ಸಾವಿರಾರು ರೈಲು ಪ್ರಯಾಣಿಕರ ಜೀವ ಉಳಿಸಿದ ಬೆಳಗಾವಿ ಯುವಕರು
Team Udayavani, Jan 12, 2019, 10:10 AM IST
ಬೆಳಗಾವಿ:ಇಬ್ಬರು ಯುವಕರು ತಮ್ಮ ಜೀವದ ಹಂಗು ತೊರೆದು ರೈಲಿನಲ್ಲಿದ್ದ ಸಾವಿರಾರು ಪ್ರಯಾಣಿಕರನ್ನು ರಕ್ಷಿಸಿರುವ ಘಟನೆ ಬೆಳಗಾವಿಯ ಖಾನಾಪುರ್ ನಲ್ಲಿ ಶುಕ್ರವಾರ ನಡೆದಿದೆ.
ಘಟನೆ ವಿವರ:
ಕೊಲ್ಲಾಪುರ-ಹೈದರಾಬಾದ್ ರೈಲು ಹುಬ್ಬಳ್ಳಿ ಕಡೆ ಆಗಮಿಸುತ್ತಿತ್ತು. ಈ ಸಂದರ್ಭದಲ್ಲಿ ಬೆಳಗಾವಿಯ ಖಾನಾಪುರ ರೈಲ್ವೆ ಹಳಿ ಮೇಲೆ ಏಕಾಏಕಿ ಮರ ಬಿದ್ದಿತ್ತು. ಏತನ್ಮಧ್ಯೆ ರಿಯಾಜ್ ಮತ್ತು ತೌಫಿಕ್ ಬೈಕ್ ನಲ್ಲಿ ಹೋಗುತ್ತಿದ್ದಾಗ, ರೈಲ್ವೆ ಹಳಿ ಮೇಲೆ ಮರ ಬಿದ್ದಿರುವುದನ್ನು ಗಮನಿಸಿ, ಅಪಾಯವನ್ನು ಗ್ರಹಿಸಿದ್ದರು.
ತಕ್ಷಣವೇ ಇಬ್ಬರು ಯುವಕರು ತಮ್ಮ ಅಂಗಿಯನ್ನು ಬಿಚ್ಚಿ ರೈಲ್ವೆ ಹಳಿ ಸಮೀಪದಿಂದ ಓಡುತ್ತಾ ಅಪಾಯವಿದೆ ಎಂಬುದನ್ನು ಸೂಚಿಸಿದ್ದರು. ಇದನ್ನು ಗಮನಿಸಿದ ರೈಲು ಚಾಲಕ ಬ್ರೇಕ್ ಹಾಕಿದ್ದರಿಂದ ಮರದ ಸಮೀಪ ರೈಲು ಬಂದು ನಿಲ್ಲುವ ಮೂಲಕ ಭಾರೀ ದುರಂತವೊಂದು ತಪ್ಪಿದಂತಾಗಿತ್ತು.
ರೈಲಿನಲ್ಲಿ ಸಾವಿರಾರು ಮಂದಿ ಪ್ರಯಾಣಿಕರಿದ್ದಿದ್ದು, ಇಬ್ಬರು ಯುವಕರ ಸಮಯ ಪ್ರಜ್ಞೆಯಿಂದಾಗಿ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಿಯಜ್ ಮತ್ತು ತೌಫಿಕ್ ಕೆಲಸದ ಬಗ್ಗೆ ರೈಲ್ವೆ ಅಧಿಕಾರಿಗಳು ಶ್ಲಾಘನೆ ವ್ಯಕ್ತಪಡಿಸಿದ್ದಾರೆ ಎಂದು ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
Liquor: ಮದ್ಯ ಸಾಗಿಸುವ ವಾಹನ ಪಲ್ಟಿಯಾಗಿ ನೂರಾರು ಬಾಕ್ಸ್ ಚೆಲ್ಲಾಪಿಲ್ಲಿ
Belagavi; ಕಾಂಗ್ರೆಸ್ ನವರು ಭಯದಿಂದ ಈಗ ಕೇಸರಿ ಧ್ವಜ ಹಿಡಿದಿದ್ದಾರೆ: ರವಿಕುಮಾರ್ ಟೀಕೆ
Shivaraj Tangadagi ಹೇಳಿಕೆ ಅತಿರೇಕದ ಪರಮಾವಧಿ: ಯಡಿಯೂರಪ್ಪ ಆಕ್ರೋಶ
MUST WATCH
ಹೊಸ ಸೇರ್ಪಡೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!