ಸುವರ್ಣಸೌಧ ಪಕ್ಕದಲ್ಲೇ ಹಾಹಾಕಾರ!
Team Udayavani, Dec 17, 2018, 4:46 PM IST
ಬೆಳಗಾವಿ: ಉತ್ತರ ಕರ್ನಾಟಕದ ಅಭಿವೃದ್ಧಿ ದೃಷ್ಟಿಯಿಂದ ಸುವರ್ಣ ವಿಧಾನಸೌಧದಲ್ಲಿ ಚಳಗಾಲ ಅಧಿವೇಶನ ನಡೆಯುತ್ತಿದ್ದರೆ, ಅದರ ಕೂಗಳತೆಯಲ್ಲಿರುವ ಬಸ್ತವಾಡ ಹಾಗೂ ಹಲಗಾ ಗ್ರಾಮಗಳಲ್ಲಿ ಕುಡಿಯುವ ನೀರಿನ ಹಾಹಾಕಾರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹಿಡಕಲ್ ಜಲಾಶಯದಿಂದ ಸುವರ್ಣಸೌಧಕ್ಕೆ ಅಳವಡಿಸಿರುವ ನೀರಿನ ಪೈಪ್ ಲೈನ್ನ್ನು ಹಲಗಾ ಹಾಗೂ ಬಸ್ತವಾಡ ಗ್ರಾಮಕ್ಕೆ ಅಳವಡಿಸುವಂತೆ ಇಲ್ಲಿನ ಗ್ರಾಮಸ್ಥರು ಅನೇಕ ಬಾರಿ ಮನವಿ ಸಲ್ಲಿಸಿದರೂ ಯಾವುದೇ ರೀತಿ ಪ್ರಯೋಜನವಾಗಿಲ್ಲ. ಎರಡು ದಿನಕೊಮ್ಮೆ ಬರುವ ನೀರು ಇಲ್ಲಿನ ಜನರಿಗೆ ಸಾಕಾಗುತ್ತಿಲ್ಲ.
ಅಲ್ಲದೇ ಇಲ್ಲಿನ ಗ್ರಾಮಸ್ಥರು ಪರ್ಯಾಯವಾಗಿ ನಿತ್ಯ ತಮ್ಮ ಜಮೀನುಗಳಿಗೆ ತೆರಳಿ ಬಾವಿಗಳಿಂದ ನೀರನ್ನು ಸೈಕಲ್ ಮೂಲಕ ತರುವ ಪರಿಸ್ಥಿತಿ ಎದುರಾಗಿದೆ. ಹಲಗಾ ಹಾಗೂ ಬಸ್ತವಾಡ ಗ್ರಾಮಗಳಲ್ಲಿ ಒಂದು ಓಣಿಯಲ್ಲಿ ರಸ್ತೆಯಾದರೆ ಇನ್ನೊಂದೆಡೆ ರಸ್ತೆ ಕಾಮಗಾರಿ ನಡೆದಿಲ್ಲ. ದ್ವಿಚಕ್ರ ವಾಹನ ಸವಾರರು ಹಾಗೂ ರೈತರು ನಿತ್ಯ ಹದಗೆಟ್ಟ ರಸ್ತೆಯಲ್ಲಿ ಸಂಚರಿಸುವ ಪರಿಸ್ಥಿತಿ ಎದುರಾಗಿದೆ.
ಹಿಡಕಲ್ದಿಂದ ಸುವರ್ಣವಿಧಾನ ಸೌಧಕ್ಕೆ ಅಳವಡಿಸಿದ ನೀರಿನ ಪೈಪ್ಲೈನ್ ಹಲಗಾ ಹಾಗೂ ಬಸ್ತವಾಡ ಗ್ರಾಮಕ್ಕೆ ಅಳವಡಿಸುವಂತೆ ಈ ಅಧಿವೇಶದಲ್ಲಿ ಚರ್ಚಿಸಲಾಗುವುದು.
. ಲಕ್ಷ್ಮೀ ಹೆಬ್ಟಾಳಕರ, ಬೆಳಗಾವಿ ಗ್ರಾಮೀಣ ಶಾಸಕಿ
ಹಲಗಾ ಗ್ರಾಮದಲ್ಲಿ ಎರಡು ದಿನಕ್ಕೊಮ್ಮೆ ನೀರು ಪೂರೈಸಲಾಗುತ್ತಿದೆ. ಇದರಿಂದ ನಿತ್ಯ ಇಲ್ಲಿನ ಗ್ರಾಮಸ್ಥರಿಗೆ ಸಮಸ್ಯೆಯಾಗುತ್ತಿದೆ. ಹಿಡಕಲ್ ಡ್ಯಾಂನಿಂದ ಸುವರ್ಣ ವಿಧಾನಸೌಧಕ್ಕೆ ನೀರಿನ ಪೈಪ್ಲೈನ್ ಮಾಡಲಾಗಿದೆ. ಆದೇ ಪೈಪ್ಲೈನ್ನ್ನು ನಮ್ಮ ಗ್ರಾಮಕ್ಕೆ ಜೋಡಿಸಿದರೆ ನೀರಿನ ಸಮಸ್ಯೆ ಹೋಗಲಾಡಿಸಬಹುದು.
.ಚಂಪವ್ವ ದೇಸಾಯಿ, ಹಲಗಾ ಗ್ರಾಮಸ್ಥೆ
ಹಿಡಕಲ್ದಿಂದ ಸುವರ್ಣ ವಿಧಾನಸೌಧಕ್ಕೆ ಅಳವಡಿರುವ ನೀರಿನ ಪೈಪ್ಲೈನ್ನ್ನು ಬಸ್ತವಾಡ ಗ್ರಾಮಕ್ಕೆ ಅಳವಡಿಸುವಂತೆ ಹಾಗೂ ರಸ್ತೆ ದುರಸ್ತಿ ಮಾಡುವಂತೆ ಅನೇಕ ಬಾರಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿದರೂ ಯಾವುದೇ ರೀತಿ ಪ್ರಯೋಜನವಾಗಿಲ್ಲ.
. ತವನಪ್ಪ ಪಾಟ್ನೆ, ಬಸ್ತವಾಡ ಗ್ರಾಮಸ್ಥ
ಅಜಿತ ಶಿರಗಾಪುರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