗೆ ಶೈಕ್ಷಣಿಕ ಹಾಗೂ ಕ್ರೀಡೆಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, 22 ಅನಾಥಾಶ್ರಮಗಳಿಗೆ ಊಟ, ಬಟ್ಟೆ, ಔಷಧೋಪಚಾರ ನೀಡಿ ಸಮಾಜಮುಖೀ ಕೆಲಸ ಮಾಡಲಾಗುತ್ತಿದೆ.

ಇದು ಕೂಡ ಒಂದು ಸಾಧನೆಯಾಗಿದೆ. ಕಲ್ಯಾಣ ರಾಜ್ಯದ ಕನಸು ನನಸು ಮಾಡಲು ಅನೇಕ ಹೋರಾಟ ನಡೆಸಲಾಗುತ್ತಿದೆ. ನಮಗೆ ಸಿಕ್ಕ ಲಾಭದಲ್ಲಿ ಕೋಟ್ಯಂತರ ರೂ. ಸಮಾಜಕ್ಕೆ ಪೇ ಬ್ಯಾಕ್‌ ಮಾಡುತ್ತಿದ್ದೇವೆ ಎಂದರು. ಸಂಪಾದಕ ವಿಶ್ವೇಶ್ವರ ಭಟ್‌ ಮಾತನಾಡಿ, ಭೂಮಿ ಮೇಲೆ ಎಲ್ಲವನ್ನೂ ನಾಶ ಮಾಡಲು ಸಾಧ್ಯವಿದೆ. ಆದರೆ ಅಕ್ಷರವನ್ನು ಎಂದಿಗೂ ನಾಶ ಮಾಡಲು ಆಗುವುದಿಲ್ಲ. ಮಾನವ ಜನ್ಮ ಇರೋವರೆಗೂ ಅಕ್ಷರ ಅನರ್ಘ್ಯ ರತ್ನ. ಸಾಧನೆ ನಿರಂತರವಾಗಿ ಇರಬೇಕು. ಪ್ರತಿ ದಿನವೂ ಯಶಸ್ಸು ಸಾಧಿಸುವಂತಾಗಬೇಕು. ಅದಕ್ಕೆ ಪರಿಸರ, ಅಧ್ಯಯನ ಅಡ್ಡಿ ಆಗಬಾರದು. ಕುಗ್ರಾಮದಲ್ಲಿ ಇದ್ದರೂ ಸಾಧನೆ ಮಾಡಬಹುದು. ನಮ್ಮ ಸಾಧನೆಯೇ ಮಾತನಾಡಲು ಆರಂಭಿಸುತ್ತದೆ ಎಂದರು.

ಕೆಪಿಸಿಸಿ ವಕ್ತಾರ ಎಂ. ನಾಗರಾಜ ಯಾದವ ಮಾತನಾಡಿ, ಕವಲು ದಾರಿಯಲ್ಲಿರುವ ರಾಜಕಾರಣಿಗಳಲ್ಲಿ ನಾಯಕತ್ವ ಗುಣ ಬೆಳೆಸಲು ಈ ಪುಸ್ತಕ ಅವಶ್ಯವಿದೆ. ಯಾವ ಕಾರಣಕ್ಕೆ, ಯಾವ ಉದ್ದೇಶಕ್ಕೆ ಸಾಧನೆ ಮಾಡಬೇಕು ಎಂಬುದರ ಬಗ್ಗೆಯೂ ತಿಳಿದುಕೊಳ್ಳಬೇಕು ಎಂದರು.

ಅಬಕಾರಿ ಇಲಾಖೆ ಜಂಟಿ ಆಯುಕ್ತ ವೈ. ಮಂಜುನಾಥ ಮಾತನಾಡಿ, ನಾಯಕತ್ವ ಗುಣ ಉಳಿಸಿಕೊಳ್ಳಲು ಹಾಗೂ ಬೆಳೆಸಿಕೊಳ್ಳಲು ಚಾಣಕ್ಯ ಹೇಳಿರುವ ಅಂಶಗಳನ್ನು ತಿಳಿದುಕೊಳ್ಳಬೇಕಾಗಿದೆ. ಈ ಬಗ್ಗೆ ಪೀಪಲ್ಸ್‌ ಚಾಣಕ್ಯ ಪುಸ್ತಕದಲ್ಲಿ ನಮೂದಿಸಲಾಗಿದೆ ಎಂದು ವಿವಿಧ ದೃಷ್ಟಾಂತಗಳನ್ನು ಹೇಳುವ ಮೂಲಕ ವಿವರಿಸಿದರು.

ನಿರಾಣಿ ಉದ್ಯಮ ಸಮೂಹದ ಕಾರ್ಯನಿರ್ವಾಹಕ ಅಧಿಕಾರಿ ಸಂಗಮೇಶ ನಿರಾಣಿ ಮಾತನಾಡಿ, ಸಕ್ಕರೆ ಕಾರ್ಖಾನೆಗಳ ವಿರುದ್ಧ ರೈತರು ಜೋರಾಗಿ ಹೋರಾಟ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ನಾವೂ ಕಾರ್ಖಾನೆಗಳನ್ನು ಬಂದ್‌ ಮಾಡಿದ್ದೇವೆ. ಕಾರ್ಮಿಕ ವರ್ಗದವರು ಹಾಗೂ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಉದ್ದಿಮೆ ನಡೆಸಲಾಗುತ್ತಿದೆ ಎಂದರು. ನಿವೃತ್ತ ಉಪನ್ಯಾಸಕ ಜಿ.ವಿ. ಮಾಳಗಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಮಲ್ಲಿಕಾರ್ಜುನ ವಂದಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.