21ರಂದು ಅಂಬಿಗರ ಚೌಡಯ್ಯ ಜಯಂತಿ ಆಚರಣೆ


Team Udayavani, Jan 11, 2019, 11:43 AM IST

11-january-25.jpg

ಅಥಣಿ: ಇಲ್ಲಿಯ ಮಿನಿ ವಿಧಾನಸೌಧದಲ್ಲಿ ದಿನಾಂಕ ಜ.21ರಂದು ನಿಜಶರಣ ಅಂಬಿಗರ ಚೌಡಯ್ಯ ಅವರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಿದ್ಧತೆಗಾಗಿ ಉಪ ತಹಶೀಲ್ದಾರರಾದ ರಾಜು ಬುರ್ಲಿ ಹಾಗೂ ಬಿರಾದಾರಪಾಟೀಲ ಅವರ ನೇತೃತ್ವದಲ್ಲಿ ಗಂಗಾಮತ(ತಳವಾರ) ಸಮಾಜದ ತಾಲೂಕಿನ ಹಿರಿಯ ಕಿರಿಯ ಮುಖಂಡರ ಸಭೆ ಜರುಗಿತು.

ತಾಲೂಕಾಡಳಿತದಿಂದ ನಿಜಶರಣ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಅರ್ಥಪೂರ್ಣವಾಗಿ ಹಾಗೂ ವಿಜೃಂಭಣೆಯಿಂದ ಸರಕಾರದ ನಿರ್ದೇಶನದ ಪ್ರಕಾರ ಆಚರಿಸಲು ನಿರ್ಣಯಿಸಲಾಯಿತು. ಸಮಾಜದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಹಾಗೂ ಸಾಧಕರನ್ನು ಸನ್ಮಾನಿಸಲು ತೀರ್ಮಾನಿಸಲಾಯಿತು. ಜಯಂತಿಗಾಗಿ ಸರಕಾರದಿಂದ ಗಂಗಾಮತ(ತಳವಾರ) ಸಮಾಜಕ್ಕೆ 25 ಸಾವಿರ ರೂ. ನೀಡಲಾಗುವುದು. ಸರಕಾರ ಕಾರ್ಯಕ್ರಮವನ್ನಾಗಿ ಮಿನಿ ವಿಧಾನಸೌಧದಲ್ಲಿ 9.30ಕ್ಕೆ ಆಚರಿಸಲಾಗುವುದು. ಬಸವೇಶ್ವರ(ಅನಂತಪುರ) ವೃತ್ತದಲ್ಲಿ ಕುಂಭಮೇಳ ಉದ್ಘಾಟನೆ ನೆರವೇರಿಸಲಾಗುವುದು. ಚೌಡಯ್ಯನವರ ಭಾವಚಿತ್ರದೊಂದಿಗೆ ಕುಂಭ ಮೇಳ ಹಲ್ಯಾಳ ಮತ್ತು ಅಂಬೇಡ್ಕರ್‌ ವೃತ್ತದ ಮುಖಾಂತರ ಪಟ್ಟಣದ ಪ್ರಮುಖ ಬಿದಿಗಳಲ್ಲಿ ಹಾಯ್ದು ಶಿವಣಗಿ ಸಾಂಸ್ಕೃತಿಕ ಭವನದಲ್ಲಿ ಸಮಾರೋಪಗೊಂಡು ನಂತರ ಪ್ರಮುಖ ಕಾರ್ಯಕ್ರಮವನ್ನು ಗಣ್ಯರಿಂದ ಉದ್ಘಾಟಿಸಲಾಗುವುದು. ಕಾರಣ ತಾಲೂಕಿನ ಎಲ್ಲ ಸಮಾಜದ ಬಾಂಧವರು ಜಯಂತಿಗೆ ಬಂದು ಯಶಸ್ವಿಗೊಳಿಸುವಂತೆ ಕೋರಿ ಸಭೆಯಲ್ಲಿ ಠರಾವ್‌ ಪಾಸ್‌ ಮಾಡಲಾಯಿತು.

