ಎಚ್ಐವಿ ಪೀಡಿತರಿಗೆ ಆತ್ಮಸ್ಥೈರ್ಯ ಅಗತ್ಯ
Team Udayavani, Dec 2, 2018, 4:40 PM IST
ಚಿಕ್ಕೋಡಿ: ಎಚ್ಐವಿ ಪೀಡಿತರನ್ನು ಸಮಾಜದಲ್ಲಿ ಸಾಮಾನ್ಯ ಜನರಂತೆ ನೋಡಿದಾಗ ಅವರಲ್ಲಿಯೂ ಆತ್ಮಸ್ಥೈರ್ಯ ಬೆಳೆಯುತ್ತದೆ. ಅವರಿಗೆ ಸಮಾಜದಲ್ಲಿ ಅನುಕಂಪಕ್ಕಿಂತ ಅವಕಾಶ ನೀಡುವುದು ಮುಖ್ಯವಾಗಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ| ವಿ.ವಿ. ಶಿಂಧೆ ಹೇಳಿದರು.
ಶನಿವಾರ ನಗರದಲ್ಲಿ ಪುರಸಭೆ, ಆರೋಗ್ಯ ಇಲಾಖೆ ಹಾಗೂ ಹಲವಾರು ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡ ವಿಶ್ವ ಏಡ್ಸ್ ದಿನಾಚರಣೆ ಅಂಗವಾಗಿ ಹಮ್ಮಿಕೊಂಡ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿ, 10 ವರ್ಷಗಳ ಅಂಕಿ ಅಂಶಗಳನ್ನು ನೋಡಿದಾಗ ಎಚ್ಐವಿ ಸೋಂಕಿನಿಂದ ಬಳಲುವರ ಸಂಖ್ಯೆ ಗಣನೀಯ ಇಳಿಕೆ ಕಂಡಿದೆ. ಆರೋಗ್ಯ ಇಲಾಖೆ ಮತ್ತು ವಿವಿಧ ಸಂಘ ಸಂಸ್ಥೆಗಳ ಜತೆಗೂಡಿ ಜನರಲ್ಲಿ ಬೀದಿ ನಾಟಕ, ಆರೋಗ್ಯ ಶಿಬಿರದ ಮೂಲಕ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತದೆ ಎಂದರು.
ಇದೇ ಸಂದರ್ಭದಲ್ಲಿ ಚಿಕ್ಕೋಡಿ 7ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರಾದ ಮಹಾಂತಪ್ಪ ಎ.ಡಿ. ಅವರು ಹಸಿರು ನಿಶಾನೆ ತೋರಿಸುವ ಮೂಲಕ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಾಗೃತಿ ಜಾಥಾದಲ್ಲಿ ಪಟ್ಟಣದ ಎಲ್ಲ ಶಾಲಾ ಬಾಲಕರು, ಬಾಲಕಿಯರು, ಎನ್ .ಸಿ.ಸಿ ಕೆಡೆಟ್ಗಳು ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು. ಜಾಥಾ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಜನರಲ್ಲಿ ಜಾಗೃತಿ ಮೂಡಿಸಿತು.
ಈ ವೇಳೆ ಪುರಸಭೆ ಮುಖ್ಯಾಧಿಕಾರಿ ಪಿ.ಬಿ. ದೇವಮಾನೆ, ಪಿಎಸ್ಐ ಸಂಗಮೇಶ ಹೊಸಮನಿ, ಡಾ| ವಿವೇಕ ಹೊನ್ನಳ್ಳಿ, ಡಾ|ಲಕ್ಷ್ಮೀಕಾಂತ ಕಡ್ಲೇಪಗೋಳ, ಶ್ರೀನಿವಾಸ ನಾಯಿಕ, ಸಂಜು ಕುಲಕರ್ಣಿ, ಸಿಟಿಇ ಸಂಸ್ಥೆಯ ಕಾರ್ಯದರ್ಶಿ ಎಸ್.ಜಿ. ಜಹಾಗೀರದಾರ ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್
ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್ ಸಿಟಿ ಅಧಿಕಾರಿ ಶ್ರೀನಿವಾಸ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್