ಈ ವೇಳೆ ಗಂಗಾಮತ ಕೋಳಿ ತಳವಾರ ಸಮಾಜ ಸೇವಾ ಸಂಘದ ಅಧ್ಯಕ್ಷ ರಾಜು ಜಮಖಂಡಿಕರ ಮಾತನಾಡಿ, ನಿಜಶರಣ ಅಂಬಿಗರ ಚೌಡಯ್ಯನವರು ತಮ್ಮ ನೇರ ದಿಟ್ಟ ವಚನಗಳಿಂದ ಸಮಾಜದಲ್ಲಿರುವ ಅನಿಷ್ಟತೆ ಮತ್ತು ಅಂಕುಡೊಂಕುಗಳನ್ನು ತಿದ್ದುವಂತಾ ಕಾರ್ಯವನ್ನು ಮಾಡಿದರು. ಅಸಂಘಟಿತ ಸಮಾಜವನ್ನು ಒಂದುಗೂಡಿಸಲು ಮಹಾನ್‌ ಪುರುಷರ ಹಾಗೂ ನಾಯಕರ ಜಯಂತಿಗಳು ಸಹಕಾರಿಯಾಗುತ್ತವೆ ಎಂದು ತಿಳಿಸಿದರು. ತಹಶೀಲ್ದಾರರಾದ ರಾಜು ಬುರ್ಲಿ ಹಾಗೂ ಎನ್‌.ಎಂ. ಬಿರಾದಾರಪಾಟೀಲ ಮಾತನಾಡಿ, ಯಾವುದೇ ರೀತಿ ತಾರತಮ್ಯ ಮತ್ತು ವಿವಾದವಿಲ್ಲದೆ ಅಂಬಿಗರ ಚೌಡಯ್ಯನವರ ಜಯಂತಿಯನ್ನು ಆಚರಿಸೋಣ. ಸರಕಾರದಿಂದ ಕೇವಲ 25 ಸಾವಿರ ರೂ. ಧನಸಹಾಯ ಒದಗಿಸಲಾಗುವುದು. ಸಮಾಜದ ಬಾಂಧವರು ಇದಕ್ಕಿಂತ ಹೆಚ್ಚಿನ ವಿಜೃಂಭಣೆ ಬೇಕಾದರೆ ತಮ್ಮ ಶಕ್ತಿಗೆ ಅನುಗುಣವಾಗಿ ಆಚರಿಸಕೊಳ್ಳಬಹುದಾಗಿದೆ ಎಂದು ಸ್ಪಷ್ಟಪಡಿಸಿದರು.

ಬಿ.ಎಸ್‌.ಯಾದವಾಡ, ಸಿ.ಜಿ.ಬಿರಾದಾರ, ಸಂಘರ್ಷ ಸಿದ್ದಾರ್ಥ ಸಿಂಗೆ, ಖಲಾಟೆ, ಗ್ರಾಪಂ ಸದಸ್ಯ ಪ್ರಹ್ಲಾದ ಗಸ್ತಿ, ಬಾಪು ಗಸ್ತಿ, ರಾವಸಾಬ ಕಟಗೇರಿ, ಹನುಮಂತ ಕಾಲವೆ, ಶಿವನಗೌಡ ಚುನಾರ, ಸದಾಶಿವ ತಳವಾರ, ಅಣ್ಣಾಪ್ಪ ಸನದಿ, ಸದಾಶಿವ ಕೋಳಿ, ಪ್ರಕಾಶ ಕೋಳಿ, ಗುಳಪ್ಪ ಕೋಳಿ ಸೇರಿದಂತೆ ಇನ್ನಿತರರು ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ತಂತ್ರಜ್ಞಾನದಿಂದ ಮಾನವ ಜೀವನ ಸುಲಭ: ಸ್ಮಾರ್ಟ್‌ ಸಿಟಿ ಅಧಿಕಾರಿ ಶ್ರೀನಿವಾಸ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.